ಮೈಸೂರು: ‘ಸಾಂಸ್ಕೃತಿಕ ನಗರಿ’ ಮೈಸೂರಿನ ಹಸಿರು ಮರಗಳು ಹಾಗೂ ಜನರ ಮನಸ್ಸಿನಲ್ಲಿ ಸಾಲುಮರದ ತಿಮ್ಮಕ್ಕನ ನೆನಪುಗಳು ಬೇರೂರಿದ್ದು, ಅದಕ್ಕೆ ಸಾಕ್ಷಿಯಂತಿವೆ ನಗರದಲ್ಲಿರುವ ತಿಮ್ಮಕ್ಕನ ಹೆಸರಿನಲ್ಲಿರುವ ಉದ್ಯಾನಗಳು..!
ಮಕ್ಕಳಿಲ್ಲದ ತಿಮ್ಮಕ್ಕ 8 ಸಾವಿರಕ್ಕೂ ಹೆಚ್ಚು ಸಸಿಗಳನ್ನು ತಮ್ಮ ಮಕ್ಕಳಂತೆ ಪೋಷಿಸಿ ಬೃಹತ್ ಮರಗಳನ್ನಾಗಿ ಬೆಳೆಸಿದ್ದಾರೆ. ಅಲ್ಲದೇ, ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ವೃಕ್ಷಮಾತೆ ತಿಮ್ಮಕ್ಕನಿಗೂ ಮೈಸೂರಿನ ಮರಗಳಿಗೂ ಅವಿನಾಭಾವ ನಂಟಿದೆ.
ನಗರದ ಇಸ್ಕಾನ್ ಬಳಿ ಅರಣ್ಯ ಇಲಾಖೆ ನಿರ್ಮಿಸಿರುವ ಉದ್ಯಾನಕ್ಕೆ ‘ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ’ ಎಂದು ಹೆಸರಿಡಲಾಗಿದೆ. ಅಲ್ಲದೇ, ಲಿಂಗಾಂಬುಧಿ ಕೆರೆ ಮುಂಭಾಗ ಇರುವ ಉದ್ಯಾನಕ್ಕೂ ಸಾಲುಮರದ ತಿಮ್ಮಕ್ಕ ಪಾರ್ಕ್ ಎಂದು ನಾಮಕರಣ ಮಾಡಲಾಗಿದೆ. ಇಲ್ಲಿಗೆ ಬರುವ ವಾಯುವಿಹಾರಿಗಳು ನಿತ್ಯ ತಿಮ್ಮಕ್ಕನನ್ನು ಸ್ಮರಿಸುತ್ತಲೇ ವಾಕಿಂಗ್ ಮಾಡುತ್ತಾರೆ.
ಕಳೆದ ವರ್ಷ ನಿವೇದಿತಾನಗರದ ಮನೆಯೊಂದಕ್ಕೆ ಆಗಮಿಸಿ ಸಸಿಗಳನ್ನು ನೆಡುವ ಮೂಲಕ ಸನ್ಮಾನ ಸ್ವೀಕರಿಸಿದ್ದರು. 2016ರಲ್ಲಿ ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನಿಸಬೇಕೆಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಒತ್ತಡ ಬಂದಿತ್ತು. ಆದರೆ, ಅವರಿಂದ ಒಮ್ಮೆಯಾದರೂ ದಸರಾ ಉದ್ಘಾಟಿಸಬೇಕೆಂಬ ಮೈಸೂರಿಗರ ಕನಸು ಕನಸಾಗಿಯೇ ಉಳಿಯಿತು.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…