ಮೈಸೂರು

ʼಕೈʼ ನಾಯಕರಲ್ಲಿ ರಕ್ತ ಇರೋವರೆಗೂ ಗ್ಯಾರಂಟಿ ಯೋಜನೆ ನಿಲ್ಲದು : ಸುರ್ಜೆವಾಲ!

ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುವಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೆಯೇಂದ್ರ ಅವರು ಪ್ರತೀ ದಿನ ನಮ್ಮ ಗ್ಯಾರಂಟಿ ಯೋಜನೆ ಬಗ್ಗೆಯೇ ಮಾತನಾಡುತ್ತಾರೆ. ನಮ್ಮ ಯೋಜನೆಯನ್ನು ನೀವೇಕೆ ವಿರೋಧಿಸುತ್ತೀರಿ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಏಕೆ ಅಪಮಾನ ಮಾಡುತ್ತೀರಿ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದರು.

ಭಾನುವಾರ ನಗರದ ಬೋಗಾದಿಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪ್ರತಿನಿತ್ಯ ೩೫ ಲಕ್ಷ ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಾಯಾಣಿಸುವ ಮೂಲಕ ಶಕ್ತಿಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದರು.

ಸುವಾರು ೧.೨೧ ಕೋಟಿಗೂ ಅಧಿಕ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ೧.೮೦ ಕೋಟಿ ಮಂದಿ ಗೃಹ ಜ್ಯೋತಿ ಫಲಾನುಭವಿಗಳಾಗಿದ್ದಾರೆ. ಆದ್ದರಿಂದ ಮೈತ್ರಿ ಪಕ್ಷಗಳು ನೀಡುತ್ತಿರುವ ಹೇಳಿಕೆಗಳು ಯೋಜನೆಯ ಫಲಾನುಭವಿಗಳನ್ನು ಅಪಮಾನ ಮಾಡಿದಂತಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಚುನಾವಣೆ ಮುಗಿದಮೇಲೆ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆ  ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುವಾರ್ ಸೇರಿದಂತೆ ಕಾಂಗ್ರೆಸ್ ನಾಯಕರುಗಳ ರಕ್ತ ಇರೋವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮ ಪಕ್ಷದ ನಾಯಕರು, ಮುಖಂಡರು, ಜಿಲ್ಲಾ ಮಟ್ಟದ ಪದಾಧಿಕಾರಿಗಳ ರಕ್ತದ ಪ್ರತಿಕಣಕಣದಲ್ಲೂ ಗ್ಯಾರಂಟಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಬದ್ಧತೆ ಇದೆ.

ನಮ್ಮ ದೇಹದಲ್ಲಿ ಒಂದು ಹನಿ ರಕ್ತ ಸಂಚಾರವಿರುವ ತನಕವೂ ನಾವು ಯೋಜನೆಗಳನ್ನು ನಿಲ್ಲಿಸಲು ಹೋಗುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಸಂವಿಧಾನ ಬದಲಾವಣೆ ಬಿಜೆಪಿ ಡಿಎನ್‌ಎಯಲ್ಲಿ ಇದೆ. ಇದರ ಜೊತೆಗೆ ದಲಿತ, ರೈತ, ಮಹಿಳಾ ವಿರೋಧಿ ಡಿಎನ್‌ಎ ಕೂಡ ಬಿಜೆಪಿ ಹೊಂದಿದೆ. ಅವರ ಪಕ್ಷದ ಅಭ್ಯರ್ಥಿಗಳು ಸಂವಿಧಾನ ಬದಲಾವಣೆ ಮಾಡುತೇವೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದರೂ ಏಕೆ ಕ್ರಮ ಕೈಗೊಂಡಿಲ್ಲ. ಇದರಿಂದ ಅವರ ನಿಲುವು ಜನರಿಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

5 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

6 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

7 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

7 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

8 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

8 hours ago