ಮೈಸೂರು

15 ಮಹಿಳೆಯರನ್ನು ವಿವಾಹವಾಗಿ ವಂಚಿಸಿದವ ಪೊಲೀಸರ ಅತಿಥಿ

ಮೈಸೂರು: ಮೋಸ ಆಗುವವರು ಇರೋವರೆಗೂ ಮೋಸ ಮಾಡುವವರು ಇದ್ದೇ ಇರ್ತಾರೆ. ಜಗತ್ತೇ ಬೆಚ್ಚಿಬೀಳುವಂತಹ ಕೆಲಸ ಮಾಡಿದ ವ್ಯಕ್ತಿ ಈಗ ಮೈಸೂರಲ್ಲಿ ತಗ್ಲಾಕೊಂಡಿದ್ದಾನೆ. ಈತ 15 ಮೈಸೂರಿನ ಕುವೆಂಪುನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ‌ ನಡೆಸಿ ಒಂದಲ್ಲಾ, ಎರಡಲ್ಲಾ ಬರೋಬ್ಬರಿ 15 ಮದುವೆಯಾಗಿ ವಂಚನೆ ಮಾಡಿದ್ದ ಆರೋಪಿಯನ್ನ ಬಂಧಿಸಿದ್ದಾರೆ.

ಬೆಂಗಳೂರಿನ ಬನಶಂಕರಿ ಬಡಾವಣೆ ನಿವಾಸಿ ಮಹೇಶ್ ಬಂಧಿತನಾಗಿದ್ದು, ವಿಧವೆ, ಅವಿವಾಹಿತ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಮದುವೆಯಾಗಿ ಮಹಿಳೆಯರನ್ನ ವಂಚಿಸುತ್ತಿದ್ದ ಆರೋಪಿ ಹಣ, ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ. ಡಾಕ್ಟರ್ ಎಂದು ಹೇಳಿ ಮೈಸೂರಿನ ಮಹಿಳೆಯೊಬ್ಬರನ್ನ ಆನ್ ಲೈನಲ್ಲಿ ಪರಿಚಯಿಸಿಕೊಂಡು ನಂಬಿಸಿ ವಿಶಾಖಪಟ್ಟಣದಲ್ಲಿ ಮದುವೆಯಾಗಿದ್ದ. ಕ್ಲಿನಿಕ್ ತೆರೆಯಬೇಕೆಂದು 70 ಲಕ್ಷ ರೂಪಾಯಿ ಸಾಲವನ್ನು ಕೊಡಿಸುವಂತೆ ಮಹೇಶ್ ಒತ್ತಾಯಿಸಿದ್ದು, ಸಾಲ ಕೊಡಿಸಲು ಮಹಿಳೆ ಹಿಂದೇಟು ಹಾಕಿದ್ದರು.

ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು

ಈ ಹಿನ್ನೆಲೆ ಮಹಿಳೆಗೆ ಕೊಲೆ ಬೆದರಿಕೆ ಹಾಕಿ 15 ಲಕ್ಷ ಹಣ, ಚಿನ್ನಾಭರಣ ಕದ್ದು ಮಹೇಶ್ ಪರಾರಿಯಾಗಿದ್ದು, ಈ ಸಂಬಂಧ ಕುವೆಂಪುನಗರ ಪೊಲೀಸರಿಗೆ ಮಹಿಳೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿ ಮಹೇಶನ ಹೆಡೆಮುರಿ ಕಟ್ಟಿದ್ದಾರೆ.

