ಮೈಸೂರು

ಅನುಮಾನಾಸ್ಪದ ರೀತಿಯಲ್ಲಿ ಬಾಲಕನ ಮೃತದೇಹ ಪತ್ತೆ

ಮೈಸೂರು : ಅನುಮಾನಾಸ್ಪದ ರೀತಿಯಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಚರಣ್ (7) ಮೃತ ಬಾಲಕ.

ಪೋಷಕರೊಂದಿಗೆ ಜಮೀನಿಗೆ ಆಗಮಿಸಿದ್ದ ಬಾಲಕ ಮರದ‌ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದ. ಕೆಲಹೊತ್ತಲ್ಲೇ ಆತ ವಿಶ್ರಾಂತಿ ಪಡೆಯುತ್ತಿದ್ದ ಸ್ಥಳದಿಂದ ಕಿರುಚಾಟದ ಸದ್ದು ಕೇಳಿ ಬಂದಿತ್ತು. ತಕ್ಷಣ ಹೋಗಿ ನೋಡುವಷ್ಟರಲ್ಲಿ ಬಾಲಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಮುಖವೆಲ್ಲ ಪರಚಿದಂತ ಹಾಗೂ ಒಂದು ಕಾಲನ್ನು ಯಾವುದೋ ಪ್ರಾಣಿ ತಿಂದು ಅರ್ಧ ಬಿಟ್ಟುಹೋದ ರೀತಿಯಲ್ಲಿ ಪತ್ತೆಯಾಗಿದೆ. ಬಾಲಕನ ಮೃತದೇಹವೆಲ್ಲ ರಕ್ತಸಿಕ್ತವಾಗಿರುವುದರಿಂದ ಹುಲಿಯೇ ದಾಳಿ ನಡೆಸಿದೆ ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಕೂಡ ಈ ಬಗ್ಗೆ ಅನುಮಾನ ಹೊರಹಾಕಿದ್ದಾರೆ. ಬಿಸಿಲು ಇದ್ದುದ್ದರಿಂದ ಮರದ ಕೆಳಗೆ ಕೂರುವಂತೆ ಹೇಳಿದ್ದೆ. ಅಲ್ಲದೇ ಎಲ್ಲಿಯೂ ಹೋಗದಂತೆ ಹೇಳಿ ನಾವು ನಮ್ಮ ಕೆಲಸದಲ್ಲಿ ನಿರತರಾಗಿದ್ದೆವು. ಕೆಲ ಹೊತ್ತಿನಲ್ಲೇ ಆತನಿದ್ದ ಸ್ಥಳದಿಂದ ಅಪ್ಪಾ ಎಂಬ ಸದ್ದು ಕೇಳಿಸಿತು. ಹೋಗಿ ನೋಡುವಷ್ಟರಲ್ಲಿ ಆತ ಇರಲಿಲ್ಲ. ಮನೆ ಕಡೆ ಹೋಗಿರಬಹುದು ಎಂಬ ಅನುಮಾನದಿಂದ ಫೋನ್​ ಮಾಡಿ ವಿಚಾರಿಸಿದೆ. ಆದರೆ, ಬಂದಿಲ್ಲ ಎಂದು ಹೇಳಿದ್ದರಿಂದ ಭಯದಲ್ಲೇ ಸುತ್ತಮುತ್ತ ಹುಡುಕಾಡಿದೆವು.

ರಾತ್ರಿ ಇಲ್ಲಿ ಹುಲಿ ಬಂದಿತ್ತು ಎಂಬ ಕೇಳಿ ಅನುಮಾನ ಹಾಗೂ ಭಯ ಇನ್ನೂ ಹೆಚ್ಚಾಗಿತ್ತು. ಹೊಲದಲ್ಲಿಯೇ ಹುಡುಕಾಟ ನಡೆಸುತ್ತಿದ್ದಾಗ ಅಲ್ಲಲ್ಲಿ ರಕ್ತ ಚೆಲ್ಲಿದ್ದು ಕಾಣಿಸಿತು. ಅದರ ಜಾಡು ಹಿಡಿದು ಹೋಗಿ ನೋಡಿದಾಗ ನಮ್ಮ ಹುಡುಗ ಮೃತಪಟ್ಟಿದ್ದು ಗೊತ್ತಾಯಿತು ಎಂದು ಮೃತ ಬಾಲಕನ ತಂದೆ ಕೃಷ್ಣಾ ನಾಯಕ ನೋವು ತೋಡಿಕೊಂಡಿದ್ದಾರೆ.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

22 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

22 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

22 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

22 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

22 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

23 hours ago