ಮೈಸೂರು : ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಪಂಚ ರಥೋತ್ಸವ ಅದ್ದೂರಿಯಾಗಿ ನಡೆದಿದೆ. ದೊಡ್ಡೆ ಜಾತ್ರೆ ಎಂದೇ ಕರೆಸಿಕೊಳ್ಳುವ ಇಲ್ಲಿನ ರಥೋತ್ಸವಕ್ಕೆ ಸಹಸ್ರಾರು ಮಂದಿ ಸಾಕ್ಷಿಯಾದರು.
ಬುಧವಾರ ಬೆಳಿಗ್ಗೆ 5 ರಿಂದ 5.40 ಶುಭ ಮೀನ ಲಗ್ನದಲ್ಲಿ ರಥೋತ್ಸವ ಜರುಗಿತು. ಮಧ್ಯರಾತ್ರಿಯಿಂದಲೇ ಜಾತ್ರೋತ್ಸವದ ಪೂಜಾ ಕೈಂಕರ್ಯಗಳು ಆರಂಭವಾಗಿ, ವಿವಿಧ ಹೋಮ, ಹವನಗಳು ನಡೆದವು. ಪಾರ್ವತಿ, ಗಣಪತಿ ಹಾಗೂ ಸುಬ್ರಮಣ್ಯ ಮತ್ತು ಚಂಡಕೇಶ್ವರಿಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ 6 ಗಂಟೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.
ರಥೋತ್ಸವದಲ್ಲಿ ವಿರಾಜಮಾನನಾಗಿದ್ದ ನಂಜನಗೂಡಿನ ಶ್ರೀಕಂಠೇಶ್ವರ ತೇರನ್ನು ದೇವಾಲಯದ ಸತ್ತ ಎಳೆಯಲಾಯಿತು. ವರ್ಷಕೊಮ್ಮೆ ನಡೆಯುವ ನಂಜುಂಡೇಶ್ವರ ರಥೋತ್ಸವವನ್ನು ಕಂಡು ಸಹಸ್ರಾರು ಮಂದಿ ಕಣ್ತುಂಬಿಕೊಂಡರು.
ಜಾತ್ರೆಯಲ್ಲಿ ಹೆಚ್ಚು ಜನ ಸೇರಿದ್ದರಿಂದ ಮುನ್ನೆಚ್ಚರಿಕೆಯಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಶಾಸಕ ದರ್ಶನ್ ಧ್ರುವ ನಾರಾಯಣ್ ಸೇರಿದಂತೆ ಜಿಲ್ಲಾಡಳಿತದ ಪ್ರಮುಖರು ರಥೋತ್ಸವದಲ್ಲಿ ಭಾಗಿಯಾಗಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…