ಮೈಸೂರು

ಮೈಸೂರು | ಇಬ್ಬರು ಹೆಂಡ್ತೀರ ಮುದ್ದಿನ ಗಂಡನ ಮೋಸದ ಮುಖವಾಡ ಬಯಲು ; ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ 2ನೇ ಪತ್ನಿ

ಮೈಸೂರು : ಇಬ್ಬರು ಹೆಂಡತಿಯರ ಮುದ್ದಿನ ಗಂಡನ ಮೋಸದ ಮುಖವಾಡವೊಂದು ಬಯಲಾಗಿದ್ದು, ಮದುವೆ ಆಗಿ ಡಿವೋರ್ಸ್ ಆಗಿದ್ರು, ಮತ್ತೊಂದು ಯುವತಿಯನ್ನು ಮದುವೆ ಆಗಿ ಮೋಸ ಮಾಡಿರುವ ಆರೋಪ ಕೇಳಿಬಂದಿದೆ.

ಮೈಸೂರಿನ ಜೆ.ಪಿ.ನಗರದಲ್ಲಿ ಈ ಘಟನೆ ನಡೆದಿದ್ದು, ಪತಿ ಶಿವಕುಮಾರ್ ಮೋಸ ಮಾಡಿದ್ದಾನೆ ಎಂದು ಪತ್ನಿ ಶೋಭಾ ಆರೋಪ ಮಾಡಿ ನ್ಯಾಯಕ್ಕಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಶೋಭಾಳನ್ನ ಮದುವೆ ಆಗುವ ಮುನ್ನವೇ ಶಿವಕುಮಾರ್‌ ಮತ್ತೊಂದು ಮದುವೆ ಆಗಿದ್ದನು.

ಕಳೆದ 2020ರಲ್ಲಿ ಶಿವಕುಮಾರ್ ನಂಜನಗೂಡು ತಾಲ್ಲೂಕಿನ ಲಾವಣ್ಯ ಎಂಬ ಯುವತಿಯ ಜೊತೆ ಮದುವೆ ಆಗಿದ್ದ ಶಿವಕುಮಾರ್, ಲಾವಣ್ಯ ಜೊತೆ ಒಂದು ವರ್ಷ ಸಂಸಾರ ಮಾಡಿ 2021ರಲ್ಲಿ ಆಕೆಗೆ ಡಿವೋರ್ಸ್ ನೀಡಿದ್ದ. ಬಳಿಕ 2022ರಲ್ಲಿ ಹಾಸನ ಜಿಲ್ಲೆಯ ಚನ್ನರಾಯನಪಟ್ಟಣದ ಯುವತಿ ಶೋಭಾ ಜೊತೆ ಮದುವೆಯಾಗಿದ್ದ. ಮನೆಯವರ ಒಪ್ಪಿಗೆಯಂತೆ ಅರೇಂಜ್ ಮ್ಯಾರೇಜ್ ಆಗಿರುವ ನೊಂದ ಮಹಿಳೆ ಶೋಭಾಗೆ ಸ್ವಲ್ಪ ವರ್ಷ ಕಳೆಯುತ್ತಿದ್ದಂತೆ ಗಂಡನ ನಿಜ ಬಣ್ಣ ಗೊತ್ತಾಗಿದೆ… ಹೀಗೆ ಒಂದು ದಿನ ಶೋಭಾಳಿಗೆ ಕರೆ ಮಾಡಿರುವ ಪೊಲೀಸರು, ನಿನ್ನ ಪತಿ ಶಿವಕುಮಾರ್ ಲಾವಣ್ಯ ಎಂಬ ಯುವತಿಯನ್ನು ಗರ್ಭಿಣಿ ಮಾಡಿದ್ದಾನೆ ಎಂದು ಹೇಳಿದ್ದಾರೆ.

ಹೀಗಿರುವಾಗಲೇ ಶಿವಕುಮಾರ್‌ ಪೊಲೀಸರಿಗೆ ಹೆದರಿ ಡಿವೋರ್ಸ್ ಆಗಿದ್ದ ಲಾವಣ್ಯಳನ್ನೇ ಮತ್ತೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾನೆ. 2ನೇ ಹೆಂಡತಿ ಶೋಭಾಳಿಗೆ ಈ ವಿಚಾರ ತಿಳಿಯುತ್ತಿದ್ದಂತೆ ಮೈಸೂರಿನ ಜೆಪಿ ನಗರದಲ್ಲಿರುವ ಸ್ವಂತ ನಿವಾಸಕ್ಕೆ ಲಾವಣ್ಯಳನನ್ನು ಕರೆದುಕೊಂಡು ಬಂದಿದ್ದಾನೆ.

ಶೋಭಾ ಪ್ರಶ್ನೆ ಮಾಡಿದ್ದಕ್ಕೆ ಇಷ್ಟ ಇದ್ರೆ ಇರು, ಇಲ್ಲ ಅಂದರೆ ಮನೆ ಬಿಟ್ಟು ಹೋಗು ಎಂದು ಹಿಂಸೆ ಕೊಟ್ಟ ಆರೋಪ ಕೇಳಿಬಂದಿದ್ದು, ನೊಂದ ಮಹಿಳೆ ಶೋಭಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ ನ್ಯಾಯ ಸಿಗುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ಶೋಭಾಳಿಗೆ 2 ವರ್ಷದ ಗಂಡು ಮಗು ಹಾಗೂ ಲಾವಣ್ಯಳಿಗೆ ಒಂದು ಹೆಣ್ಣು ಮಗು ಇದೆ. ಶಿವಕುಮಾರ್ ಜೊತೆ ಡಿವೋರ್ಸ್ ಆಗಿದ್ದ ಸಂದರ್ಭದಲ್ಲಿ ಲಾವಣ್ಯ ಕೇರಳದ ಪ್ರಸೂನ್ ಎಂಬುವವನ ಮತ್ತೊಂದು ಮದುವೆ ಆಗಿದ್ದಳು ಎಂದು ಶೋಭಾ ಗಂಭೀರ ಆರೋಪ ಮಾಡಿದ್ದಾರೆ.

ಪತಿ ಶಿವಕುಮಾರ್ ಕಳೆದ ಮೂರು ತಿಂಗಳಿನಿಂದಲೂ ಇಬ್ಬರು ಹೆಂಡತಿಯರು ಜೊತೆಯಲ್ಲೇ ಇರಿ ಎಂದು ಪದೇ ಪದೇ ಹಿಂಸೆ ಕೊಡುತ್ತಿದ್ದು, ಇದಕ್ಕೆ ಒಪ್ಪದ ಶೋಭಾ ನ್ಯಾಯಕ್ಕಾಗಿ ಕಣ್ಣೀರು ಹಾಕುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

7 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

7 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

7 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

8 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

8 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

9 hours ago