ಮೈಸೂರು : ಅನುಮಾನಾಸ್ಪದ ರೀತಿಯಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಚರಣ್ (7) ಮೃತ ಬಾಲಕ.
ಪೋಷಕರೊಂದಿಗೆ ಜಮೀನಿಗೆ ಆಗಮಿಸಿದ್ದ ಬಾಲಕ ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದ. ಕೆಲಹೊತ್ತಲ್ಲೇ ಆತ ವಿಶ್ರಾಂತಿ ಪಡೆಯುತ್ತಿದ್ದ ಸ್ಥಳದಿಂದ ಕಿರುಚಾಟದ ಸದ್ದು ಕೇಳಿ ಬಂದಿತ್ತು. ತಕ್ಷಣ ಹೋಗಿ ನೋಡುವಷ್ಟರಲ್ಲಿ ಬಾಲಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಮುಖವೆಲ್ಲ ಪರಚಿದಂತ ಹಾಗೂ ಒಂದು ಕಾಲನ್ನು ಯಾವುದೋ ಪ್ರಾಣಿ ತಿಂದು ಅರ್ಧ ಬಿಟ್ಟುಹೋದ ರೀತಿಯಲ್ಲಿ ಪತ್ತೆಯಾಗಿದೆ. ಬಾಲಕನ ಮೃತದೇಹವೆಲ್ಲ ರಕ್ತಸಿಕ್ತವಾಗಿರುವುದರಿಂದ ಹುಲಿಯೇ ದಾಳಿ ನಡೆಸಿದೆ ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಕೂಡ ಈ ಬಗ್ಗೆ ಅನುಮಾನ ಹೊರಹಾಕಿದ್ದಾರೆ. ಬಿಸಿಲು ಇದ್ದುದ್ದರಿಂದ ಮರದ ಕೆಳಗೆ ಕೂರುವಂತೆ ಹೇಳಿದ್ದೆ. ಅಲ್ಲದೇ ಎಲ್ಲಿಯೂ ಹೋಗದಂತೆ ಹೇಳಿ ನಾವು ನಮ್ಮ ಕೆಲಸದಲ್ಲಿ ನಿರತರಾಗಿದ್ದೆವು. ಕೆಲ ಹೊತ್ತಿನಲ್ಲೇ ಆತನಿದ್ದ ಸ್ಥಳದಿಂದ ಅಪ್ಪಾ ಎಂಬ ಸದ್ದು ಕೇಳಿಸಿತು. ಹೋಗಿ ನೋಡುವಷ್ಟರಲ್ಲಿ ಆತ ಇರಲಿಲ್ಲ. ಮನೆ ಕಡೆ ಹೋಗಿರಬಹುದು ಎಂಬ ಅನುಮಾನದಿಂದ ಫೋನ್ ಮಾಡಿ ವಿಚಾರಿಸಿದೆ. ಆದರೆ, ಬಂದಿಲ್ಲ ಎಂದು ಹೇಳಿದ್ದರಿಂದ ಭಯದಲ್ಲೇ ಸುತ್ತಮುತ್ತ ಹುಡುಕಾಡಿದೆವು.
ರಾತ್ರಿ ಇಲ್ಲಿ ಹುಲಿ ಬಂದಿತ್ತು ಎಂಬ ಕೇಳಿ ಅನುಮಾನ ಹಾಗೂ ಭಯ ಇನ್ನೂ ಹೆಚ್ಚಾಗಿತ್ತು. ಹೊಲದಲ್ಲಿಯೇ ಹುಡುಕಾಟ ನಡೆಸುತ್ತಿದ್ದಾಗ ಅಲ್ಲಲ್ಲಿ ರಕ್ತ ಚೆಲ್ಲಿದ್ದು ಕಾಣಿಸಿತು. ಅದರ ಜಾಡು ಹಿಡಿದು ಹೋಗಿ ನೋಡಿದಾಗ ನಮ್ಮ ಹುಡುಗ ಮೃತಪಟ್ಟಿದ್ದು ಗೊತ್ತಾಯಿತು ಎಂದು ಮೃತ ಬಾಲಕನ ತಂದೆ ಕೃಷ್ಣಾ ನಾಯಕ ನೋವು ತೋಡಿಕೊಂಡಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…