ಮೈಸೂರು: ಮೋಸ ಆಗುವವರು ಇರೋವರೆಗೂ ಮೋಸ ಮಾಡುವವರು ಇದ್ದೇ ಇರ್ತಾರೆ. ಜಗತ್ತೇ ಬೆಚ್ಚಿಬೀಳುವಂತಹ ಕೆಲಸ ಮಾಡಿದ ವ್ಯಕ್ತಿ ಈಗ ಮೈಸೂರಲ್ಲಿ ತಗ್ಲಾಕೊಂಡಿದ್ದಾನೆ. ಈತ 15 ಮೈಸೂರಿನ ಕುವೆಂಪುನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಒಂದಲ್ಲಾ, ಎರಡಲ್ಲಾ ಬರೋಬ್ಬರಿ 15 ಮದುವೆಯಾಗಿ ವಂಚನೆ ಮಾಡಿದ್ದ ಆರೋಪಿಯನ್ನ ಬಂಧಿಸಿದ್ದಾರೆ.
ಬೆಂಗಳೂರಿನ ಬನಶಂಕರಿ ಬಡಾವಣೆ ನಿವಾಸಿ ಮಹೇಶ್ ಬಂಧಿತನಾಗಿದ್ದು, ವಿಧವೆ, ಅವಿವಾಹಿತ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಮದುವೆಯಾಗಿ ಮಹಿಳೆಯರನ್ನ ವಂಚಿಸುತ್ತಿದ್ದ ಆರೋಪಿ ಹಣ, ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ. ಡಾಕ್ಟರ್ ಎಂದು ಹೇಳಿ ಮೈಸೂರಿನ ಮಹಿಳೆಯೊಬ್ಬರನ್ನ ಆನ್ ಲೈನಲ್ಲಿ ಪರಿಚಯಿಸಿಕೊಂಡು ನಂಬಿಸಿ ವಿಶಾಖಪಟ್ಟಣದಲ್ಲಿ ಮದುವೆಯಾಗಿದ್ದ. ಕ್ಲಿನಿಕ್ ತೆರೆಯಬೇಕೆಂದು 70 ಲಕ್ಷ ರೂಪಾಯಿ ಸಾಲವನ್ನು ಕೊಡಿಸುವಂತೆ ಮಹೇಶ್ ಒತ್ತಾಯಿಸಿದ್ದು, ಸಾಲ ಕೊಡಿಸಲು ಮಹಿಳೆ ಹಿಂದೇಟು ಹಾಕಿದ್ದರು.
ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು
ಈ ಹಿನ್ನೆಲೆ ಮಹಿಳೆಗೆ ಕೊಲೆ ಬೆದರಿಕೆ ಹಾಕಿ 15 ಲಕ್ಷ ಹಣ, ಚಿನ್ನಾಭರಣ ಕದ್ದು ಮಹೇಶ್ ಪರಾರಿಯಾಗಿದ್ದು, ಈ ಸಂಬಂಧ ಕುವೆಂಪುನಗರ ಪೊಲೀಸರಿಗೆ ಮಹಿಳೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿ ಮಹೇಶನ ಹೆಡೆಮುರಿ ಕಟ್ಟಿದ್ದಾರೆ.
ಬಂಧಿತನಿಂದ 2 ಲಕ್ಷ ನಗದು, 2 ಕಾರ್, ಬ್ರೇಸ್ ಲೇಟ್, ಉಂಗುರ, ಎರಡು ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನ ವಿಚಾರಣೆ ವೇಳೆ ಈತ ತಾನು ಡಾಕ್ಟರ್, ಇಂಜಿನಿಯರ್, ಸಿವಿಲ್ ಕಂಟ್ರಾಕ್ಟರ್ ಎಂದು ಹೇಳಿಕೊಂಡು ಈವರೆಗೆ ಸುಮಾರು 15 ಮಹಿಳೆಯರಿಗೆ ದೋಖಾ ಮಾಡಿರುವುದು ಬೆಳಕಿಗೆ ಬಂದಿದೆ.
ಮಾತಲ್ಲಿ ಮರುಳು ಮಾಡ್ತಿದ್ದ ಮಹೇಶ್..!
ಹೆಣ್ಣು ಮಕ್ಕಳ ಜೊತೆ ಬಹಳ ನಾಜೂಕಾಗಿ ವರ್ತಿಸುತ್ತಿದ್ದ ಮಹೇಶ್, ತನ್ನ ಪ್ರೀತಿಯ ಮಾತುಗಳಿಂದ ಎಲ್ಲರನ್ನ ಬಲೆಗೆ ಬೀಳಿಸಿಕೊಳ್ತಿದ್ದ. ತನ್ನ ವರ್ತನೆಯಲ್ಲಿ ಯಾರಿಗೂ ಅನುಮಾನ ಬಾರದ ರೀತಿ ತನ್ನ ಕೆಲಸ ಮಾಡಿಕೊಳ್ಳುತ್ತಿದ್ದ. ಹೆಣ್ಮಕ್ಕಳಿಂದ ಪಡೆದ ದುಡ್ಡಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ. ಯಾರೊಬ್ಬರಿಗೂ ಡೌಟ್ ಬಾರದ ರೀತಿ ಇವನ ಜೀವನ ಮುಂದುವರಿದಿತ್ತು. ಹೀಗೆಯೇ ಬರೋಬ್ಬರಿ 15 ಮಂದಿಗೆ ದೋಖಾ ಮಾಡಿದ್ದು, ಈಗ ಕಡೆಗೂ ಪೊಲೀಸರ ಅತಿಥಿಯಾಗಿದ್ದಾನೆ . ಪೊಲೀಸರು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದು, ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.
ಕೆಲ ದಿನಗಳ ಹಿಂದೆ ಮಂಗಳೂರಿನಲ್ಲೂ ಇದೇ ರೀತಿ ಹೆಣ್ಣುಮಕ್ಕಳಿಗೆ ಮೋಸ ಮಾಡುತ್ತಿದ್ದ ಖದೀಮನೊಬ್ಬನ ಬಂಧನವಾಗಿತ್ತು. ಸಾಮಾಜಿಕ ಜಾಲತಾಣಗಳ ಮೂಲಕ ಹೆಣ್ಣುಮಕ್ಕಳನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬ ಹೆಣ್ಣುಮಕ್ಕಳನ್ನು ಪ್ರೀತಿ ಪ್ರೇಮದ ಬಲೆಗೆ ಬೀಳಿಸಿ ಅವರ ಹಣದಲ್ಲೇ ಮಜಾ ಮಾಡುತ್ತಿದ್ದ. ಸಂತ್ರಸ್ತ ಯುವತಿಯೊಬ್ಬಳು ಈತನ ಬಗ್ಗೆ ಪೊಲೀಸರಿಗೆ ದೂರು ನೀಡಿದಾಗ ಆತನ ವಂಚನೆ ಬಯಲಿಗೆ ಬಂದಿತ್ತು. ವಿವಾಹಿತನಾಗಿದ್ದ ಆತ ಶೋಕಿಗೋಸ್ಕರ ಇದನ್ನೆಲ್ಲಾ ಮಾಡುತ್ತಿದ್ದ ಎಂದು ತಿಳಿದು ಬಂದಿತ್ತು.
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…
ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…
ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು…
ಮೈಸೂರು : ಲಂಡನ್ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…
ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…
ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…