ಮೈಸೂರು

ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪಬೇಕು : ಸಚಿವ ಮಹದೇವಪ್ಪ

ಮೈಸೂರು: ನಾವೆಲ್ಲರೂ ಒಂದೇ ಎಂದು ಜಾಗೃತಿ ಮೂಡಿಸುವ ನಮ್ಮ ಭಾರತದ ಸಂವಿಧಾನ ಪೀಠಿಕೆ ಪ್ರತಿ ಮನೆ ಮನೆಗೆ ತಲುಪಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಅವರು ಹೇಳಿದರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಮಹಾ ನಗರ ಪಾಲಿಕೆ ವತಿಯಿಂದ ನಗರದ ಪುರಭವನ ಆವರಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಪೀಠಿಕೆ ಶಿಲಾಫಲಕ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ನಾವು ಭಾರತೀಯರು, ಭಾರತದ ಮೂಲ ನಿವಾಸಿಗಳು ಎಂಬುದನ್ನು ಅರಿವು ಮೂಡಿಸಲು ಸಂವಿಧಾನ ಪೀಠಿಕೆ ಅಗತ್ಯ ಹಾಗಾಗಿ ನಾನು ಸಚಿವನಾದ ಬಳಿಕ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪೀಠಿಕೆ ಓದಿಸಲು ಪ್ರಾರಂಭಿಸಿದೆ. ಅದೇ ರೀತಿ ಇಂದು ಮೈಸೂರು ನಗರದ ಪ್ರಮುಖ ಸ್ಥಳದಲ್ಲಿ ಪಾಲಿಕೆ ವತಿಯಿಂದ ಬೃಹತ್ ಸಂವಿಧಾನ ಪೀಠಿಕೆ ಶಿಲಾಫಲಕ ನಿರ್ಮಿಸಲಾಗಿದೆ ಇದು ಒಳ್ಳೆಯ ಬೆಳವಣಿಗೆ ಎಂದು ಪ್ರಶಂಸಿಸಿದರು.

ಇಂದು ದೇಶದಲ್ಲಿ ಸಂವಿಧಾನ ಮರೆಮಾಚುವ ಕೆಲಸ ನಡೆಯುತ್ತಿದೆ, ಆದರೆ ಅದು ಸಾಧ್ಯವಿಲ್ಲ. ಹೀಗಾಗಿ ದಲಿತರು ಅಸ್ಪೃಶ್ಯರು ಒಗ್ಗಟ್ಟಾಗಬೇಕು ಶಿಕ್ಷಣ ಸಂಘಟನೆ ಹೋರಾಟದ ಮೂಲಕ ಅಂಬೇಡ್ಕರ್ ವಾದ ಗಟ್ಟಿಗೊಳಿಸಬೇಕು, ಮನೆ ಮನೆಗೂ ಸಂವಿಧಾನ ಪೀಠಿಕೆ ತಲುಪಿದಾಗ ಮಾತ್ರ ಭಾರತೀಯರಾಗಿ ನಾವೆಲ್ಲಾ ಒಂದೇ ಎಂದು ಅರಿತು ಬಾಳಬಹುದು ಎಂದು ಹೇಳಿದರು.

ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿಗಳು ಮಾತನಾಡಿ, ಸಾಂಸ್ಕೃತಿಕ ನಗರದಲ್ಲಿ ಸಂವಿಧಾನ ಪೀಠಿಕೆ ಅಳವಡಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಏಕೆಂದರೆ ಸರ್ವ ಧರ್ಮ ಸಮಭಾವ ಈ ಸಂವಿಧಾನ ಪೀಠಿಕೆಯಲ್ಲಿದೆ, ಸಂವಿಧಾನದ ಪೀಠಿಕೆ ಈ ದೇಶದ ರಕ್ಷಾ ಕವಚ ಇದಕ್ಕಾಗಿ ಎಲ್ಲಾ ಶಾಲಾ ಕಾಲೇಜುಗಳು ಹಾಸ್ಟೆಲ್ ಗಳಲ್ಲಿ ಸಂವಿಧಾನ ಪೀಠಿಕೆ ಹಾಕಲಾಗಿದೆ ಎಂದು ಹೇಳಿದರು.

ಭಾರತ ಒಂದು ಭಾರತೀಯರೆಲ್ಲ ಬಂದು ಎಂಬ ಸಂದೇಶ ಸಾರುವ ಸಮಾನತೆಯ ಸಂಕೇತ ಕೊಟ್ಟವರು ಅಂಬೇಡ್ಕರ್ ಅವರು ಇಂತಹ ಮಹಾನ್ ನಾಯಕ ಕೊಟ್ಟ ಈ ಪೀಠಿಕೆ ಯನ್ನು ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ಹಾಕಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆ ರಾಜ್ಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ವಿಧಾನ ಪರಿಷತ್ ಸದಸ್ಯರಾದ ಶಿವಕುಮಾರ್, ಮಂಜೇಗೌಡ, ಗ್ಯಾರೆಂಟಿ ಯೋಜನೆ ಜಿಲ್ಲಾಧ್ಯಕ್ಷರಾದ ಅರುಣ್ ಕುಮಾರ್, ಮಾಜಿ ಮೇಯರ್ ಪುರುಷೋತ್ತಮ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಇದ್ದರು.

ಆಂದೋಲನ ಡೆಸ್ಕ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

4 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

4 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

5 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

5 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

5 hours ago