ಮೈಸೂರು

ಹಿರಿಯ ಹೆಣ್ಣಾನೆ ಪದ್ಮಾವತಿ ಇನ್ನಿಲ್ಲ

ಮೈಸೂರು : ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ 71 ವರ್ಷದ ಪದ್ಮಾವತಿ ಆನೆ ಗುರುವಾರ ಮೃತಪಟ್ಟಿದೆ.

ಸುಮಾರು 71 ವರ್ಷ 2 ತಿಂಗಳು ವಯಸ್ಸಿನ ಪದ್ಮಾವತಿ ಎಂಬ ಹೆಣ್ಣಾನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ ಅವಿಭಾಜ್ಯ ಅಂಗವಾಗಿತ್ತು. 1973 ವರ್ಷದಲ್ಲಿ ಖೆಡ್ಡಾ ಕಾರ್ಯಾಚರಣೆಯಲ್ಲಿ(1953-54)ನೇ ವರ್ಷದಲ್ಲಿ ಅಂದಾಜು ಜನನ) ರಕ್ಷಿಸಲ್ಪಟ್ಟ ಪದ್ಮಾವತಿ ಆನೆಯು ಮೃಗಾಲಯದ ಇತಿಹಾಸದಲ್ಲಿ ಅತ್ಯಂತ ಹಿರಿಯ ಆನೆಯಾಗಿತ್ತು. ಸುಮಾರು 53 ವರ್ಷಗಳ ಕಾಲ ಮೈಸೂರು ಮೃಗಾಲಯದ ಆರೈಕೆಯಲ್ಲಿತ್ತು.

ಈ ಆನೆಯು ಗಜಲಕ್ಷ್ಮೀ(1979), ಕೋಮಲ(1996), ಅಭಿಮನ್ಯು(2004ರಲ್ಲಿ) ಮರಿಗಳಿಗೆ ಜನ್ಮ ನೀಡಿತ್ತು. ವಯಸ್ಸಾದ ಕಾರಣ ನಾಲ್ಕು ವರ್ಷಗಳ ಹಿಂದೆ ಅದನ್ನು ಮೈಸೂರು ಮೃಗಾಲಯದ ಶ್ರೀ ಚಾಮುಂಡಿ ವನ್ಯಜೀವಿ ಸಂರಕ್ಷಣೆ, ರಕ್ಷಣೆ ಹಾಗೂ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಬುಧವಾರದವರೆಗೂ ಆನೆಯ ಆರೋಗ್ಯವು ಸ್ಥಿರವಾಗಿತ್ತು. ಆದರೆ, ಗುರುವಾರ ಬೆಳಿಗ್ಗೆಯಿಂದ ಆನೆ ಮೇಲೇಳಲು ಸಾಧ್ಯವಾಗದೆ ಮಲಗಿದ ಸ್ಥಿತಿಯಲ್ಲೇ ಇತ್ತು. ಮೈಸೂರು ಮೃಗಾಲಯದ ಪಶುವೈದ್ಯ ತಂಡವು ತಕ್ಷಣವೇ ತೀವ್ರ ವೈದ್ಯಕೀಯ ಪರೀಕ್ಷೆಗಳು ಮತ್ತು ಸಹಾಯಕ ಚಿಕಿತ್ಸೆ ಸೇರಿದಂತೆ ವೈದ್ಯಕೀಯ ಆರೈಕೆಯನ್ನು ಪ್ರಾರಂಭಿಸಿತ್ತು.

ಎಲ್ಲಾ ಪ್ರಯತ್ನಗಳ ನಡುವೆಯೂ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಸಂಜೆ 5.10 ರಲ್ಲಿ ಕೂರ್ಗಳ್ಳಿ ಕೇಂದ್ರದಲ್ಲಿ ಸಾವನ್ನಪ್ಪಿದೆ. ಸಾವಿನ ನಿಖರವಾದ ಕಾರಣವನ್ನು ತಿಳಿಯಲು ಸದ್ಯದಲ್ಲೇ ಮರಣೋತ್ತರ ಪರೀಕ್ಷೆ ನಡೆಲಾಗುವುದು ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

11 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

11 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

13 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

13 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

14 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

14 hours ago