ಮೈಸೂರು

ತ್ರೀವೇಣಿ ಸಂಗಮದಲ್ಲಿ ಕಾವೇರಿ, ಕಪಿಲೆಯ ಅರ್ಭಟ…

ತಿ.ನರಸೀಪುರ : ಕೇರಳದ ವಯನಾಡು ಮತ್ತು ಕೊಡಗು ಭಾಗದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಗುತ್ತಿದ್ದು, ಕೆಆರ್‌ಎಸ್ ಜಲಾಶಯದಿಂದಲೂ ಹೆಚ್ಚಿನ ನೀರು ಹರಿಸುತ್ತಿರುವುದರಿಂದ ಪಟ್ಟಣದ ತಿರುಮಕೂಡಲಿನ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನ, ಶ್ರೀ ಗುಂಜಾ ನರಸಿಂಹ ಸ್ವಾಮಿ ಹಾಗೂ ಶ್ರೀ ಭಿಕ್ಷೇಶ್ವರ ದೇವಾಲಯಗಳ ಸಮೀಪ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿ ತುಂಬಿ ಹರಿಯುತ್ತಿದೆ.

ತಾಲ್ಲೂಕಿನಲ್ಲಿ ಯಾವುದೇ ಸಮಸ್ಯೆ ಉಂಟಾಗಿಲ್ಲ. ಕಬಿನಿ ಹಾಗೂ ಕಾವೇರಿ ಜಲಾಶಯಗಳಿಂದ ಒಟ್ಟು 1.25 ಲಕ್ಷ ಕ್ಯೂಸೆಕ್ಸ್ ನೀರು ನದಿಗೆ ಹರಿದು ಬರುತ್ತಿದ್ದು, ಇನ್ನೂ ಹೆಚ್ಚಿನ ನೀರನ್ನು ನದಿಗೆ ಬಿಟ್ಟರೆ ಸಮಸ್ಯೆ ಆಗುವ ಸಂಭವ ಇದೆ.

ಈ ಕುರಿತು ಆಂದೋಲನದೊಂದಿಗೆ ಪ್ರತಿಕ್ರಿಯಿಸಿದ ತಿ.ನರಸೀಪುರ ತಹಸಿಲ್ದಾರ್‌ ಸುರೇಶಾಚಾರ್‌, ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ 1.25 ಲಕ್ಷ ಕ್ಯೂಸೆಕ್ಸ್ ನೀರು ಬಿಡಲಾಗಿದ್ದು, ತಾಲ್ಲೂಕಿನ ಹೆಮ್ಮಿಗೆ ತೂಗು ಸೇತುವೆ ಮೇಲೆ ಹರಿಯಲು 3-4 ಅಡಿಗಳಷ್ಟೇ ಬಾಕಿ ಇದೆ. ಇದಲ್ಲದೆ ಮಾಲಂಗಿ ಗ್ರಾಮಕ್ಕೆ ಯಾವುದೇ ಸಮಸ್ಯೆಯಾಗಿಲ್ಲ. ಜಮೀನುಗಳು ಸಹ ಮುಳುಗಡೆಯಾಗಿರುವ ಬಗ್ಗೆ ಮಾಹಿತಿ ಇಲ್ಲ. 1.50 ಲಕ್ಷ ಕ್ಯೂಸೆಕ್ಸ್‌ಗೂ ಹೆಚ್ಚು ನೀರು ಬಂದರೆ ಜಮೀನುಗಳು ಹಾಗೂ ಮಾಲಂಗಿ, ಹೆಮ್ಮಿಗೆ ಸೇತುವೆ ಮೇಲೆ ನೀರು ಹರಿಯಲು ಆರಂಭಿಸುತ್ತದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

5 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

5 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

5 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

5 hours ago

ತನ್ನನ್ನು ತಾನೇ ಚಿವುಟಿ ಎಚ್ಚರಿಸಿದ್ದ ನೆಹರೂ

ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…

5 hours ago