ಮೈಸೂರು

ಸರ್ಕಾರದ ಪರಿಸ್ಥಿತಿ ಈಗ ಬಹಿರಂಗ: ಹೇಮಾ ನಂದೀಶ್ ಟೀಕೆ

ಮೈಸೂರು: ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು, ರಸ್ತೆ, ಶಾಲೆ, ಅಭಿವೃದ್ಧಿ ಕಾರ್ಯಗಳು ಬೇಕೆಂದರೆ, ಗ್ಯಾರಂಟಿಗಳನ್ನು ಬಿಡಬೇಕು, ನೀವು ಒಪ್ಪಿದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಮುಖ್ಯಮಂತ್ರಿಗಳಿಗೆ ಹೇಳುತ್ತೇನೆ. ಆ ನಂತರ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಆಗುತ್ತೆ ಎಂದು ಹೇಳುವ ಮೂಲಕ ಸರಕಾರದ ಮನಸ್ಥಿತಿ ಮತ್ತು ಪರಿಸ್ಥಿತಿಯನ್ನು ಬಹಿರಂಗ ಪಡಿಸಿದ್ದಾರೆ’ ಎಂದು ಬಿಜೆಪಿ ನಗರ ಉಪಾಧ್ಯಕ್ಷರಾದ ಹೇಮಾ ನಂದೀಶ್ ಟೀಕಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ಸರಕಾರಕ್ಕೆ ಅಭಿವೃದ್ಧಿಗೆ ಹಣ ಇಲ್ಲ ಎಂಬುವುದನ್ನು ಬಹಿರಂಗವಾಗಿ ಹೇಳಿದ್ದಾರೆ. ಅಭಿವೃದ್ಧಿ ಬೇಕೆಂದರೆ ಗ್ಯಾರಂಟಿಗಳನ್ನು ತಿರಸ್ಕರಿಸಿ ಎನ್ನುವ ಮೂಲಕ ಸರಕಾರದ ವಾಸ್ತವತೆಯನ್ನು ತಿಳಿಸಿದ್ದಾರೆ ಎಂದಿದ್ದಾರೆ.

ಎರಡು ವರ್ಷದ ಹಿಂದೆ ಅಧಿಕಾರಕ್ಕಾಗಿ ಪೂರ್ವಾಪರ ಯೋಚಿಸದೆ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿ, ಜನರಿಗೆ ಆಮಿಷ ತೋರಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಈಗ ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿಲ್ಲ, ಆದರೆ, ಗ್ಯಾರಂಟಿ ನೆಪದಲ್ಲಿ ಪ್ರತಿಯೊಂದರ ಬೆಲೆ ಏರಿಸಿದೆ. ಹಾಲಿನಿಂದ ಆಲ್ಕೋಹಾಲ್‌ವರೆಗೆ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೆ ಏರಿಕೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಭ್ರಷ್ಟಾಚಾರದಲ್ಲಿ ದಾಖಲೆ ಮಾಡಿದೆ. ಎಸ್‌ಟಿ ನಿಗಮದಲ್ಲಿ 187 ಕೋಟಿ ರೂ. ಭ್ರಷ್ಟಾಚಾರ, ವಸತಿ ಇಲಾಖೆ, ಅಬಕಾರಿ ಸೇರಿ ಸ್ವತಃ ಮುಖ್ಯಮಂತ್ರಿಗಳೇ ಮುಡಾ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ಸರಕಾರ ಜನರಿಗೆ ಗ್ಯಾರಂಟಿ ಯೋಜನೆ ನೀಡಲು ಪರದಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

3 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

6 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

10 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

12 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

13 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

14 hours ago