ಮೈಸೂರು

ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪಬೇಕು : ಸಚಿವ ಮಹದೇವಪ್ಪ

ಮೈಸೂರು: ನಾವೆಲ್ಲರೂ ಒಂದೇ ಎಂದು ಜಾಗೃತಿ ಮೂಡಿಸುವ ನಮ್ಮ ಭಾರತದ ಸಂವಿಧಾನ ಪೀಠಿಕೆ ಪ್ರತಿ ಮನೆ ಮನೆಗೆ ತಲುಪಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಮಹಾ ನಗರ ಪಾಲಿಕೆ ವತಿಯಿಂದ ನಗರದ ಪುರಭವನ ಆವರಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಪೀಠಿಕೆ ಶಿಲಾಫಲಕ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ನಾವು ಭಾರತೀಯರು, ಭಾರತದ ಮೂಲ ನಿವಾಸಿಗಳು ಎಂಬುದನ್ನು ಅರಿವು ಮೂಡಿಸಲು ಸಂವಿಧಾನ ಪೀಠಿಕೆ ಅಗತ್ಯ ಹಾಗಾಗಿ ನಾನು ಸಚಿವನಾದ ಬಳಿಕ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪೀಠಿಕೆ ಓದಿಸಲು ಪ್ರಾರಂಭಿಸಿದೆ. ಅದೇ ರೀತಿ ಇಂದು ಮೈಸೂರು ನಗರದ ಪ್ರಮುಖ ಸ್ಥಳದಲ್ಲಿ ಪಾಲಿಕೆ ವತಿಯಿಂದ ಬೃಹತ್ ಸಂವಿಧಾನ ಪೀಠಿಕೆ ಶಿಲಾಫಲಕ ನಿರ್ಮಿಸಲಾಗಿದೆ ಇದು ಒಳ್ಳೆಯ ಬೆಳವಣಿಗೆ ಎಂದು ಪ್ರಶಂಸಿಸಿದರು.

ಇಂದು ದೇಶದಲ್ಲಿ ಸಂವಿಧಾನ ಮರೆಮಾಚುವ ಕೆಲಸ ನಡೆಯುತ್ತಿದೆ, ಆದರೆ ಅದು ಸಾಧ್ಯವಿಲ್ಲ. ಹೀಗಾಗಿ ದಲಿತರು ಅಸ್ಪೃಶ್ಯರು ಒಗ್ಗಟ್ಟಾಗಬೇಕು ಶಿಕ್ಷಣ ಸಂಘಟನೆ ಹೋರಾಟದ ಮೂಲಕ ಅಂಬೇಡ್ಕರ್ ವಾದ ಗಟ್ಟಿಗೊಳಿಸಬೇಕು, ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪಿದಾಗ ಮಾತ್ರ ಭಾರತೀಯರಾಗಿ ನಾವೆಲ್ಲಾ ಒಂದೇ ಎಂದು ಅರಿತು ಬಾಳಬಹುದು ಎಂದು ಹೇಳಿದರು.

ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿಗಳು ಮಾತನಾಡಿ, ಸಾಂಸ್ಕೃತಿಕ ನಗರದಲ್ಲಿ ಸಂವಿಧಾನ ಪೀಠಿಕೆ ಅಳವಡಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಏಕೆಂದರೆ ಸರ್ವ ಧರ್ಮ ಸಮಭಾವ ಈ ಸಂವಿಧಾನ ಪೀಠಿಕೆಯಲ್ಲಿದೆ, ಸಂವಿಧಾನದ ಪೀಠಿಕೆ ಈ ದೇಶದ ರಕ್ಷಾ ಕವಚ ಇದಕ್ಕಾಗಿ ಎಲ್ಲಾ ಶಾಲಾ ಕಾಲೇಜುಗಳು ಹಾಸ್ಟೆಲ್ ಗಳಲ್ಲಿ ಸಂವಿಧಾನ ಪೀಠಿಕೆ ಹಾಕಲಾಗಿದೆ ಎಂದು ಹೇಳಿದರು.

ಭಾರತ ಒಂದು ಭಾರತೀಯರೆಲ್ಲ ಬಂದು ಎಂಬ ಸಂದೇಶ ಸಾರುವ ಸಮಾನತೆಯ ಸಂಕೇತ ಕೊಟ್ಟವರು ಅಂಬೇಡ್ಕರ್ ಅವರು ಇಂತಹ ಮಹಾನ್ ನಾಯಕ ಕೊಟ್ಟ ಈ ಪೀಠಿಕೆ ಯನ್ನು ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಹಾಕಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಿಧಾನ ಪರಿಷತ್ ಸದಸ್ಯರಾದ ಶಿವಕುಮಾರ್, ಮಂಜೇಗೌಡ, ಗ್ಯಾರೆಂಟಿ ಯೋಜನೆ ಜಿಲ್ಲಾಧ್ಯಕ್ಷರಾದ ಅರುಣ್ ಕುಮಾರ್, ಮಾಜಿ ಮೇಯರ್ ಪುರುಷೋತ್ತಮ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಇದ್ದರು.

ಆಂದೋಲನ ಡೆಸ್ಕ್

Recent Posts

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

22 mins ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

4 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

4 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

4 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

4 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

4 hours ago