ಮೈಸೂರು

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ ತೋರದೇ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಶಾಸಕ ಜಿ ಟಿ ದೇವೇಗೌಡ ಹೇಳಿದರು.

ನಗರದ ಹೂಟಗಳ್ಳಿ ನಗರ ಸಭೆ ಆವರಣದಲ್ಲಿ ಸಮೃದ್ಧಿ ಟ್ರಸ್ಟ್ , ಅನ್ನಪೂರ್ಣ ಕಣ್ಣಿನ ಆಸ್ಪತ್ರೆ, ಎನ್ ಪಿ ಆಸ್ಪತ್ರೆ ಹಾಗೂ ಬಯೋ ಸ್ನೇಹಿ ರವರ ಸಹಯೋಗದೊಂದಿಗೆ ಪೌರ ಕಾರ್ಮಿಕರಿಗೆ ಉಚಿತ ಕಣ್ಣಿತ ತಪಾಸಣಾ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿಡುತ್ತಿರುವ ಕಾರಣದಿಂದ ಇಂದು ನಮ್ಮೆಲ್ಲರ ಆರೋಗ್ಯ ಉತ್ತಮವಾಗಿದೆ. ಪೌರ ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಆರೋಗ್ಯ ತಪಾಸಣೆಯನ್ನು ಮಾಡಿಸಲಾಗುತ್ತಿದೆ. ಕೆಲಸದ ಒತ್ತಡ ದಲ್ಲಿ ಮಾಡುವ ಕೆಲವೊಂದು ನಿರ್ಲಕ್ಷ್ಯತನದಿಂದ ನಮ್ಮ ಆರೋಗ್ಯ ಹಾಳಾಗುತ್ತಿದೆ. ಪೌರಕಾರ್ಮಿಕರು ಆರೋಗ್ಯ ತಪಾಸಣೆ ಶಿಬಿರ ಗಳಿಗೆ ಸೀಮಿತವಾಗದೇ ನಿತ್ಯ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಹೇಳಿದರು.

ಪೌರಕಾರ್ಮಿಕರು ಆರೋಗ್ಯವಾಗಿದ್ದರೆ ಇಡೀ ನಗರ ಆರೋಗ್ಯ ವಾಗಿರುತ್ತದೆ. ಪೌರಕಾರ್ಮಿಕರು ಆರೋಗ್ಯವಂತರಾಗಿದ್ದರೆ ನಗರದ ಸ್ವಚ್ಛತೆಯನ್ನು ಕಾಪಾಡಿ ಎಲ್ಲರ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ. ಆದುದರಿಂದ ಅವರು ಇಂತಹ ಆರೋಗ್ಯ ಶಿಬಿರಗಳನ್ನು ಸದುಪಯೋಗ ಪಡೆದು ಕೊಳ್ಳಬೇಕು ಎಂದರು.

ನಗರಸಭೆ ಆಯುಕ್ತರದ ಚಂದ್ರಶೇಖರ್, ಸಹಾಯಕ ಕಾರ್ಯಪಾಲಕ ಅಭಿಯಂತರರು ಗಿರಿಜಾ, ಸಮೃದ್ಧಿ ವಾರ್ತೆ ಪತ್ರಿಕೆಯ ಸಂಪಾದಕಿ ಸಹನಗೌಡ, ಒಂದು ಹೆಜ್ಜೆ ರಕ್ತದಾನಿಗಳ ಬಳಗದ ಅಧ್ಯಕ್ಷರಾದ  ಮಂಜು , ಅನ್ನಪೂರ್ಣ ಕಣ್ಣಿನ ಆಸ್ಪತ್ರೆ ಎಂ.ಡಿ.ಅಶ್ವತ್ ಕುಮಾರ್, ಎನ್‌.ಪಿ ಆಸ್ಪತ್ರೆ ವಿರಪ್ಪ, ಹೆಲ್ತ್ ಇನ್ಸ್ಪೆಕ್ಟರ್ ಗಳಾದ ಶಂಕರ್ ಲಿಂಗೇಗೌಡರು, ಶಿವಪ್ರಸಾದ್, ನೇತ್ರಾವತಿ, ಪುಷ್ಪಲತಾ ಮತ್ತು ಬಯೋಸ್ನೇಹಿ ಮನು
ಹಾಗೂ ಇನ್ನಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

25 mins ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

50 mins ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

1 hour ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

1 hour ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

2 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

2 hours ago