ಮೈಸೂರು

ಎಲೆತೋಟದಲ್ಲಿದ್ದ ಮೊಸಳೆ ರಾಮಾನುಜ ರಸ್ತೆಯ ಕೆರೆಗೆ ಬಂತು!

ಮೈಸೂರು : ಜಿಣುಗುಟ್ಟುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಸಾಕಷ್ಟು ಕಾಲುವೆಗಳು ತುಂಬಿ ಹರಿಯುತ್ತಿವೆ. ಕಳೆದ ಅಕ್ಷೋಬರ್‌ ನಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಜೆಎಲ್‌ ಬಿ ರಸ್ತೆಯ ಚಾಮುಂಡಿಪುರಂ ಸಮೀಪದ  ರಾಜಕಾಲುವೆಯಲ್ಲಿ  ಹರಿದುಬಂದ ನೀರಿನೊಟ್ಟಿಗೆ ಮೊಸಳೆಯೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತ್ತು. ಮೂರ್ನಾಲ್ಕು ಗಂಟೆಗಳ ತನಕ ಈ ಮೊಸಳೆ ಇಲ್ಲಿಯೇ ಇತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಬರುವಷ್ಟರಲ್ಲಿ ಅದು ಪೊದೆಗಳ ಮಧ್ಯೆ ಮರೆಯಾಗಿದ್ದರಿಂದ ಸೆರೆ ಹಿಡಿಯಲು ಸಾಧ್ಯವಾಗಿರಲಿಲ್ಲ. ಅಕ್ಟೋಬರ್‌ 29 ರಂದು ಮೊಸಳೆ ನೀರಿನಿಂದ ಮೇಲೆ ಬಂದು ಸೀವೇಜ್‌ ಫಾರಂ ಬಳಿಯ ಕಾಲ ಸಂಕದ ಪಕ್ಕದಲ್ಲಿ ವಿಶ್ರಾಂತಿ ಪಡೆಯುತ್ತಿತ್ತು. ಜನರ ಸದ್ದು ಗದ್ದಲದ ನಡುವೆ ಸಾಕಷ್ಟು ಕಾಲ ಮೊಸಳೆ ಈ ಜಾಗ ಬಿಟ್ಟು ಕದಲಿರಲಿಲ್ಲ. ಆದರೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೊಸಳೆಯನ್ನು ಸೆರೆ ಹಿಡಿಯಲು ಮತ್ತೆ ವಿಫಲವಾದರು ಪರಿಣಾಮ ಇಂದು ಬೆಳಿಗ್ಗೆ ನಗರದ ರಾಮಾನುಜ ರಸ್ತೆಯ  9ನೇ ಕ್ರಾಸ್‌ ಬಳಿ ಇರುವ ಕೆರೆಯ ದಡದಲ್ಲಿ ಮೊಸಳೆ ಬಾಯಿಗೆ ಹಸು ಬಲಿಯಾಗಿರುವ ಘಟನೆ ನಡೆದಿದ್ದು ಅದೇ ಮೊಸಳೆಯೇ ಹಸುವನ್ನು ತಿಂದು ಹಾಕಿದೆಯೆಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿ ನೀರನ್ನು ಕುಡಿಯಲು ಹೋದ ಹಸುವನ್ನು ಎಳೆದೊಯ್ದು ಮೊಸಳೆ ತಿಂದು ಹಾಕಿದೆ ಎನ್ನುತ್ತಿದ್ದಾರೆ. ಆದರೆ ಸಾವಿಗೀಡಾದ ಹಸುವಿನ ಮಾಲೀಕರು ಹಸು ಸಾವಿಗೆ ಮೊಸಳೆಯೇ ಕಾರಣ ಇಂದು ಬೆಳಿಗ್ಗೆ ಮೇಯಲು ಬಿಟ್ಟಿದ್ದ ಹಸುವನ್ನು ಮೊಸಳೆಯೇ ಕೆರೆಯ ಒಳಗೆ ಎಳೆದುಕೊಂಡು ಹೋಗಿರುವುದನ್ನು ನಾವೇ ನೋಡಿದ್ದೇವೆ ಹಸು ಸಾವಿಗೆ ಮೊಸಳೆಯೇ ಕಾರಣ ಎಂದು ಹೇಳುತ್ತಿದ್ದಾರೆ.  ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೊಸಳೆಯನ್ನು ಸೆರೆಹಿಡಿಯಲು ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಆರ್‌ ಎಫ್‌ ಓ ಸುರೇಂದ್ರ, ಡಿ ಆರ್‌ ಎಫ್‌ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿದಂತೆ ಒಟ್ಟು 6 ಜನ ಸಿಬ್ಬಂದಿಗಳು ಮೊಸಳೆಯನ್ನು ಹಿಡಿಯುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಬಗ್ಗೆ ಆಂದೋಲನದೊಟ್ಟಿಗೆ ಮಾತನಾಡಿ ಅವರು ಮೊಸಳೆಯನ್ನು ಹಿಡಿಯಲು ಬೆಳಿಗ್ಗೆ 11.30 ರಿಂದ  ಕಾರ್ಯಾಚರಣೆಯ ಆರಂಭವಾಗಿದ್ದು, ಕೆರೆಯಲ್ಲಿರುವ ನೀರನ್ನು ಮೋಟಾರ್‌ ಬಳಸಿ  ಹೊರೆಚೆಲ್ಲಿಸಿ ತದ ನಂತರ ಮೊಸಳೆಯನ್ನು ಸೆರೆ ಹಿಡಿಯಲಾಗುವುದು ಎಂದರು. ಇವತ್ತಿನ ಕಾರ್ಯಚರಣೆಯಲ್ಲಿ ಮೊಸಳೆ ಸಿಗದ ಕಾರಣ ನಾಳೆ ಬೆಳಿಗ್ಗೆ ಮತ್ತೆ ಕಾರ್ಯಚರಣೆ ಆರಂಭಿಸುತ್ತೇವೆ ಎಂದು ಅರಣ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

andolana

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

8 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

19 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

37 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

1 hour ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago