ಮೈಸೂರು

ಮೈಸೂರು | ಇಬ್ಬರು ಹೆಂಡ್ತೀರ ಮುದ್ದಿನ ಗಂಡನ ಮೋಸದ ಮುಖವಾಡ ಬಯಲು ; ನ್ಯಾಯಕ್ಕಾಗಿ ಠಾಣೆ ಮೆಟ್ಟಿಲೇರಿದ 2ನೇ ಪತ್ನಿ

ಮೈಸೂರು : ಇಬ್ಬರು ಹೆಂಡತಿಯರ ಮುದ್ದಿನ ಗಂಡನ ಮೋಸದ ಮುಖವಾಡವೊಂದು ಬಯಲಾಗಿದ್ದು, ಮದುವೆ ಆಗಿ ಡಿವೋರ್ಸ್ ಆಗಿದ್ರು, ಮತ್ತೊಂದು ಯುವತಿಯನ್ನು ಮದುವೆ ಆಗಿ ಮೋಸ ಮಾಡಿರುವ ಆರೋಪ ಕೇಳಿಬಂದಿದೆ.

ಮೈಸೂರಿನ ಜೆ.ಪಿ.ನಗರದಲ್ಲಿ ಈ ಘಟನೆ ನಡೆದಿದ್ದು, ಪತಿ ಶಿವಕುಮಾರ್ ಮೋಸ ಮಾಡಿದ್ದಾನೆ ಎಂದು ಪತ್ನಿ ಶೋಭಾ ಆರೋಪ ಮಾಡಿ ನ್ಯಾಯಕ್ಕಾಗಿ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಶೋಭಾಳನ್ನ ಮದುವೆ ಆಗುವ ಮುನ್ನವೇ ಶಿವಕುಮಾರ್‌ ಮತ್ತೊಂದು ಮದುವೆ ಆಗಿದ್ದನು.

ಕಳೆದ 2020ರಲ್ಲಿ ಶಿವಕುಮಾರ್ ನಂಜನಗೂಡು ತಾಲ್ಲೂಕಿನ ಲಾವಣ್ಯ ಎಂಬ ಯುವತಿಯ ಜೊತೆ ಮದುವೆ ಆಗಿದ್ದ ಶಿವಕುಮಾರ್, ಲಾವಣ್ಯ ಜೊತೆ ಒಂದು ವರ್ಷ ಸಂಸಾರ ಮಾಡಿ 2021ರಲ್ಲಿ ಆಕೆಗೆ ಡಿವೋರ್ಸ್ ನೀಡಿದ್ದ. ಬಳಿಕ 2022ರಲ್ಲಿ ಹಾಸನ ಜಿಲ್ಲೆಯ ಚನ್ನರಾಯನಪಟ್ಟಣದ ಯುವತಿ ಶೋಭಾ ಜೊತೆ ಮದುವೆಯಾಗಿದ್ದ. ಮನೆಯವರ ಒಪ್ಪಿಗೆಯಂತೆ ಅರೇಂಜ್ ಮ್ಯಾರೇಜ್ ಆಗಿರುವ ನೊಂದ ಮಹಿಳೆ ಶೋಭಾಗೆ ಸ್ವಲ್ಪ ವರ್ಷ ಕಳೆಯುತ್ತಿದ್ದಂತೆ ಗಂಡನ ನಿಜ ಬಣ್ಣ ಗೊತ್ತಾಗಿದೆ… ಹೀಗೆ ಒಂದು ದಿನ ಶೋಭಾಳಿಗೆ ಕರೆ ಮಾಡಿರುವ ಪೊಲೀಸರು, ನಿನ್ನ ಪತಿ ಶಿವಕುಮಾರ್ ಲಾವಣ್ಯ ಎಂಬ ಯುವತಿಯನ್ನು ಗರ್ಭಿಣಿ ಮಾಡಿದ್ದಾನೆ ಎಂದು ಹೇಳಿದ್ದಾರೆ.

ಹೀಗಿರುವಾಗಲೇ ಶಿವಕುಮಾರ್‌ ಪೊಲೀಸರಿಗೆ ಹೆದರಿ ಡಿವೋರ್ಸ್ ಆಗಿದ್ದ ಲಾವಣ್ಯಳನ್ನೇ ಮತ್ತೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಾನೆ. 2ನೇ ಹೆಂಡತಿ ಶೋಭಾಳಿಗೆ ಈ ವಿಚಾರ ತಿಳಿಯುತ್ತಿದ್ದಂತೆ ಮೈಸೂರಿನ ಜೆಪಿ ನಗರದಲ್ಲಿರುವ ಸ್ವಂತ ನಿವಾಸಕ್ಕೆ ಲಾವಣ್ಯಳನನ್ನು ಕರೆದುಕೊಂಡು ಬಂದಿದ್ದಾನೆ.

ಶೋಭಾ ಪ್ರಶ್ನೆ ಮಾಡಿದ್ದಕ್ಕೆ ಇಷ್ಟ ಇದ್ರೆ ಇರು, ಇಲ್ಲ ಅಂದರೆ ಮನೆ ಬಿಟ್ಟು ಹೋಗು ಎಂದು ಹಿಂಸೆ ಕೊಟ್ಟ ಆರೋಪ ಕೇಳಿಬಂದಿದ್ದು, ನೊಂದ ಮಹಿಳೆ ಶೋಭಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರೂ ನ್ಯಾಯ ಸಿಗುತ್ತಿಲ್ಲ ಎಂದು ಕಣ್ಣೀರು ಹಾಕಿದ್ದಾರೆ.

ಶೋಭಾಳಿಗೆ 2 ವರ್ಷದ ಗಂಡು ಮಗು ಹಾಗೂ ಲಾವಣ್ಯಳಿಗೆ ಒಂದು ಹೆಣ್ಣು ಮಗು ಇದೆ. ಶಿವಕುಮಾರ್ ಜೊತೆ ಡಿವೋರ್ಸ್ ಆಗಿದ್ದ ಸಂದರ್ಭದಲ್ಲಿ ಲಾವಣ್ಯ ಕೇರಳದ ಪ್ರಸೂನ್ ಎಂಬುವವನ ಮತ್ತೊಂದು ಮದುವೆ ಆಗಿದ್ದಳು ಎಂದು ಶೋಭಾ ಗಂಭೀರ ಆರೋಪ ಮಾಡಿದ್ದಾರೆ.

ಪತಿ ಶಿವಕುಮಾರ್ ಕಳೆದ ಮೂರು ತಿಂಗಳಿನಿಂದಲೂ ಇಬ್ಬರು ಹೆಂಡತಿಯರು ಜೊತೆಯಲ್ಲೇ ಇರಿ ಎಂದು ಪದೇ ಪದೇ ಹಿಂಸೆ ಕೊಡುತ್ತಿದ್ದು, ಇದಕ್ಕೆ ಒಪ್ಪದ ಶೋಭಾ ನ್ಯಾಯಕ್ಕಾಗಿ ಕಣ್ಣೀರು ಹಾಕುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago