ಮೈಸೂರು: ಸತತ ಒಂದು ತಿಂಗಳು ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ 10 ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅರ್ಧ ಕೋಟಿ ರೂ. ಮೌಲ್ಯದ 1 ಕೆಜಿ ತೂಕದ 25 ಚಿನ್ನದ ಸರ, ಚಿನ್ನಾಭರಣಗಳು, 9 ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಮನೆ ಕಳ್ಳತನ ಪ್ರಕರಣದಲ್ಲಿ ಈ ಹಿಂದೆಯೂ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿ, ಆತನಿಂದ 70 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ,
”ಮನೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರು ಮಂದಿಯಲ್ಲಿ ವಕೀಲರೊಬ್ಬರೂ ಇದ್ದಾರೆ. ಮನೆ ಕಳ್ಳತನ ನಡೆಸುತ್ತಿದ್ದ ಖದೀಮರಿಗೆ ಸಹಕಾರ ನೀಡುತ್ತಿದ್ದ ವಕೀಲರನ್ನು ಸಹ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕದ್ದ ಮಾಲನ್ನು ಮಾರಾಟಕ್ಕೆ ವ್ಯವಸ್ಥೆ ಮಾಡುತ್ತಿದ್ದಲ್ಲದೇ ಬಂಧನವಾದರೆ ಜಾಮೀನು ಕೊಡಿಸುವ ಮೂಲಕ ಸಹಕಾರ ನೀಡುತ್ತಿದ್ದರು,” ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದರು.
ಸಿಬ್ಬಂದಿಗಳಾದ ಯು.ಉಮೇಶ್, ಸಲೀಂಖಾನ್, ರಾಮಸ್ವಾಮಿ, ಯಾಕೂಬ್ ಷರೀಫ್, ಸಿ.ಚಿಕ್ಕಣ್ಣ, ಎ.ಉಮಾಮಹೇಶ, ಪಿ.ಎನ್. ಲಕ್ಷ್ಮೇಕಾಂತ, ಆನಂದ, ಪ್ರಕಾಶ್, ಸಿ.ಎನ್. ಶಿವರಾಜು, ಚಂದ್ರಶೇಖರ, ಗೋವಿಂದ, ಮಧುಸೂದನ, ಮೋಹನಾರಾಧ್ಯ, ಕೆ.ಮಹೇಶ್, ನರಸಿಂಹ ರಾಜು, ನಬೀ ಪಟೇಲ್, ಪವನ್, ಜಿ.ಆರ್. ಮಮತ, ಎಂ.ಎಂ.ರಮ್ಯಾ, ಗೌತಮ್, ಶಿವಕುಮಾರ್ ಇದ್ದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…