ಮೈಸೂರು

ನಮ್ಮ ಸರ್ಕಾರ ನೀಡಿರುವ ಐದು ಗ್ಯಾರೆಂಟಿಯೇ ನಮ್ಮ ಅಭ್ಯರ್ಥಿಗಳಿಗೆ ಶ್ರೀರಕ್ಷೆ !

ಮೈಸೂರು: ಕಾಂಗ್ರೆಸ್‌ ಸರ್ಕಾರದ ಐದು ಗ್ರಾರೆಂಟಿಗಳೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಶ್ರೀರಕ್ಷೆ ಎಂದು ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ತಿಳಿಸಿದರು.

ನಗರದಲ್ಲಿ ಶನಿವಾರ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ‘ಸರ್ವರ ಏಳಿಗೆ, ಅಭಿವೃದ್ಧಿಗೆ ಆದ್ಯತೆ ಹಾಗೂ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆದ್ಯತೆ’ ಎಂದು ತಿಳಿಸಿದರು.

ಸಾಮಾನ್ಯ ಕಾರ್ಯಕರ್ತ ಎಂ.ಲಕ್ಷ್ಮಣ ಅವರಿಗೆ ಹೈಕಮಾಂಡ್‌ ಟಿಕೆಟ್ ನೀಡಿದೆ. ನಾಮಪತ್ರ ಸಲ್ಲಿಕೆ ಬಳಿಕ ಪ್ರಚಾರ ತೀವ್ರಗೊಳಿಸಲಿದ್ದೇವೆ. ಅಗತ್ಯ ಸಿದ್ಧತೆ ಮತ್ತು ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದೇವೆ. ನಾವು ಗೆಲುವಿನ ಹಾದಿಯಲ್ಲಿದ್ದೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಜನರ ಸಮಸ್ಯೆಗಳನ್ನು ಪರಿಹರಿಸುವುದು ಹಾಗೂ ಅವರಿಗೆ ಲಭ್ಯವಾಗುವುದು ನಮ್ಮ ಆದ್ಯತೆ. ಇದಕ್ಕಾಗಿ ಕಾರ್ಯಕರ್ತನನ್ನು ಜನರ ನಡುವೆ ಬಿಟ್ಟಿದ್ದೇವೆ. ಜಾತ್ಯತೀತ ನಿಲುವು ಮುಂದುವರಿಸುವುದು, ಸಂವಿಧಾನದ ರಕ್ಷಣೆಯ ಸಂಕಲ್ಪ ನಮ್ಮದು. ಮೌಲ್ಯಧಾರಿತ ಚುನಾವಣೆಯನ್ನು ನಡೆಸಲಿದ್ದೇವೆ. ಪಕ್ಷದ ಅಭ್ಯರ್ಥಿಗೆ ನನ್ನ ಸಂಪೂರ್ಣ ಬೆಂಬಲವಿದೆ’ ಎಂದು ತಿಳಿಸಿದರು.

ಚಾಮರಾಜ ಶಾಸಕ ಕೆ. ಹರೀಶ್ ಗೌಡ ಮಾತನಾಡಿ, ‘ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಐವರು ಶಾಸಕರು ಕಾಂಗ್ರೆಸ್‌ನವರಾಗಿದ್ದು, ನಮ್ಮ ಬಲ ಜಾಸ್ತಿ ಇದೆ. ಕೇಂದ್ರದಲ್ಲಿ ಬಿಜೆಪಿ ನಡೆಸಿದ ದುರಾಡಳಿತವನ್ನು ಜನರಿಗೆ ತಿಳಿಸುವ ಕೆಲಸ ಮಾಡಲಿದ್ದೇವೆ. ಸಿದ್ದರಾಮಯ್ಯ ಅವರು ಮೈಸೂರಿಗೆ ನೀಡಿರುವ ಕೊಡುಗೆಗಳನ್ನು ತಿಳಿಸಲಿದ್ದೇವೆ. ಕೇವಲ 9 ತಿಂಗಳಲ್ಲಿ ಮೈಸೂರಿಗೆ ₹ 900 ಕೋಟಿಗೂ ಹೆಚ್ಚಿನ ಅನುದಾನವನ್ನು ಮುಖ್ಯಮಂತ್ರಿ ನೀಡಿದ್ದು, ಇದೆಲ್ಲವನ್ನೂ ಮನವರಿಕೆ ಮಾಡಿಕೊಟ್ಟು ಮತ ಕೇಳಲಿದ್ದೇವೆ’ ಎಂದು ತಿಳಿಸಿದರು.

