ಕೆ ಆರ್ ನಗರ :ಮೈಸೂರು ಜಿಲ್ಲೆ ತಿ ನರಸೀಪುರ ತಾಲ್ಲೂಕಿನ ನಿಲಸೋಗೆ ಗ್ರಾಮದಲ್ಲಿ ಮೂವರು ರೈತರು ವಿದ್ಯುತ್ ತಂತಿ ತುಳಿದು ಮೃತಪಟ್ಟ ಬೆನ್ನಲ್ಲೇ ಮನೆ ಮುಂದೆ ಮರಕ್ಕೆ ವಿದ್ಯುತ್ ಸ್ಪರ್ಶಗೊಂಡು ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ಹೆಬ್ಬಾಳು ಹೋಬಳಿ ಮಳಲಿ ಗ್ರಾಮದಲ್ಲಿ ಇಂದು ನಡೆದಿದೆ. ಮಳಲಿ ಗ್ರಾಮದ ಕಾಡೇಗೌಡರ ಮಗ ಮನೋಜ್ (16) ಮೃತ ದುರ್ದೈವಿ.
ಈತ ಮಾವತ್ತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ. ಬೆಳಗ್ಗೆ ಮನೆ ಮುಂದೆ ಇರುವ ನುಗ್ಗೆ ಮರದ ಬಳಿ ನಿಂತಿರುವಾಗ ಮರಕ್ಕೆ11ಕೆ.ವಿ. ವಿದ್ಯುತ್ ತಂತಿ ಸ್ಪರ್ಶಗೊಂಡು ಸ್ಥಳದಲ್ಲಿ ಮೃತಪಟ್ಟಿದ್ದಾನೆ.
ಕಾಡೇಗೌಡರ ಇಬ್ಬರು ಮಕ್ಕಳ ಪೈಕಿ ಈತ ಮೊದಲ ಮಗನಾಗಿದ್ದಾನೆ.
ನಿಲಸೋಗೆ ಗ್ರಾಮದಲ್ಲಿ ಮೂವರು ರೈತರು ವಿದ್ಯುತ್ ತಂತಿಯಿಂದ ಮೃತಪಟ್ಟ ಘಟನೆ ಮಾಸುವ ಮುನ್ನವೇ ಸೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯ ಕ್ಕೆ ಶಾಲಾ ಬಾಲಕನೊಬ್ಬ ಬಲಿಯಾಗಿರುವುದು ಗ್ರಾಮಸ್ಥರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದರು.
ನಿಮ್ಮ ತಪ್ಪನ್ನು ನಿಮಗೇ ತೋರಿಸಲಿದೆ ಕನ್ನಡಿ! ಮೈಸೂರು: ಖಾಲಿ ಕಾಂಪೌಂಡ್ ಬಳಿ ಮೂತ್ರ ವಿಸರ್ಜನೆಯ ದುರ್ವಾಸನೆ ತಪ್ಪಿಸಲು ಮೈಸೂರು ಮಹಾನಗರ…
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…