ಮೈಸೂರು

ಎಲೆತೋಟದಲ್ಲಿದ್ದ ಮೊಸಳೆ ರಾಮಾನುಜ ರಸ್ತೆಯ ಕೆರೆಗೆ ಬಂತು!

ಮೈಸೂರು : ಜಿಣುಗುಟ್ಟುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಸಾಕಷ್ಟು ಕಾಲುವೆಗಳು ತುಂಬಿ ಹರಿಯುತ್ತಿವೆ. ಕಳೆದ ಅಕ್ಷೋಬರ್‌ ನಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಜೆಎಲ್‌ ಬಿ ರಸ್ತೆಯ ಚಾಮುಂಡಿಪುರಂ ಸಮೀಪದ  ರಾಜಕಾಲುವೆಯಲ್ಲಿ  ಹರಿದುಬಂದ ನೀರಿನೊಟ್ಟಿಗೆ ಮೊಸಳೆಯೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತ್ತು. ಮೂರ್ನಾಲ್ಕು ಗಂಟೆಗಳ ತನಕ ಈ ಮೊಸಳೆ ಇಲ್ಲಿಯೇ ಇತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಬರುವಷ್ಟರಲ್ಲಿ ಅದು ಪೊದೆಗಳ ಮಧ್ಯೆ ಮರೆಯಾಗಿದ್ದರಿಂದ ಸೆರೆ ಹಿಡಿಯಲು ಸಾಧ್ಯವಾಗಿರಲಿಲ್ಲ. ಅಕ್ಟೋಬರ್‌ 29 ರಂದು ಮೊಸಳೆ ನೀರಿನಿಂದ ಮೇಲೆ ಬಂದು ಸೀವೇಜ್‌ ಫಾರಂ ಬಳಿಯ ಕಾಲ ಸಂಕದ ಪಕ್ಕದಲ್ಲಿ ವಿಶ್ರಾಂತಿ ಪಡೆಯುತ್ತಿತ್ತು. ಜನರ ಸದ್ದು ಗದ್ದಲದ ನಡುವೆ ಸಾಕಷ್ಟು ಕಾಲ ಮೊಸಳೆ ಈ ಜಾಗ ಬಿಟ್ಟು ಕದಲಿರಲಿಲ್ಲ. ಆದರೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೊಸಳೆಯನ್ನು ಸೆರೆ ಹಿಡಿಯಲು ಮತ್ತೆ ವಿಫಲವಾದರು ಪರಿಣಾಮ ಇಂದು ಬೆಳಿಗ್ಗೆ ನಗರದ ರಾಮಾನುಜ ರಸ್ತೆಯ  9ನೇ ಕ್ರಾಸ್‌ ಬಳಿ ಇರುವ ಕೆರೆಯ ದಡದಲ್ಲಿ ಮೊಸಳೆ ಬಾಯಿಗೆ ಹಸು ಬಲಿಯಾಗಿರುವ ಘಟನೆ ನಡೆದಿದ್ದು ಅದೇ ಮೊಸಳೆಯೇ ಹಸುವನ್ನು ತಿಂದು ಹಾಕಿದೆಯೆಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿ ನೀರನ್ನು ಕುಡಿಯಲು ಹೋದ ಹಸುವನ್ನು ಎಳೆದೊಯ್ದು ಮೊಸಳೆ ತಿಂದು ಹಾಕಿದೆ ಎನ್ನುತ್ತಿದ್ದಾರೆ. ಆದರೆ ಸಾವಿಗೀಡಾದ ಹಸುವಿನ ಮಾಲೀಕರು ಹಸು ಸಾವಿಗೆ ಮೊಸಳೆಯೇ ಕಾರಣ ಇಂದು ಬೆಳಿಗ್ಗೆ ಮೇಯಲು ಬಿಟ್ಟಿದ್ದ ಹಸುವನ್ನು ಮೊಸಳೆಯೇ ಕೆರೆಯ ಒಳಗೆ ಎಳೆದುಕೊಂಡು ಹೋಗಿರುವುದನ್ನು ನಾವೇ ನೋಡಿದ್ದೇವೆ ಹಸು ಸಾವಿಗೆ ಮೊಸಳೆಯೇ ಕಾರಣ ಎಂದು ಹೇಳುತ್ತಿದ್ದಾರೆ.  ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೊಸಳೆಯನ್ನು ಸೆರೆಹಿಡಿಯಲು ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಆರ್‌ ಎಫ್‌ ಓ ಸುರೇಂದ್ರ, ಡಿ ಆರ್‌ ಎಫ್‌ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿದಂತೆ ಒಟ್ಟು 6 ಜನ ಸಿಬ್ಬಂದಿಗಳು ಮೊಸಳೆಯನ್ನು ಹಿಡಿಯುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಬಗ್ಗೆ ಆಂದೋಲನದೊಟ್ಟಿಗೆ ಮಾತನಾಡಿ ಅವರು ಮೊಸಳೆಯನ್ನು ಹಿಡಿಯಲು ಬೆಳಿಗ್ಗೆ 11.30 ರಿಂದ  ಕಾರ್ಯಾಚರಣೆಯ ಆರಂಭವಾಗಿದ್ದು, ಕೆರೆಯಲ್ಲಿರುವ ನೀರನ್ನು ಮೋಟಾರ್‌ ಬಳಸಿ  ಹೊರೆಚೆಲ್ಲಿಸಿ ತದ ನಂತರ ಮೊಸಳೆಯನ್ನು ಸೆರೆ ಹಿಡಿಯಲಾಗುವುದು ಎಂದರು. ಇವತ್ತಿನ ಕಾರ್ಯಚರಣೆಯಲ್ಲಿ ಮೊಸಳೆ ಸಿಗದ ಕಾರಣ ನಾಳೆ ಬೆಳಿಗ್ಗೆ ಮತ್ತೆ ಕಾರ್ಯಚರಣೆ ಆರಂಭಿಸುತ್ತೇವೆ ಎಂದು ಅರಣ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

7 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

7 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

7 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

7 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

7 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago