ಮೈಸೂರು

15 ಮಹಿಳೆಯರನ್ನು ವಿವಾಹವಾಗಿ ವಂಚಿಸಿದವ ಪೊಲೀಸರ ಅತಿಥಿ

ಮೈಸೂರು: ಮೋಸ ಆಗುವವರು ಇರೋವರೆಗೂ ಮೋಸ ಮಾಡುವವರು ಇದ್ದೇ ಇರ್ತಾರೆ. ಜಗತ್ತೇ ಬೆಚ್ಚಿಬೀಳುವಂತಹ ಕೆಲಸ ಮಾಡಿದ ವ್ಯಕ್ತಿ ಈಗ ಮೈಸೂರಲ್ಲಿ ತಗ್ಲಾಕೊಂಡಿದ್ದಾನೆ. ಈತ 15 ಮೈಸೂರಿನ ಕುವೆಂಪುನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ‌ ನಡೆಸಿ ಒಂದಲ್ಲಾ, ಎರಡಲ್ಲಾ ಬರೋಬ್ಬರಿ 15 ಮದುವೆಯಾಗಿ ವಂಚನೆ ಮಾಡಿದ್ದ ಆರೋಪಿಯನ್ನ ಬಂಧಿಸಿದ್ದಾರೆ.

ಬೆಂಗಳೂರಿನ ಬನಶಂಕರಿ ಬಡಾವಣೆ ನಿವಾಸಿ ಮಹೇಶ್ ಬಂಧಿತನಾಗಿದ್ದು, ವಿಧವೆ, ಅವಿವಾಹಿತ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಮದುವೆಯಾಗಿ ಮಹಿಳೆಯರನ್ನ ವಂಚಿಸುತ್ತಿದ್ದ ಆರೋಪಿ ಹಣ, ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ. ಡಾಕ್ಟರ್ ಎಂದು ಹೇಳಿ ಮೈಸೂರಿನ ಮಹಿಳೆಯೊಬ್ಬರನ್ನ ಆನ್ ಲೈನಲ್ಲಿ ಪರಿಚಯಿಸಿಕೊಂಡು ನಂಬಿಸಿ ವಿಶಾಖಪಟ್ಟಣದಲ್ಲಿ ಮದುವೆಯಾಗಿದ್ದ. ಕ್ಲಿನಿಕ್ ತೆರೆಯಬೇಕೆಂದು 70 ಲಕ್ಷ ರೂಪಾಯಿ ಸಾಲವನ್ನು ಕೊಡಿಸುವಂತೆ ಮಹೇಶ್ ಒತ್ತಾಯಿಸಿದ್ದು, ಸಾಲ ಕೊಡಿಸಲು ಮಹಿಳೆ ಹಿಂದೇಟು ಹಾಕಿದ್ದರು.

ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು

ಈ ಹಿನ್ನೆಲೆ ಮಹಿಳೆಗೆ ಕೊಲೆ ಬೆದರಿಕೆ ಹಾಕಿ 15 ಲಕ್ಷ ಹಣ, ಚಿನ್ನಾಭರಣ ಕದ್ದು ಮಹೇಶ್ ಪರಾರಿಯಾಗಿದ್ದು, ಈ ಸಂಬಂಧ ಕುವೆಂಪುನಗರ ಪೊಲೀಸರಿಗೆ ಮಹಿಳೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿ ಮಹೇಶನ ಹೆಡೆಮುರಿ ಕಟ್ಟಿದ್ದಾರೆ.

ಬಂಧಿತನಿಂದ 2 ಲಕ್ಷ ನಗದು, 2 ಕಾರ್, ಬ್ರೇಸ್ ಲೇಟ್, ಉಂಗುರ, ಎರಡು ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನ ವಿಚಾರಣೆ ವೇಳೆ ಈತ ತಾನು ಡಾಕ್ಟರ್, ಇಂಜಿನಿಯರ್, ಸಿವಿಲ್ ಕಂಟ್ರಾಕ್ಟರ್ ಎಂದು ಹೇಳಿಕೊಂಡು ಈವರೆಗೆ ಸುಮಾರು 15 ಮಹಿಳೆಯರಿಗೆ ದೋಖಾ ಮಾಡಿರುವುದು ಬೆಳಕಿಗೆ ಬಂದಿದೆ.

ಮಾತಲ್ಲಿ ಮರುಳು ಮಾಡ್ತಿದ್ದ ಮಹೇಶ್..!

ಹೆಣ್ಣು ಮಕ್ಕಳ ಜೊತೆ ಬಹಳ ನಾಜೂಕಾಗಿ ವರ್ತಿಸುತ್ತಿದ್ದ ಮಹೇಶ್, ತನ್ನ ಪ್ರೀತಿಯ ಮಾತುಗಳಿಂದ ಎಲ್ಲರನ್ನ ಬಲೆಗೆ ಬೀಳಿಸಿಕೊಳ್ತಿದ್ದ. ತನ್ನ ವರ್ತನೆಯಲ್ಲಿ ಯಾರಿಗೂ ಅನುಮಾನ ಬಾರದ ರೀತಿ ತನ್ನ ಕೆಲಸ ಮಾಡಿಕೊಳ್ಳುತ್ತಿದ್ದ. ಹೆಣ್ಮಕ್ಕಳಿಂದ ಪಡೆದ ದುಡ್ಡಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ. ಯಾರೊಬ್ಬರಿಗೂ ಡೌಟ್ ಬಾರದ ರೀತಿ ಇವನ ಜೀವನ ಮುಂದುವರಿದಿತ್ತು. ಹೀಗೆಯೇ ಬರೋಬ್ಬರಿ 15 ಮಂದಿಗೆ ದೋಖಾ ಮಾಡಿದ್ದು, ಈಗ ಕಡೆಗೂ ಪೊಲೀಸರ ಅತಿಥಿಯಾಗಿದ್ದಾನೆ . ಪೊಲೀಸರು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದು, ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.

ಕೆಲ ದಿನಗಳ ಹಿಂದೆ ಮಂಗಳೂರಿನಲ್ಲೂ ಇದೇ ರೀತಿ ಹೆಣ್ಣುಮಕ್ಕಳಿಗೆ ಮೋಸ ಮಾಡುತ್ತಿದ್ದ ಖದೀಮನೊಬ್ಬನ ಬಂಧನವಾಗಿತ್ತು. ಸಾಮಾಜಿಕ ಜಾಲತಾಣಗಳ ಮೂಲಕ ಹೆಣ್ಣುಮಕ್ಕಳನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬ ಹೆಣ್ಣುಮಕ್ಕಳನ್ನು ಪ್ರೀತಿ ಪ್ರೇಮದ ಬಲೆಗೆ ಬೀಳಿಸಿ ಅವರ ಹಣದಲ್ಲೇ ಮಜಾ ಮಾಡುತ್ತಿದ್ದ. ಸಂತ್ರಸ್ತ ಯುವತಿಯೊಬ್ಬಳು ಈತನ ಬಗ್ಗೆ ಪೊಲೀಸರಿಗೆ ದೂರು ನೀಡಿದಾಗ ಆತನ ವಂಚನೆ ಬಯಲಿಗೆ ಬಂದಿತ್ತು. ವಿವಾಹಿತನಾಗಿದ್ದ ಆತ ಶೋಕಿಗೋಸ್ಕರ ಇದನ್ನೆಲ್ಲಾ ಮಾಡುತ್ತಿದ್ದ ಎಂದು ತಿಳಿದು ಬಂದಿತ್ತು.

andolanait

Recent Posts

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 mins ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

12 mins ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

31 mins ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

54 mins ago

ನಟ ದರ್ಶನ್‌ಗೆ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಹೊಸ ಎನ್‌ಸಿಆರ್‌

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…

2 hours ago

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ…

3 hours ago