ಮೈಸೂರು

ಆದಿವಾಸಿಗಳಿಗೆ ಸಿಗದ ಅರಣ್ಯ ಇಲಾಖೆ ಮಮತೆ

ಮೈಸೂರು ಭಾಗದಲ್ಲಿ ಹತ್ತಾರು ಪ್ರಕರಣ ದಾಖಲು

ನ್ಯಾಯಾಲಯಕ್ಕೆ ಅಲೆದಾಡುತ್ತಿರುವ ೧೫೦ ಆದಿವಾಸಿಗಳು

ಅರಣ್ಯವಾಸಿಗಳ ಹಕ್ಕು ರಕ್ಷಣೆ ಇನ್ನೂ ಗಗನಕುಸುಮ

ಮಂಜು ಕೋಟೆ

ಎಚ್.ಡಿ.ಕೋಟೆ: ಅರಣ್ಯದ ಮೇಲೆ ಪ್ರೀತಿ ಇಟ್ಟುಕೊಂಡು ಶತಮಾನಗಳಿಂದ ಮನಃಪೂರ್ವಕವಾಗಿ ಕಾಡು ರಕ್ಷಣೆ ವಾಡುತ್ತಿರುವ ಗಿರಿಜನ ಮಕ್ಕಳಿಗೆ ಅರಣ್ಯ ಇಲಾಖೆ ಎಂಬ ತಾಯಿಯಿಂದಲೇ ಸಿಗುತ್ತಿಲ್ಲ ಮಮತೆ.

ಮೈಸೂರು ಭಾಗದಲ್ಲಿಯೇ ರಾಜ್ಯದ ಮೂರನೇ ಒಂದು ಭಾಗದಷ್ಟು ಗಿರಿಜನರು ಬದುಕು ಕಂಡುಕೊಂಡಿದ್ದಾರೆ. ಆದಿವಾಸಿ ಕರಿಯಪ್ಪನ ಸಾವಿನ ಪ್ರಕರಣ ಈ ಭಾಗದ ಹಾಡಿಗಳಲ್ಲಿ ಭಯ ಮೂಡಿಸಿದೆ. ತಮ್ಮ ಹಕ್ಕುಗಳ ರಕ್ಷಣೆಗಾಗಿ ಆದಿವಾಸಿಗಳು ಹೊಸ ಮಾರ್ಗಗಳನ್ನು ಅರಸುವಂತಾಗಿದೆ.

ಮೈಸೂರು ಜಿಲ್ಲೆಯಲ್ಲಿ  215 , ಚಾಮರಾಜನಗರ ಜಿಲ್ಲೆಯಲ್ಲಿ140, ಕೊಡಗಿನಲ್ಲಿ 145 ಹಾಡಿಗಳಲ್ಲಿ ಒಟ್ಟಾರೆ ಅಂದಾಜು 3 ಲಕ್ಷ ಗಿರಿಜನರು ಇದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿಗೆ ಹೊಂದಿಕೊಂಡಿರುವ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನವನದ ವ್ಯಾಪ್ತಿಯಲ್ಲಿ ಅಧಿಕವಾಗಿದ್ದು, ಹೆಚ್ಚು ದೌರ್ಜನ್ಯದ ಪ್ರಕರಣಗಳೂ ವರದಿಯಾಗುತ್ತಿವೆ.

ಎಚ್‌ಡಿಕೋಟೆ-ಸರಗೂರು ತಾಲ್ಲೂಕಿನ ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯದ ವ್ಯಾಪ್ತಿಯಲ್ಲಿ ಕಾಡಿನೊಳಗೆ ಮತ್ತು ಕಾಡಿನ ಅಂಚಿನಲ್ಲಿರುವ 119 ಹಾಡಿಯಲ್ಲಿ ವಾಸಿಸುತ್ತಿರುವ 685 ಕುಟುಂಬದ 19 ಸಾವಿರ ಗಿರಿಜನರು ಹಲವಾರು ವರ್ಷಗಳಿಂದ ನಡೆಯುತ್ತಿರುವ ಸಾವಿನ ಪ್ರಕರಣದಿಂದಾಗಿ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅವರನ್ನು ಕಂಡರೆ ಭಯಭೀತಿಯಿಂದ ಜೀವನ ನಡೆಸುವ ಪರಿಸ್ಥಿತಿ ಎದುರಾಗಿದೆ.

ಪರಿಶಿಷ್ಟರಿಗೆ ಮೀಸಲಾಗಿರುವ ಹೆಗ್ಗಡದೇವನಕೋಟೆ ಕ್ಷೇತ್ರದಲ್ಲಿ ಗಿರಿಜನರಿಗೆ ಅರಣ್ಯ ಇಲಾಖೆಯವರು ನಡೆಸಿರುವ ಗುಂಡಿನ ದಾಳಿ ಮತ್ತು ಹಲ್ಲೆಗಳಿಂದ ಸಾವನ್ನಪ್ಪಿದ ಅನೇಕ ಕುಟುಂಬಗಳಿಗೆ ಪರಿಹಾರ ಮತ್ತು ನ್ಯಾಯದಿಂದ ಮುಂಚಿತವಾಗಿ ವಿವಿಧ ಪ್ರಕರಣಗಳಿಂದ  150 ಆದಿವಾಸಿ ಜನರು ನ್ಯಾಯಾಲಯಕ್ಕೆ  ಅಲೆದಾಡುತ್ತಿದ್ದಾರೆ.ಗಿರಿಜನರ 6 ಗಂಭೀರ ಪ್ರಕರಣಗಳಲ್ಲಿ 1 ಪ್ರಕರಣ ಮಾತ್ರ ಜೀವಂತವಾಗಿ ಉಳಿದು ನ್ಯಾಯಾಲಯ ಮತ್ತು ಸರ್ಕಾರದ ಪರಿಹಾರಕ್ಕಾಗಿ ಹಾಗೂ ನ್ಯಾಯಕ್ಕಾಗಿ ಭೀಮಸೇನ ಮತ್ತು ರವಿ ಗಿರಿಜನ ಮುಖಂಡರೊಂದಿಗೆ ಹೋರಾಟ ನಡೆಸುತ್ತಿದ್ದಾರೆ.

ಗಿರಿಜನರಿಗೆ ಸಮರ್ಪಕವಾದ ಬೆಂಬಲ ಹಾಗೂ ಅರಿವು ಹಣಕಾಸಿನ ತೊಂದರೆಯಿಂದ ಅರಣ್ಯ ಇಲಾಖೆಯ  ವಿರುದ್ಧವಾಗಿ ನ್ಯಾಯ ಪಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ಆ ಕುಟುಂಬಗಳಿಗೆ ಪರಿಹಾರ ಮತ್ತು ನ್ಯಾಯ ಮರೀಚಿಕೆಯಾಗಿದೆ.

 

‘ಗಿರಿಜನರು ಮತ್ತು ಅರಣ್ಯ ಇಲಾಖೆಯವರಿಗೆ ಅರಣ್ಯ ಹಕ್ಕು ಕಾಯಿದೆ ವಿಚಾರವಾಗಿ ಅರಿವು ಮೂಡಿಸಬೇಕಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆದಿವಾಸಿ ಜನರಿಗೆ ಸರ್ಕಾರದ ಸೌಲಭ್ಯ ಮತ್ತು ಸವಲತ್ತುಗಳನ್ನು ಸಮರ್ಪಕವಾಗಿ ಒದಗಿಸಿದಾಗ ಗಿರಿಜನರು ಕಾಡನ್ನು ಅವಲಂಬಿಸುವುದು ಸ್ವಲ್ಪ ಕಡಿಮೆಯಾಗಲಿದೆ ಎನ್ನುವುದು ಗಿರಿಜನ ಮುಖಂಡ ವಡ್ಡರಗುಡಿ ಅವರ ಚಿಕ್ಕಣ್ಣ ಸಲಹೆ.

