ಮೈಸೂರು: ಸತತ ಒಂದು ತಿಂಗಳು ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ 10 ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅರ್ಧ ಕೋಟಿ ರೂ. ಮೌಲ್ಯದ 1 ಕೆಜಿ ತೂಕದ 25 ಚಿನ್ನದ ಸರ, ಚಿನ್ನಾಭರಣಗಳು, 9 ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಮನೆ ಕಳ್ಳತನ ಪ್ರಕರಣದಲ್ಲಿ ಈ ಹಿಂದೆಯೂ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿ, ಆತನಿಂದ 70 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ,
”ಮನೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರು ಮಂದಿಯಲ್ಲಿ ವಕೀಲರೊಬ್ಬರೂ ಇದ್ದಾರೆ. ಮನೆ ಕಳ್ಳತನ ನಡೆಸುತ್ತಿದ್ದ ಖದೀಮರಿಗೆ ಸಹಕಾರ ನೀಡುತ್ತಿದ್ದ ವಕೀಲರನ್ನು ಸಹ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕದ್ದ ಮಾಲನ್ನು ಮಾರಾಟಕ್ಕೆ ವ್ಯವಸ್ಥೆ ಮಾಡುತ್ತಿದ್ದಲ್ಲದೇ ಬಂಧನವಾದರೆ ಜಾಮೀನು ಕೊಡಿಸುವ ಮೂಲಕ ಸಹಕಾರ ನೀಡುತ್ತಿದ್ದರು,” ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದರು.
ಸಿಬ್ಬಂದಿಗಳಾದ ಯು.ಉಮೇಶ್, ಸಲೀಂಖಾನ್, ರಾಮಸ್ವಾಮಿ, ಯಾಕೂಬ್ ಷರೀಫ್, ಸಿ.ಚಿಕ್ಕಣ್ಣ, ಎ.ಉಮಾಮಹೇಶ, ಪಿ.ಎನ್. ಲಕ್ಷ್ಮೇಕಾಂತ, ಆನಂದ, ಪ್ರಕಾಶ್, ಸಿ.ಎನ್. ಶಿವರಾಜು, ಚಂದ್ರಶೇಖರ, ಗೋವಿಂದ, ಮಧುಸೂದನ, ಮೋಹನಾರಾಧ್ಯ, ಕೆ.ಮಹೇಶ್, ನರಸಿಂಹ ರಾಜು, ನಬೀ ಪಟೇಲ್, ಪವನ್, ಜಿ.ಆರ್. ಮಮತ, ಎಂ.ಎಂ.ರಮ್ಯಾ, ಗೌತಮ್, ಶಿವಕುಮಾರ್ ಇದ್ದರು.
ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…
ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…
ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…
ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…
ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…
ಗಿರೀಶ್ ಹುಣಸೂರು ರೆಸಾರ್ಟ್ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …