court
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು
ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಸಯೀದುನ್ನಿಸಾ ಅವರು ಜೀವಾವಧಿ ಶಿಕ್ಷೆ ಹಾಗೂ ೧.೨೫ ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಮಳವಳ್ಳಿ ತಾಲ್ಲೂಕು ಧನಗೂರು ಗ್ರಾಮದ ಅಜ್ವಲ್ ಖಾನ್ (೩೯) ಜೀವಾವಧಿ ಶಿಕ್ಷೆಗೊಳಗಾದ ವ್ಯಕ್ತಿ. ೨೦೦೬ರ ಜ.೨೧ರಂದು ಸಲ್ಮಾ ಬೇಗಂ ಎಂಬವರನ್ನು ಅಜ್ವಲ್ ಖಾನ್ ಮದುವೆಯಾಗಿದ್ದ. ಮೂರು ವರ್ಷ ಆಕೆಯ ಜತೆ ಸಂಸಾರ ನಡೆಸಿದ ಈತ ನಂತರದ ದಿನಗಳಲ್ಲಿ ಸಲ್ಮಾ ಬೇಗಂ ಶೀಲದ ಮೇಲೆ ಅನುಮಾನಪಟ್ಟು ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದನು.
ಈ ಬಗ್ಗೆ ಸಲ್ಮಾ ಬೇಗಂ ತನ್ನ ತಂದೆ ಮತ್ತು ಸಹೋದರರಿಗೆ ತಿಳಿಸಲಾಗಿ, ಅವರು ಧೈರ್ಯ ಹೇಳಿ ಅನುಸರಿಸಿಕೊಂಡು ಜೀವನ ಮಾಡುವಂತೆ ಸಲಹೆ ನೀಡಿದ್ದರು. ಹೀಗಿದ್ದರೂ ಆರೋಪಿಯು ಆಗಾಗ್ಗೆ ಅಜಾಂ ಪಾಷ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದೀಯಾ ಎಂದು ಶೀಲ ಶಂಕಿಸಿ,೨೦೨೩ರ ಮೇ ೮ರಂದು ಕೊಲೆ ಮಾಡಬೇಕೆಂದು ನಿರ್ಧರಿಸಿ ಬೆಳಿಗ್ಗೆ ೧೧ ಗಂಟೆ ಸಮಯದಲ್ಲಿ ಸಲ್ಮಾ ಬೇಗಂ ಮನೆಯಲ್ಲಿ ಒಬ್ಬರೇ ಇದ್ದಾಗ ತನ್ನ ಮಗನೊಂದಿಗೆ ಸೇರಿ ಕತ್ತು ಹಿಸುಕಿ ಉಸಿರುಗಟ್ಟಿಸಿ, ನಂತರ ತಲೆದಿಂಬನ್ನು ಮುಖದ ಮೇಲೆ ಅದುಮಿ ಕೊಲೆ ಮಾಡಿದ್ದನು.
ಈ ಸಂಬಂಧ ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ,ಆರೋಪಿ ಅಜ್ವಲ್ ಖಾನ್ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ೨ನೇ ಅಪರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿಯು ತನ್ನ ಮಗನೊಂದಿಗೆ ಸೇರಿ ಪತ್ನಿಯನ್ನು ಕೊಲೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಸಯೀದುನ್ನಿಸಾ ಅವರು ಆರೋಪಿ ಅಜ್ವಲ್ ಖಾನ್ಗೆ ಜೀವಾವಧಿ ಶಿಕ್ಷೆ, ೧ ಲಕ್ಷ ರೂ. ದಂಡ ಮತ್ತು ೨ ವರ್ಷಗಳ ಸಜೆ ಮತ್ತು ೨೫ ಸಾವಿರ ರೂ. ದಂಡ ವಿಧಿಸಿ ಶಿಕ್ಷೆಯ ತೀರ್ಪು ನೀಡಿದ್ದಾರೆ.
ಮೃತಳ ಮಕ್ಕಳಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ನೀಡಲು ಆದೇಶಿಸಿದ್ದಾರೆ. ಅಭಿಯೋಜನೆಯ ಪರವಾಗಿ ಸರ್ಕಾರಿ ಅಭಿಯೋಜಕ ಹೆಬ್ಬಕವಾಡಿ ಕೆ.ನಾಗರಾಜು ವಾದ ಮಂಡಿಸಿದ್ದರು
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…