ಮೈಸೂರು: ‘ಸಾಂಸ್ಕೃತಿಕ ನಗರಿ’ ಮೈಸೂರಿನ ಹಸಿರು ಮರಗಳು ಹಾಗೂ ಜನರ ಮನಸ್ಸಿನಲ್ಲಿ ಸಾಲುಮರದ ತಿಮ್ಮಕ್ಕನ ನೆನಪುಗಳು ಬೇರೂರಿದ್ದು, ಅದಕ್ಕೆ ಸಾಕ್ಷಿಯಂತಿವೆ ನಗರದಲ್ಲಿರುವ ತಿಮ್ಮಕ್ಕನ ಹೆಸರಿನಲ್ಲಿರುವ ಉದ್ಯಾನಗಳು..!
ಮಕ್ಕಳಿಲ್ಲದ ತಿಮ್ಮಕ್ಕ 8 ಸಾವಿರಕ್ಕೂ ಹೆಚ್ಚು ಸಸಿಗಳನ್ನು ತಮ್ಮ ಮಕ್ಕಳಂತೆ ಪೋಷಿಸಿ ಬೃಹತ್ ಮರಗಳನ್ನಾಗಿ ಬೆಳೆಸಿದ್ದಾರೆ. ಅಲ್ಲದೇ, ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ವೃಕ್ಷಮಾತೆ ತಿಮ್ಮಕ್ಕನಿಗೂ ಮೈಸೂರಿನ ಮರಗಳಿಗೂ ಅವಿನಾಭಾವ ನಂಟಿದೆ.
ನಗರದ ಇಸ್ಕಾನ್ ಬಳಿ ಅರಣ್ಯ ಇಲಾಖೆ ನಿರ್ಮಿಸಿರುವ ಉದ್ಯಾನಕ್ಕೆ ‘ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ’ ಎಂದು ಹೆಸರಿಡಲಾಗಿದೆ. ಅಲ್ಲದೇ, ಲಿಂಗಾಂಬುಧಿ ಕೆರೆ ಮುಂಭಾಗ ಇರುವ ಉದ್ಯಾನಕ್ಕೂ ಸಾಲುಮರದ ತಿಮ್ಮಕ್ಕ ಪಾರ್ಕ್ ಎಂದು ನಾಮಕರಣ ಮಾಡಲಾಗಿದೆ. ಇಲ್ಲಿಗೆ ಬರುವ ವಾಯುವಿಹಾರಿಗಳು ನಿತ್ಯ ತಿಮ್ಮಕ್ಕನನ್ನು ಸ್ಮರಿಸುತ್ತಲೇ ವಾಕಿಂಗ್ ಮಾಡುತ್ತಾರೆ.
ಕಳೆದ ವರ್ಷ ನಿವೇದಿತಾನಗರದ ಮನೆಯೊಂದಕ್ಕೆ ಆಗಮಿಸಿ ಸಸಿಗಳನ್ನು ನೆಡುವ ಮೂಲಕ ಸನ್ಮಾನ ಸ್ವೀಕರಿಸಿದ್ದರು. 2016ರಲ್ಲಿ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನಿಸಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಒತ್ತಡ ಬಂದಿತ್ತು. ಆದರೆ, ಅವರಿಂದ ಒಮ್ಮೆಯಾದರೂ ದಸರಾ ಉದ್ಘಾಟಿಸಬೇಕೆಂಬ ಮೈಸೂರಿಗರ ಕನಸು ಕನಸಾಗಿಯೇ ಉಳಿಯಿತು.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…