ಮೈಸೂರು

ಹಿರಿಯ ಹೆಣ್ಣಾನೆ ಪದ್ಮಾವತಿ ಇನ್ನಿಲ್ಲ

ಮೈಸೂರು : ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ 71 ವರ್ಷದ ಪದ್ಮಾವತಿ ಆನೆ ಗುರುವಾರ ಮೃತಪಟ್ಟಿದೆ.

ಸುಮಾರು 71 ವರ್ಷ 2 ತಿಂಗಳು ವಯಸ್ಸಿನ ಪದ್ಮಾವತಿ ಎಂಬ ಹೆಣ್ಣಾನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಅವಿಭಾಜ್ಯ ಅಂಗವಾಗಿತ್ತು. 1973 ವರ್ಷದಲ್ಲಿ ಖೆಡ್ಡಾ ಕಾರ್ಯಾಚರಣೆಯಲ್ಲಿ(1953-54)ನೇ ವರ್ಷದಲ್ಲಿ ಅಂದಾಜು ಜನನ) ರಕ್ಷಿಸಲ್ಪಟ್ಟ ಪದ್ಮಾವತಿ ಆನೆಯು ಮೃಗಾಲಯದ ಇತಿಹಾಸದಲ್ಲಿ ಅತ್ಯಂತ ಹಿರಿಯ ಆನೆಯಾಗಿತ್ತು. ಸುಮಾರು 53 ವರ್ಷಗಳ ಕಾಲ ಮೈಸೂರು ಮೃಗಾಲಯದ ಆರೈಕೆಯಲ್ಲಿತ್ತು.

ಈ ಆನೆಯು ಗಜಲಕ್ಷ್ಮೀ(1979), ಕೋಮಲ(1996), ಅಭಿಮನ್ಯು(2004ರಲ್ಲಿ) ಮರಿಗಳಿಗೆ ಜನ್ಮ ನೀಡಿತ್ತು. ವಯಸ್ಸಾದ ಕಾರಣ ನಾಲ್ಕು ವರ್ಷಗಳ ಹಿಂದೆ ಅದನ್ನು ಮೈಸೂರು ಮೃಗಾಲಯದ ಶ್ರೀ ಚಾಮುಂಡಿ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಬುಧವಾರದವರೆಗೂ ಆನೆಯ ಆರೋಗ್ಯವು ಸ್ಥಿರವಾಗಿತ್ತು. ಆದರೆ, ಗುರುವಾರ ಬೆಳಿಗ್ಗೆಯಿಂದ ಆನೆ ಮೇಲೇಳಲು ಸಾಧ್ಯವಾಗದೆ ಮಲಗಿದ ಸ್ಥಿತಿಯಲ್ಲೇ ಇತ್ತು. ಮೈಸೂರು ಮೃಗಾಲಯದ ಪಶುವೈದ್ಯ ತಂಡವು ತಕ್ಷಣವೇ ತೀವ್ರ ವೈದ್ಯಕೀಯ ಪರೀಕ್ಷೆಗಳು ಮತ್ತು ಸಹಾಯಕ ಚಿಕಿತ್ಸೆ ಸೇರಿದಂತೆ ವೈದ್ಯಕೀಯ ಆರೈಕೆಯನ್ನು ಪ್ರಾರಂಭಿಸಿತ್ತು.

ಎಲ್ಲಾ ಪ್ರಯತ್ನಗಳ ನಡುವೆಯೂ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಸಂಜೆ 5.10 ರಲ್ಲಿ ಕೂರ್ಗಳ್ಳಿ ಕೇಂದ್ರದಲ್ಲಿ ಸಾವನ್ನಪ್ಪಿದೆ. ಸಾವಿನ ನಿಖರವಾದ ಕಾರಣವನ್ನು ತಿಳಿಯಲು ಸದ್ಯದಲ್ಲೇ ಮರಣೋತ್ತರ ಪರೀಕ್ಷೆ ನಡೆಲಾಗುವುದು ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

3 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

7 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

10 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

10 hours ago