ಮೈಸೂರು

ಹಿರಿಯ ಹೆಣ್ಣಾನೆ ಪದ್ಮಾವತಿ ಇನ್ನಿಲ್ಲ

ಮೈಸೂರು : ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ 71 ವರ್ಷದ ಪದ್ಮಾವತಿ ಆನೆ ಗುರುವಾರ ಮೃತಪಟ್ಟಿದೆ.

ಸುಮಾರು 71 ವರ್ಷ 2 ತಿಂಗಳು ವಯಸ್ಸಿನ ಪದ್ಮಾವತಿ ಎಂಬ ಹೆಣ್ಣಾನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಅವಿಭಾಜ್ಯ ಅಂಗವಾಗಿತ್ತು. 1973 ವರ್ಷದಲ್ಲಿ ಖೆಡ್ಡಾ ಕಾರ್ಯಾಚರಣೆಯಲ್ಲಿ(1953-54)ನೇ ವರ್ಷದಲ್ಲಿ ಅಂದಾಜು ಜನನ) ರಕ್ಷಿಸಲ್ಪಟ್ಟ ಪದ್ಮಾವತಿ ಆನೆಯು ಮೃಗಾಲಯದ ಇತಿಹಾಸದಲ್ಲಿ ಅತ್ಯಂತ ಹಿರಿಯ ಆನೆಯಾಗಿತ್ತು. ಸುಮಾರು 53 ವರ್ಷಗಳ ಕಾಲ ಮೈಸೂರು ಮೃಗಾಲಯದ ಆರೈಕೆಯಲ್ಲಿತ್ತು.

ಈ ಆನೆಯು ಗಜಲಕ್ಷ್ಮೀ(1979), ಕೋಮಲ(1996), ಅಭಿಮನ್ಯು(2004ರಲ್ಲಿ) ಮರಿಗಳಿಗೆ ಜನ್ಮ ನೀಡಿತ್ತು. ವಯಸ್ಸಾದ ಕಾರಣ ನಾಲ್ಕು ವರ್ಷಗಳ ಹಿಂದೆ ಅದನ್ನು ಮೈಸೂರು ಮೃಗಾಲಯದ ಶ್ರೀ ಚಾಮುಂಡಿ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಬುಧವಾರದವರೆಗೂ ಆನೆಯ ಆರೋಗ್ಯವು ಸ್ಥಿರವಾಗಿತ್ತು. ಆದರೆ, ಗುರುವಾರ ಬೆಳಿಗ್ಗೆಯಿಂದ ಆನೆ ಮೇಲೇಳಲು ಸಾಧ್ಯವಾಗದೆ ಮಲಗಿದ ಸ್ಥಿತಿಯಲ್ಲೇ ಇತ್ತು. ಮೈಸೂರು ಮೃಗಾಲಯದ ಪಶುವೈದ್ಯ ತಂಡವು ತಕ್ಷಣವೇ ತೀವ್ರ ವೈದ್ಯಕೀಯ ಪರೀಕ್ಷೆಗಳು ಮತ್ತು ಸಹಾಯಕ ಚಿಕಿತ್ಸೆ ಸೇರಿದಂತೆ ವೈದ್ಯಕೀಯ ಆರೈಕೆಯನ್ನು ಪ್ರಾರಂಭಿಸಿತ್ತು.

ಎಲ್ಲಾ ಪ್ರಯತ್ನಗಳ ನಡುವೆಯೂ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಸಂಜೆ 5.10 ರಲ್ಲಿ ಕೂರ್ಗಳ್ಳಿ ಕೇಂದ್ರದಲ್ಲಿ ಸಾವನ್ನಪ್ಪಿದೆ. ಸಾವಿನ ನಿಖರವಾದ ಕಾರಣವನ್ನು ತಿಳಿಯಲು ಸದ್ಯದಲ್ಲೇ ಮರಣೋತ್ತರ ಪರೀಕ್ಷೆ ನಡೆಲಾಗುವುದು ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

1 hour ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

1 hour ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

2 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

3 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

4 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

5 hours ago