ಮೈಸೂರು

ಮೈಸೂರು | ಇಬ್ಬರು ಹೆಂಡ್ತೀರ ಮುದ್ದಿನ ಗಂಡನ ಮೋಸದ ಮುಖವಾಡ ಬಯಲು ; ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ 2ನೇ ಪತ್ನಿ

ಮೈಸೂರು : ಇಬ್ಬರು ಹೆಂಡತಿಯರ ಮುದ್ದಿನ ಗಂಡನ ಮೋಸದ ಮುಖವಾಡವೊಂದು ಬಯಲಾಗಿದ್ದು, ಮದುವೆ ಆಗಿ ಡಿವೋರ್ಸ್ ಆಗಿದ್ರು, ಮತ್ತೊಂದು ಯುವತಿಯನ್ನು ಮದುವೆ ಆಗಿ ಮೋಸ ಮಾಡಿರುವ ಆರೋಪ ಕೇಳಿಬಂದಿದೆ.

ಮೈಸೂರಿನ ಜೆ.ಪಿ.ನಗರದಲ್ಲಿ ಈ ಘಟನೆ ನಡೆದಿದ್ದು, ಪತಿ ಶಿವಕುಮಾರ್ ಮೋಸ ಮಾಡಿದ್ದಾನೆ ಎಂದು ಪತ್ನಿ ಶೋಭಾ ಆರೋಪ ಮಾಡಿ ನ್ಯಾಯಕ್ಕಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಶೋಭಾಳನ್ನ ಮದುವೆ ಆಗುವ ಮುನ್ನವೇ ಶಿವಕುಮಾರ್‌ ಮತ್ತೊಂದು ಮದುವೆ ಆಗಿದ್ದನು.

ಕಳೆದ 2020ರಲ್ಲಿ ಶಿವಕುಮಾರ್ ನಂಜನಗೂಡು ತಾಲ್ಲೂಕಿನ ಲಾವಣ್ಯ ಎಂಬ ಯುವತಿಯ ಜೊತೆ ಮದುವೆ ಆಗಿದ್ದ ಶಿವಕುಮಾರ್, ಲಾವಣ್ಯ ಜೊತೆ ಒಂದು ವರ್ಷ ಸಂಸಾರ ಮಾಡಿ 2021ರಲ್ಲಿ ಆಕೆಗೆ ಡಿವೋರ್ಸ್ ನೀಡಿದ್ದ. ಬಳಿಕ 2022ರಲ್ಲಿ ಹಾಸನ ಜಿಲ್ಲೆಯ ಚನ್ನರಾಯನಪಟ್ಟಣದ ಯುವತಿ ಶೋಭಾ ಜೊತೆ ಮದುವೆಯಾಗಿದ್ದ. ಮನೆಯವರ ಒಪ್ಪಿಗೆಯಂತೆ ಅರೇಂಜ್ ಮ್ಯಾರೇಜ್ ಆಗಿರುವ ನೊಂದ ಮಹಿಳೆ ಶೋಭಾಗೆ ಸ್ವಲ್ಪ ವರ್ಷ ಕಳೆಯುತ್ತಿದ್ದಂತೆ ಗಂಡನ ನಿಜ ಬಣ್ಣ ಗೊತ್ತಾಗಿದೆ… ಹೀಗೆ ಒಂದು ದಿನ ಶೋಭಾಳಿಗೆ ಕರೆ ಮಾಡಿರುವ ಪೊಲೀಸರು, ನಿನ್ನ ಪತಿ ಶಿವಕುಮಾರ್ ಲಾವಣ್ಯ ಎಂಬ ಯುವತಿಯನ್ನು ಗರ್ಭಿಣಿ ಮಾಡಿದ್ದಾನೆ ಎಂದು ಹೇಳಿದ್ದಾರೆ.

ಹೀಗಿರುವಾಗಲೇ ಶಿವಕುಮಾರ್‌ ಪೊಲೀಸರಿಗೆ ಹೆದರಿ ಡಿವೋರ್ಸ್ ಆಗಿದ್ದ ಲಾವಣ್ಯಳನ್ನೇ ಮತ್ತೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾನೆ. 2ನೇ ಹೆಂಡತಿ ಶೋಭಾಳಿಗೆ ಈ ವಿಚಾರ ತಿಳಿಯುತ್ತಿದ್ದಂತೆ ಮೈಸೂರಿನ ಜೆಪಿ ನಗರದಲ್ಲಿರುವ ಸ್ವಂತ ನಿವಾಸಕ್ಕೆ ಲಾವಣ್ಯಳನನ್ನು ಕರೆದುಕೊಂಡು ಬಂದಿದ್ದಾನೆ.

ಶೋಭಾ ಪ್ರಶ್ನೆ ಮಾಡಿದ್ದಕ್ಕೆ ಇಷ್ಟ ಇದ್ರೆ ಇರು, ಇಲ್ಲ ಅಂದರೆ ಮನೆ ಬಿಟ್ಟು ಹೋಗು ಎಂದು ಹಿಂಸೆ ಕೊಟ್ಟ ಆರೋಪ ಕೇಳಿಬಂದಿದ್ದು, ನೊಂದ ಮಹಿಳೆ ಶೋಭಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ ನ್ಯಾಯ ಸಿಗುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ಶೋಭಾಳಿಗೆ 2 ವರ್ಷದ ಗಂಡು ಮಗು ಹಾಗೂ ಲಾವಣ್ಯಳಿಗೆ ಒಂದು ಹೆಣ್ಣು ಮಗು ಇದೆ. ಶಿವಕುಮಾರ್ ಜೊತೆ ಡಿವೋರ್ಸ್ ಆಗಿದ್ದ ಸಂದರ್ಭದಲ್ಲಿ ಲಾವಣ್ಯ ಕೇರಳದ ಪ್ರಸೂನ್ ಎಂಬುವವನ ಮತ್ತೊಂದು ಮದುವೆ ಆಗಿದ್ದಳು ಎಂದು ಶೋಭಾ ಗಂಭೀರ ಆರೋಪ ಮಾಡಿದ್ದಾರೆ.

ಪತಿ ಶಿವಕುಮಾರ್ ಕಳೆದ ಮೂರು ತಿಂಗಳಿನಿಂದಲೂ ಇಬ್ಬರು ಹೆಂಡತಿಯರು ಜೊತೆಯಲ್ಲೇ ಇರಿ ಎಂದು ಪದೇ ಪದೇ ಹಿಂಸೆ ಕೊಡುತ್ತಿದ್ದು, ಇದಕ್ಕೆ ಒಪ್ಪದ ಶೋಭಾ ನ್ಯಾಯಕ್ಕಾಗಿ ಕಣ್ಣೀರು ಹಾಕುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

7 mins ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

36 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

3 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

4 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

4 hours ago