ಮೈಸೂರು : ಜಿಣುಗುಟ್ಟುತ್ತಿರುವ ಮಳೆಯಿಂದಾಗಿ ನಗರದಾದ್ಯಂತ ಸಾಕಷ್ಟು ಕಾಲುವೆಗಳು ತುಂಬಿ ಹರಿಯುತ್ತಿವೆ. ಕಳೆದ ಅಕ್ಷೋಬರ್ ನಲ್ಲಿ ಸುರಿದ ನಿರಂತರ ಮಳೆಯಿಂದಾಗಿ ಜೆಎಲ್ ಬಿ ರಸ್ತೆಯ ಚಾಮುಂಡಿಪುರಂ ಸಮೀಪದ ರಾಜಕಾಲುವೆಯಲ್ಲಿ ಹರಿದುಬಂದ ನೀರಿನೊಟ್ಟಿಗೆ ಮೊಸಳೆಯೊಂದು ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತ್ತು. ಮೂರ್ನಾಲ್ಕು ಗಂಟೆಗಳ ತನಕ ಈ ಮೊಸಳೆ ಇಲ್ಲಿಯೇ ಇತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಬರುವಷ್ಟರಲ್ಲಿ ಅದು ಪೊದೆಗಳ ಮಧ್ಯೆ ಮರೆಯಾಗಿದ್ದರಿಂದ ಸೆರೆ ಹಿಡಿಯಲು ಸಾಧ್ಯವಾಗಿರಲಿಲ್ಲ. ಅಕ್ಟೋಬರ್ 29 ರಂದು ಮೊಸಳೆ ನೀರಿನಿಂದ ಮೇಲೆ ಬಂದು ಸೀವೇಜ್ ಫಾರಂ ಬಳಿಯ ಕಾಲ ಸಂಕದ ಪಕ್ಕದಲ್ಲಿ ವಿಶ್ರಾಂತಿ ಪಡೆಯುತ್ತಿತ್ತು. ಜನರ ಸದ್ದು ಗದ್ದಲದ ನಡುವೆ ಸಾಕಷ್ಟು ಕಾಲ ಮೊಸಳೆ ಈ ಜಾಗ ಬಿಟ್ಟು ಕದಲಿರಲಿಲ್ಲ. ಆದರೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೊಸಳೆಯನ್ನು ಸೆರೆ ಹಿಡಿಯಲು ಮತ್ತೆ ವಿಫಲವಾದರು ಪರಿಣಾಮ ಇಂದು ಬೆಳಿಗ್ಗೆ ನಗರದ ರಾಮಾನುಜ ರಸ್ತೆಯ 9ನೇ ಕ್ರಾಸ್ ಬಳಿ ಇರುವ ಕೆರೆಯ ದಡದಲ್ಲಿ ಮೊಸಳೆ ಬಾಯಿಗೆ ಹಸು ಬಲಿಯಾಗಿರುವ ಘಟನೆ ನಡೆದಿದ್ದು ಅದೇ ಮೊಸಳೆಯೇ ಹಸುವನ್ನು ತಿಂದು ಹಾಕಿದೆಯೆಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿ ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿ ನೀರನ್ನು ಕುಡಿಯಲು ಹೋದ ಹಸುವನ್ನು ಎಳೆದೊಯ್ದು ಮೊಸಳೆ ತಿಂದು ಹಾಕಿದೆ ಎನ್ನುತ್ತಿದ್ದಾರೆ. ಆದರೆ ಸಾವಿಗೀಡಾದ ಹಸುವಿನ ಮಾಲೀಕರು ಹಸು ಸಾವಿಗೆ ಮೊಸಳೆಯೇ ಕಾರಣ ಇಂದು ಬೆಳಿಗ್ಗೆ ಮೇಯಲು ಬಿಟ್ಟಿದ್ದ ಹಸುವನ್ನು ಮೊಸಳೆಯೇ ಕೆರೆಯ ಒಳಗೆ ಎಳೆದುಕೊಂಡು ಹೋಗಿರುವುದನ್ನು ನಾವೇ ನೋಡಿದ್ದೇವೆ ಹಸು ಸಾವಿಗೆ ಮೊಸಳೆಯೇ ಕಾರಣ ಎಂದು ಹೇಳುತ್ತಿದ್ದಾರೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೊಸಳೆಯನ್ನು ಸೆರೆಹಿಡಿಯಲು ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಆರ್ ಎಫ್ ಓ ಸುರೇಂದ್ರ, ಡಿ ಆರ್ ಎಫ್ ವೆಂಕಟಾಚಲ ಹಾಗೂ ಸಿಬ್ಬಂದಿಗಳು ಸೇರಿದಂತೆ ಒಟ್ಟು 6 ಜನ ಸಿಬ್ಬಂದಿಗಳು ಮೊಸಳೆಯನ್ನು ಹಿಡಿಯುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
ಈ ಬಗ್ಗೆ ಆಂದೋಲನದೊಟ್ಟಿಗೆ ಮಾತನಾಡಿ ಅವರು ಮೊಸಳೆಯನ್ನು ಹಿಡಿಯಲು ಬೆಳಿಗ್ಗೆ 11.30 ರಿಂದ ಕಾರ್ಯಾಚರಣೆಯ ಆರಂಭವಾಗಿದ್ದು, ಕೆರೆಯಲ್ಲಿರುವ ನೀರನ್ನು ಮೋಟಾರ್ ಬಳಸಿ ಹೊರೆಚೆಲ್ಲಿಸಿ ತದ ನಂತರ ಮೊಸಳೆಯನ್ನು ಸೆರೆ ಹಿಡಿಯಲಾಗುವುದು ಎಂದರು. ಇವತ್ತಿನ ಕಾರ್ಯಚರಣೆಯಲ್ಲಿ ಮೊಸಳೆ ಸಿಗದ ಕಾರಣ ನಾಳೆ ಬೆಳಿಗ್ಗೆ ಮತ್ತೆ ಕಾರ್ಯಚರಣೆ ಆರಂಭಿಸುತ್ತೇವೆ ಎಂದು ಅರಣ್ಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…
ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…