ಮೈಸೂರು: ಸತತ ಒಂದು ತಿಂಗಳು ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿದಂತೆ 10 ಸರಗಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅರ್ಧ ಕೋಟಿ ರೂ. ಮೌಲ್ಯದ 1 ಕೆಜಿ ತೂಕದ 25 ಚಿನ್ನದ ಸರ, ಚಿನ್ನಾಭರಣಗಳು, 9 ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ಮನೆ ಕಳ್ಳತನ ಪ್ರಕರಣದಲ್ಲಿ ಈ ಹಿಂದೆಯೂ ಭಾಗಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿ, ಆತನಿಂದ 70 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ,
”ಮನೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರು ಮಂದಿಯಲ್ಲಿ ವಕೀಲರೊಬ್ಬರೂ ಇದ್ದಾರೆ. ಮನೆ ಕಳ್ಳತನ ನಡೆಸುತ್ತಿದ್ದ ಖದೀಮರಿಗೆ ಸಹಕಾರ ನೀಡುತ್ತಿದ್ದ ವಕೀಲರನ್ನು ಸಹ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕದ್ದ ಮಾಲನ್ನು ಮಾರಾಟಕ್ಕೆ ವ್ಯವಸ್ಥೆ ಮಾಡುತ್ತಿದ್ದಲ್ಲದೇ ಬಂಧನವಾದರೆ ಜಾಮೀನು ಕೊಡಿಸುವ ಮೂಲಕ ಸಹಕಾರ ನೀಡುತ್ತಿದ್ದರು,” ಎಂದು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾಹಿತಿ ನೀಡಿದರು.
ಸಿಬ್ಬಂದಿಗಳಾದ ಯು.ಉಮೇಶ್, ಸಲೀಂಖಾನ್, ರಾಮಸ್ವಾಮಿ, ಯಾಕೂಬ್ ಷರೀಫ್, ಸಿ.ಚಿಕ್ಕಣ್ಣ, ಎ.ಉಮಾಮಹೇಶ, ಪಿ.ಎನ್. ಲಕ್ಷ್ಮೇಕಾಂತ, ಆನಂದ, ಪ್ರಕಾಶ್, ಸಿ.ಎನ್. ಶಿವರಾಜು, ಚಂದ್ರಶೇಖರ, ಗೋವಿಂದ, ಮಧುಸೂದನ, ಮೋಹನಾರಾಧ್ಯ, ಕೆ.ಮಹೇಶ್, ನರಸಿಂಹ ರಾಜು, ನಬೀ ಪಟೇಲ್, ಪವನ್, ಜಿ.ಆರ್. ಮಮತ, ಎಂ.ಎಂ.ರಮ್ಯಾ, ಗೌತಮ್, ಶಿವಕುಮಾರ್ ಇದ್ದರು.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…