ಬಂಧಿತನಿಂದ 2 ಲಕ್ಷ ನಗದು, 2 ಕಾರ್, ಬ್ರೇಸ್ ಲೇಟ್, ಉಂಗುರ, ಎರಡು ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನ ವಿಚಾರಣೆ ವೇಳೆ ಈತ ತಾನು ಡಾಕ್ಟರ್, ಇಂಜಿನಿಯರ್, ಸಿವಿಲ್ ಕಂಟ್ರಾಕ್ಟರ್ ಎಂದು ಹೇಳಿಕೊಂಡು ಈವರೆಗೆ ಸುಮಾರು 15 ಮಹಿಳೆಯರಿಗೆ ದೋಖಾ ಮಾಡಿರುವುದು ಬೆಳಕಿಗೆ ಬಂದಿದೆ.

ಮಾತಲ್ಲಿ ಮರುಳು ಮಾಡ್ತಿದ್ದ ಮಹೇಶ್..!

ಹೆಣ್ಣು ಮಕ್ಕಳ ಜೊತೆ ಬಹಳ ನಾಜೂಕಾಗಿ ವರ್ತಿಸುತ್ತಿದ್ದ ಮಹೇಶ್, ತನ್ನ ಪ್ರೀತಿಯ ಮಾತುಗಳಿಂದ ಎಲ್ಲರನ್ನ ಬಲೆಗೆ ಬೀಳಿಸಿಕೊಳ್ತಿದ್ದ. ತನ್ನ ವರ್ತನೆಯಲ್ಲಿ ಯಾರಿಗೂ ಅನುಮಾನ ಬಾರದ ರೀತಿ ತನ್ನ ಕೆಲಸ ಮಾಡಿಕೊಳ್ಳುತ್ತಿದ್ದ. ಹೆಣ್ಮಕ್ಕಳಿಂದ ಪಡೆದ ದುಡ್ಡಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ. ಯಾರೊಬ್ಬರಿಗೂ ಡೌಟ್ ಬಾರದ ರೀತಿ ಇವನ ಜೀವನ ಮುಂದುವರಿದಿತ್ತು. ಹೀಗೆಯೇ ಬರೋಬ್ಬರಿ 15 ಮಂದಿಗೆ ದೋಖಾ ಮಾಡಿದ್ದು, ಈಗ ಕಡೆಗೂ ಪೊಲೀಸರ ಅತಿಥಿಯಾಗಿದ್ದಾನೆ . ಪೊಲೀಸರು ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದು, ಇನ್ನಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ.

ಕೆಲ ದಿನಗಳ ಹಿಂದೆ ಮಂಗಳೂರಿನಲ್ಲೂ ಇದೇ ರೀತಿ ಹೆಣ್ಣುಮಕ್ಕಳಿಗೆ ಮೋಸ ಮಾಡುತ್ತಿದ್ದ ಖದೀಮನೊಬ್ಬನ ಬಂಧನವಾಗಿತ್ತು. ಸಾಮಾಜಿಕ ಜಾಲತಾಣಗಳ ಮೂಲಕ ಹೆಣ್ಣುಮಕ್ಕಳನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ವ್ಯಕ್ತಿಯೊಬ್ಬ ಹೆಣ್ಣುಮಕ್ಕಳನ್ನು ಪ್ರೀತಿ ಪ್ರೇಮದ ಬಲೆಗೆ ಬೀಳಿಸಿ ಅವರ ಹಣದಲ್ಲೇ ಮಜಾ ಮಾಡುತ್ತಿದ್ದ. ಸಂತ್ರಸ್ತ ಯುವತಿಯೊಬ್ಬಳು ಈತನ ಬಗ್ಗೆ ಪೊಲೀಸರಿಗೆ ದೂರು ನೀಡಿದಾಗ ಆತನ ವಂಚನೆ ಬಯಲಿಗೆ ಬಂದಿತ್ತು. ವಿವಾಹಿತನಾಗಿದ್ದ ಆತ ಶೋಕಿಗೋಸ್ಕರ ಇದನ್ನೆಲ್ಲಾ ಮಾಡುತ್ತಿದ್ದ ಎಂದು ತಿಳಿದು ಬಂದಿತ್ತು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

4 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

5 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

7 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

13 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

19 hours ago