ಮೈಸೂರು : ಅನುಮಾನಾಸ್ಪದ ರೀತಿಯಲ್ಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಚರಣ್ (7) ಮೃತ ಬಾಲಕ.
ಪೋಷಕರೊಂದಿಗೆ ಜಮೀನಿಗೆ ಆಗಮಿಸಿದ್ದ ಬಾಲಕ ಮರದ ಕೆಳಗೆ ವಿಶ್ರಾಂತಿ ಪಡೆಯುತ್ತಿದ್ದ. ಕೆಲಹೊತ್ತಲ್ಲೇ ಆತ ವಿಶ್ರಾಂತಿ ಪಡೆಯುತ್ತಿದ್ದ ಸ್ಥಳದಿಂದ ಕಿರುಚಾಟದ ಸದ್ದು ಕೇಳಿ ಬಂದಿತ್ತು. ತಕ್ಷಣ ಹೋಗಿ ನೋಡುವಷ್ಟರಲ್ಲಿ ಬಾಲಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಮುಖವೆಲ್ಲ ಪರಚಿದಂತ ಹಾಗೂ ಒಂದು ಕಾಲನ್ನು ಯಾವುದೋ ಪ್ರಾಣಿ ತಿಂದು ಅರ್ಧ ಬಿಟ್ಟುಹೋದ ರೀತಿಯಲ್ಲಿ ಪತ್ತೆಯಾಗಿದೆ. ಬಾಲಕನ ಮೃತದೇಹವೆಲ್ಲ ರಕ್ತಸಿಕ್ತವಾಗಿರುವುದರಿಂದ ಹುಲಿಯೇ ದಾಳಿ ನಡೆಸಿದೆ ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಕೂಡ ಈ ಬಗ್ಗೆ ಅನುಮಾನ ಹೊರಹಾಕಿದ್ದಾರೆ. ಬಿಸಿಲು ಇದ್ದುದ್ದರಿಂದ ಮರದ ಕೆಳಗೆ ಕೂರುವಂತೆ ಹೇಳಿದ್ದೆ. ಅಲ್ಲದೇ ಎಲ್ಲಿಯೂ ಹೋಗದಂತೆ ಹೇಳಿ ನಾವು ನಮ್ಮ ಕೆಲಸದಲ್ಲಿ ನಿರತರಾಗಿದ್ದೆವು. ಕೆಲ ಹೊತ್ತಿನಲ್ಲೇ ಆತನಿದ್ದ ಸ್ಥಳದಿಂದ ಅಪ್ಪಾ ಎಂಬ ಸದ್ದು ಕೇಳಿಸಿತು. ಹೋಗಿ ನೋಡುವಷ್ಟರಲ್ಲಿ ಆತ ಇರಲಿಲ್ಲ. ಮನೆ ಕಡೆ ಹೋಗಿರಬಹುದು ಎಂಬ ಅನುಮಾನದಿಂದ ಫೋನ್ ಮಾಡಿ ವಿಚಾರಿಸಿದೆ. ಆದರೆ, ಬಂದಿಲ್ಲ ಎಂದು ಹೇಳಿದ್ದರಿಂದ ಭಯದಲ್ಲೇ ಸುತ್ತಮುತ್ತ ಹುಡುಕಾಡಿದೆವು.
ರಾತ್ರಿ ಇಲ್ಲಿ ಹುಲಿ ಬಂದಿತ್ತು ಎಂಬ ಕೇಳಿ ಅನುಮಾನ ಹಾಗೂ ಭಯ ಇನ್ನೂ ಹೆಚ್ಚಾಗಿತ್ತು. ಹೊಲದಲ್ಲಿಯೇ ಹುಡುಕಾಟ ನಡೆಸುತ್ತಿದ್ದಾಗ ಅಲ್ಲಲ್ಲಿ ರಕ್ತ ಚೆಲ್ಲಿದ್ದು ಕಾಣಿಸಿತು. ಅದರ ಜಾಡು ಹಿಡಿದು ಹೋಗಿ ನೋಡಿದಾಗ ನಮ್ಮ ಹುಡುಗ ಮೃತಪಟ್ಟಿದ್ದು ಗೊತ್ತಾಯಿತು ಎಂದು ಮೃತ ಬಾಲಕನ ತಂದೆ ಕೃಷ್ಣಾ ನಾಯಕ ನೋವು ತೋಡಿಕೊಂಡಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…