ಮೈಸೂರು

ಎಲೆತೋಟದಲ್ಲಿದ್ದ ಮೊಸಳೆ ರಾಮಾನುಜ ರಸ್ತೆಯ ಕೆರೆಗೆ ಬಂತು!

ಮೈಸೂರು : ಜಿಣುಗುಟ್ಟುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಸಾಕಷ್ಟು ಕಾಲುವೆಗಳು ತುಂಬಿ ಹರಿಯುತ್ತಿವೆ. ಕಳೆದ ಅಕ್ಷೋಬರ್‌ ನಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಜೆಎಲ್‌ ಬಿ ರಸ್ತೆಯ ಚಾಮುಂಡಿಪುರಂ ಸಮೀಪದ  ರಾಜಕಾಲುವೆಯಲ್ಲಿ  ಹರಿದುಬಂದ ನೀರಿನೊಟ್ಟಿಗೆ ಮೊಸಳೆಯೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತ್ತು. ಮೂರ್ನಾಲ್ಕು ಗಂಟೆಗಳ ತನಕ ಈ ಮೊಸಳೆ ಇಲ್ಲಿಯೇ ಇತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಬರುವಷ್ಟರಲ್ಲಿ ಅದು ಪೊದೆಗಳ ಮಧ್ಯೆ ಮರೆಯಾಗಿದ್ದರಿಂದ ಸೆರೆ ಹಿಡಿಯಲು ಸಾಧ್ಯವಾಗಿರಲಿಲ್ಲ. ಅಕ್ಟೋಬರ್‌ 29 ರಂದು ಮೊಸಳೆ ನೀರಿನಿಂದ ಮೇಲೆ ಬಂದು ಸೀವೇಜ್‌ ಫಾರಂ ಬಳಿಯ ಕಾಲ ಸಂಕದ ಪಕ್ಕದಲ್ಲಿ ವಿಶ್ರಾಂತಿ ಪಡೆಯುತ್ತಿತ್ತು. ಜನರ ಸದ್ದು ಗದ್ದಲದ ನಡುವೆ ಸಾಕಷ್ಟು ಕಾಲ ಮೊಸಳೆ ಈ ಜಾಗ ಬಿಟ್ಟು ಕದಲಿರಲಿಲ್ಲ. ಆದರೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೊಸಳೆಯನ್ನು ಸೆರೆ ಹಿಡಿಯಲು ಮತ್ತೆ ವಿಫಲವಾದರು ಪರಿಣಾಮ ಇಂದು ಬೆಳಿಗ್ಗೆ ನಗರದ ರಾಮಾನುಜ ರಸ್ತೆಯ  9ನೇ ಕ್ರಾಸ್‌ ಬಳಿ ಇರುವ ಕೆರೆಯ ದಡದಲ್ಲಿ ಮೊಸಳೆ ಬಾಯಿಗೆ ಹಸು ಬಲಿಯಾಗಿರುವ ಘಟನೆ ನಡೆದಿದ್ದು ಅದೇ ಮೊಸಳೆಯೇ ಹಸುವನ್ನು ತಿಂದು ಹಾಕಿದೆಯೆಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿ ನೀರನ್ನು ಕುಡಿಯಲು ಹೋದ ಹಸುವನ್ನು ಎಳೆದೊಯ್ದು ಮೊಸಳೆ ತಿಂದು ಹಾಕಿದೆ ಎನ್ನುತ್ತಿದ್ದಾರೆ. ಆದರೆ ಸಾವಿಗೀಡಾದ ಹಸುವಿನ ಮಾಲೀಕರು ಹಸು ಸಾವಿಗೆ ಮೊಸಳೆಯೇ ಕಾರಣ ಇಂದು ಬೆಳಿಗ್ಗೆ ಮೇಯಲು ಬಿಟ್ಟಿದ್ದ ಹಸುವನ್ನು ಮೊಸಳೆಯೇ ಕೆರೆಯ ಒಳಗೆ ಎಳೆದುಕೊಂಡು ಹೋಗಿರುವುದನ್ನು ನಾವೇ ನೋಡಿದ್ದೇವೆ ಹಸು ಸಾವಿಗೆ ಮೊಸಳೆಯೇ ಕಾರಣ ಎಂದು ಹೇಳುತ್ತಿದ್ದಾರೆ.  ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೊಸಳೆಯನ್ನು ಸೆರೆಹಿಡಿಯಲು ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಆರ್‌ ಎಫ್‌ ಓ ಸುರೇಂದ್ರ, ಡಿ ಆರ್‌ ಎಫ್‌ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿದಂತೆ ಒಟ್ಟು 6 ಜನ ಸಿಬ್ಬಂದಿಗಳು ಮೊಸಳೆಯನ್ನು ಹಿಡಿಯುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಬಗ್ಗೆ ಆಂದೋಲನದೊಟ್ಟಿಗೆ ಮಾತನಾಡಿ ಅವರು ಮೊಸಳೆಯನ್ನು ಹಿಡಿಯಲು ಬೆಳಿಗ್ಗೆ 11.30 ರಿಂದ  ಕಾರ್ಯಾಚರಣೆಯ ಆರಂಭವಾಗಿದ್ದು, ಕೆರೆಯಲ್ಲಿರುವ ನೀರನ್ನು ಮೋಟಾರ್‌ ಬಳಸಿ  ಹೊರೆಚೆಲ್ಲಿಸಿ ತದ ನಂತರ ಮೊಸಳೆಯನ್ನು ಸೆರೆ ಹಿಡಿಯಲಾಗುವುದು ಎಂದರು. ಇವತ್ತಿನ ಕಾರ್ಯಚರಣೆಯಲ್ಲಿ ಮೊಸಳೆ ಸಿಗದ ಕಾರಣ ನಾಳೆ ಬೆಳಿಗ್ಗೆ ಮತ್ತೆ ಕಾರ್ಯಚರಣೆ ಆರಂಭಿಸುತ್ತೇವೆ ಎಂದು ಅರಣ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

andolana

Recent Posts

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

13 mins ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

30 mins ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

39 mins ago

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ

ವಾಷಿಂಗ್ಟನ್:‌ ಇರಾನ್‌ ಜೊತೆ ಕದನ ವಿರಾಮ್‌ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…

1 hour ago

ಓದುಗರ ಪತ್ರ: ನಗುಮೊಗದ ಮೌನ ಸಾಧಕ!

ದಣಿವರಿಯದೆ ದುಡಿದಿರಿ ಆರೋಗ್ಯ ಶಿಕ್ಷಣ ಕ್ಷೇತ್ರಗಳಲಿ ಉಸಿರಾಗಿತ್ತು ನಿಮಗೆ ಸಮಾಜಸೇವೆ! ಧಿಕ್ಕರಿಸಿದಿರಿ ಮೌಢ್ಯಕಂದಾಚಾರಗಳ ಪ್ರೀತಿಸಿದಿರಿ ಎಲ್ಲರನೂ ಸಮಭಾವದಲಿ! ಮನಮಾಗಿದ ನಗುಮೊಗದ…

2 hours ago

ಓದುಗರ ಪತ್ರ: ಮಂಗನ ಕೈಗೆ ……….

ನಾರ್ತ್ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ ( ನಾಟೋ) ದೇಶಗಳ ಗುಂಪಿಗೆ ಸೇರಿದ ಕೆನಡಾ, ಆಸ್ಟ್ರೇಲಿಯಾ, ಬ್ರಿಟನ್ ಮುಂತಾದ ದೇಶಗಳು ಇರಾನಿನ…

2 hours ago