ಮಾಜಿ ಶಾಸಕ ಎಚ್.ಪಿ.‌ ಮಂಜುನಾಥ್ ಮಾತನಾಡಿ, ‘ಬಿಜೆಪಿ ಅಭ್ಯರ್ಥಿ ಯದುವೀರ್ ರಾಜವಂಶಸ್ಥ ಅಲ್ಲ; ಅವರ ರಾಜವಂಶಸ್ಥರ ದತ್ತು ಪುತ್ರ ಅಷ್ಟೆ’ ಎಂದರು.

ಸಿದ್ದರಾಮಯ್ಯ ಅವರು ತಮಗೆ ಸನ್ಮಾನ ಸಂದರ್ಭದಲ್ಲಿ ನೀಡಿದ ಒಟ್ಟು 700 ಕೆ.ಜಿ. ಬೆಳ್ಳಿಯ ಪದಾರ್ಥಗಳನ್ನು ಮಲೆಮಹದೇಶ್ವರ ಬೆಟ್ಟಕ್ಕೆ ನೀಡಿದರು. ನಮಗೆ ಭಕ್ತಿ ಮನಸ್ಸಿನಲ್ಲಿದೆ. ಬಿಜೆಪಿಯವರಂತೆ ಬೀದಿಯಲ್ಲಿ ನಿಂತು ತೋರಿಸಿಕೊಳ್ಳುವುದಿಲ್ಲ’ ಎಂದು ಹೇಳಿದರು.

ಅಭ್ಯರ್ಥಿ ಎಂ. ಲಕ್ಷ್ಮಣ ಮಾತನಾಡಿ, ‘ಚುನಾವಣೆಯಲ್ಲಿ ‍ಪಕ್ಷದ ಎಲ್ಲರೂ ಗಂಭೀರವಾಗಿ ಪರಿಗಣಿಸಿದ್ದೇವೆ. ಜನರು ಬಿಜೆಪಿಯ ಕುತಂತ್ರಕ್ಕೆ ಬಲಿಯಾಗಬಾರದು. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲ ಶಾಸಕರು, ಪರಾಜಿತ ಅಭ್ಯರ್ಥಿಗಳು, ಟಿಕೆಟ್ ಆಕಾಂಕ್ಷಿ ಆಗಿದ್ದವರೆಲ್ಲರೂ ಒಗ್ಗೂಡಿ ಕೆಲಸ ಮಾಡಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಜೆ.ವಿಜಯ್‌ಕುಮಾರ್‌, ನಗರ ಜಿಲ್ಲಾ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ಪ್ರಧಾನ ಕಾರ್ಯದರ್ಶಿ ಎಂ.ಶಿವಣ್ಣ, ಮುಖಂಡರಾದ ಎಂ.ಕೆ.ಸೋಮಶೇಖರ್‌, ಎಂ. ಪ್ರದೀಪ್ ಕುಮಾರ್, ಎಚ್‌ಎ. ವೆಂಕಟೇಶ್, ಮಾವಿನಹಳ್ಳಿ ಸಿದ್ದೇಗೌಡ ಪಾಲ್ಗೊಂಡಿದ್ದರು

andolanait

Recent Posts

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

27 mins ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

1 hour ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

3 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

5 hours ago

ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…

5 hours ago

ಹಾಸನ: ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ

ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…

6 hours ago