ಮೈಸೂರು : ವಚನಕಾರ ದೇವರ ದಾಸಿಮಯ್ಯ ಅವರು ಕನ್ನಡಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಬೆಂಗಳೂರಿನ ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ಕೆ. ಎಸ್.ಲಕ್ಷ್ಮಿನಾರಾಯಣ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ದೇವರ ದಾಸಿಮಯ್ಯ ಜಯಂತಿಯಲ್ಲಿ ಉಪನ್ಯಾನ ನೀಡಿದ ಅವರು, ಪ್ರಸ್ತುತ ದಾಸಿಮಯ್ಯ ಅವರ 176 ವಚನಗಳು ನಮಗೆ ಲಭ್ಯವಿದೆ. ಆ ವಚನಗಳು ಸಿಹಿ ನುಡ, ಒಳ್ಳೆಯ ಸಂದೇಶ, ಏಚ್ಚರಿಕೆಯ ಮಾತಿನ ಜೊತೆಗೆ ವ್ಯಂಗ್ಯದಿoದ ಸಹ ಕೂಡಿದ್ದಾಗಿವೆ. ಇವರು ಬಸವಣ್ಣನಿಗಿಂತ ಹಿರಿಯವರಾಗಿದ್ದರು ಎಂದು ಹೇಳಿದರು.
ವಚನಗಳ ಮೂಲಕವೇ ಅಂದಿನ ಸಮಾಜಕ್ಕೆ ಉತ್ತರ ನೀಡುತ್ತಿದ್ದ ದಾಸಿಮಯ್ಯ, ತಮ್ಮ ಮಡದಿ ಹಾಗೂ ಅನ್ನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದರು ಎಂದರು.
ಯಾದವಗಿರಿ ರಾಮಕೃಷ್ಣ ಆಶ್ರಮದ ಅಘಹರನಂದಾಜೀ ಮಹರಾಜ್ ಮಾತನಾಡಿ, ಕಾಯಕವೇ ಕೈಲಾಸ ಎಂಬಂತೆ ತಮ್ಮ ಕರ್ತವ್ಯವನ್ನು ಶ್ರದ್ದೆ ಮತ್ತು ನಿಷ್ಠೆಯಿಂದ ಮಾಡಿ. ಯಾವುದೇ ವೃತ್ತಿ ಮೇಲಲ್ಲ ಕೀಳಲ್ಲ ಪ್ರತಿಯೊಂದು ವೃತ್ತಿಯಲ್ಲಿ ಅದರದೇ ಆದ ಗೌರವವಿರುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ. ಎನ್ ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಡಾ. ಎಂ. ಡಿ ಸುದರ್ಶನ್, ಮೂಡದ ಮಾಜಿ ಅಧ್ಯಕ್ಷ ರಾಜೀವ್, ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಸದಸ್ಯ ಸಿ.ಆರ್ .ಮೂರ್ತಿ, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಆರ್.ಸುನೀಲ್, ಶೋಭ ಸುನೀತ್, ಹೇಮಾ ಗಂಗಾಪ್ಪ, ಬಾಲರಾಜ್, ಮಹಿಳಾ ಸಂಘದ ಅಧ್ಯಕ್ಷೆ ಮಂಜುಳ ಶ್ರೀನಿವಾಸ್, ನೇಕಾರ ಒಕ್ಕೂಟದ ಅಧ್ಯಕ್ಷ ದಿನೇಶ್, ಸಮುದಾಯ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನರಸಿಂಹ ಮೂರ್ತಿ ಉಪಸಿತರಿದ್ದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…