 

ಅರಣ್ಯ ನಿವಾಸಿಗಳ ಹಕ್ಕುಗಳು ಸಂರಕ್ಷಣೆಯಾಗಬೇಕು ಎಂದು ಒಂದೂವರೆ ದಶಕದ ಹಿಂದೆಯೇ ಕಾಯಿದೆ ರೂಪಿಸಿದರೂ ಅದು ನೆಪ ಮಾತ್ರವಾಗಿದೆ. ಕಾನೂನನ್ನೇ ತಿರುಚುವ ಕೆಲಸ ನಡೆದಿದೆ. ಗಿರಿಜನರನ್ನೇ ಹೊಡೆದು ಸಾಯಿಸುವ ಪ್ರಕರಣಗಳೂ ನಡೆಯುತ್ತಲೇ ಇವೆ. ಅರಣ್ಯ ಇಲಾಖೆಯವರಿಗೆ ಮೊದಲು ಸಂವಿಧಾನದ ಆಂಶವನ್ನು ತಿಳಿಸಿಕೊಡಬೇಕಾಗಿದೆ.

-ಡೀಡ್ ಶ್ರೀಕಾಂತ್. ಗಿರಿಜನಪರ ಹೋರಾಟಗಾರ ಹುಣಸೂರು

ಎಂಥ ಸನ್ನಿವೇಶದಲ್ಲೂ ಅರಣ್ಯ ಇಲಾಖೆ ಕೆಳಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿ ಗಿರಿಜನರ ಮೇಲೆ ಅನಗತ್ಯ ಕಿರುಕುಳ ನೀಡಬಾರದು ಎನ್ನುವ ಸೂಚನೆಯನ್ನು ನೀಡಿದ್ದೇವೆ. ಬಹಳಷ್ಟು ಕಡೆ ಸೌಹಾರ್ದಯುತ ವಾತಾವರಣ ಈಗಲೂ ಇದೆ. ಪ್ರಾಣಿಬೇಟೆ, ಕಳ್ಳತನದಂಥ ಸಂದರ್ಭದಲ್ಲಿ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಲೇಬೇಕಾಗುತ್ತದೆ. ಆದರೆ, ಜೀವಹಾನಿಯಂತಹ ಪ್ರಕರಣ ಆಗಬಾರದು.

-ಕುಮಾರ ಪುಷ್ಕರ್, ಎಪಿಸಿಸಿಎಫ್, ವನ್ಯಜೀವಿ ವಿಭಾಗ ಬೆಂಗಳೂರು.

ಇನ್ನೂ ಕ್ರಮವಿಲ್ಲವೇಕೆ?

20 ದಿನದ ಹಿಂದೆಯೇ ಅರಣ್ಯ ಇಲಾಖೆ ದೌರ್ಜನ್ಯದಿಂದ ಕರಿಯಪ್ಪ ಎಂಬ ಗಿರಿಜನ ವ್ಯಕ್ತಿ ಮೃತಪಟ್ಟು ಆರ್‌ಎಫ್‌ಒ ಸಹಿತ 17ಮಂದಿ ವಿರುದ್ದ ಮೊಕದ್ದಮೆ ದಾಖಲಾಗಿದೆ. ಈವರೆಗೂ ಅವರನ್ನು ಬಂಧಿಸಿಲ್ಲ. ಅರಣ್ಯ ಇಲಾಖೆಯೂ ಕ್ರಮ ಕೈಗೊಂಡಿಲ್ಲ. ಚಿಕ್ಕಮಗಳೂರಿನಲ್ಲಿ ಕೆಲ ದಿನಗಳ ಹಿಂದೆ ಗಿರಿಜನ ವ್ಯಕ್ತಿ ಮೇಲೆ ದಾಳಿ ಮಾಡಿದವರನ್ನು ಅಲ್ಲಿನ ಪೊಲೀಸರು ಬಂಧಿಸಲು ಸಾಧ್ಯವಾದರೆ ಮೈಸೂರು ಜಿಲ್ಲಾ ಪೊಲೀಸರು ಯಾಕೆ ಕ್ರಮ ವಹಿಸಿಲ್ಲ ಎನ್ನುವುದು ಇಲ್ಲಿನ ಗಿರಿಜನರ ಪ್ರಶ್ನೆ.

andolana

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

4 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

4 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

4 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

4 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

4 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

5 hours ago