ಮೈಸೂರು

ಅಂಬಾರಿ ಆನೆ ಮಾದರಿಯಲ್ಲಿ ವಿಶ್ವ ಹಾಲು ದಿನ ಆಚರಿಸಿ ಸಂಭ್ರಮ

ಜಂಬೂ ಸವಾರಿ ನೆನೆಪಿಸಿದ ಹಾಲಿನ ಅಂಬಾರಿ

ಮೈಸೂರು: ಹಾಲಿನ ಉತ್ಪನ್ನಗಳ ಚಿತ್ರವನ್ನು ಹೊತ್ತ ಆನೆಯ ನಡಿಗೆ ಕಂಡು ಒಂದು ಕ್ಷಣ ಜಂಬೂ ಸವಾರಿ ಬಂದೇ ಬಿಟ್ಟಿತೇ ಎಂದು ತಿರುಗಿ ನೋಡುತ್ತಿದ್ದ ಸಾರ್ವಜನಿಕರ ಕೂತೂಹಲದ ಕೇಂದ್ರ ಬಿಂದುವಾಯಿತು.

ಆಲನಹಳ್ಳಿಯ ಮೈಮುಲ್‌ ನಿಂದ ವಿಶ್ವ ಹಾಲು ದಿನದ ಅಂಗವಾಗಿ “ಹೈನೋದ್ಯಮದ ಸಂಭ್ರಮವನ್ನು‌ ಸಂಭ್ರಮಿಸೋಣ” ಎಂಬ ದ್ಯೇಯದೊಂದಿಗೆ ಹಾಲಿನ ಉತ್ಪನ್ನಗಳು ಮತ್ತು ಹಾಲಿನ ಮಹತ್ವ, ಅದರ ಅನೂಕೂಲಗಳ ಬಗ್ಗೆ ಕುರಿತು ಪ್ರಚಾರ ಮಾಡುವ ಮೆರವಣಿಗೆಯಲ್ಲಿ ಹಾಲಿನ ಅಂಬಾರಿ ಆಕರ್ಷಣೆಯಾಗಿತ್ತು. ಹೌದು ಇದೇ ಮೊಟ್ಟ ಮೊದಲ ಬಾರಿಗೆ ತುಮಕೂರು ಜಿಲ್ಲೆಯ ನೊಣವಿನ ಕೆರೆಯ ಕಾಡು ಸಿದ್ದೇಶ್ವರ ಮಠದ ಸಾಕಾನೆಯ ಮೇಲೆ ನಂದಿನಿ ಹಾಲಿನ ಉತ್ಪನ್ನವನ್ನು ಮಾದರಿ ಅಂಬಾರಿ ಮೇಲೆ ಇರಿಸಿ ಆನೆಯೊಂದಿಗೆ ಮೆರವಣಿಗೆ ಮಾಡಲಾಯಿತು.

ಆಲನಹಳ್ಳಿ ಕೇಂದ್ರದಿಂದ ಹೊರಟ ಹಾಲಿನ ಅಂಬಾರಿಗೆ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯವರು ಬಲೂನ್‌ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಬಳಿಕ ಟೆರಿಷಿಯನ್‌ ಕಾಲೇಜು ವೃತ್ತ, ಬನ್ನೂರು ಮುಖ್ಯರಸ್ತೆಯ ನೂತನ ಜಿಲ್ಲಾಧಿಕಾರಿ ಕಚೇರಿ ಮಾರ್ಗವಾಗಿ ನಜರ್‌ಬಾದ್‌ನ ಶಿಕ್ಷಕರ ಭವನದವರೆಗೆ ಮೆರೆವಣಿಗೆ ನಡೆಯಿತು. ಈ ವೇಳೆ ರಸ್ತೆಯ ಅಕ್ಕಪಕ್ಕದಲ್ಲಿ ನಿಂತಿದ್ದ ಜನರೆಲ್ಲರೂ ಆನೆಯನ್ನು ವೀಕ್ಷಿಸಿ ಜಂಬೂ ಸವಾರಿ ನೆನಪಿಸಿಕೊಂಡರಲ್ಲದೆ, ವಿಶ್ವ ಹಾಲಿನ ದಿನದ ಬಗ್ಗೆಯೂ ಅರಿಯುವಂತಾಯಿತು. ಆ ಮೂಲಕ ಮೆರವಣಿಗೆ ಜಂಬೂ ಸವಾರಿ ಮಾದರಿಯಲ್ಲಿ ಎಲ್ಲರೂ ಸಂಭ್ರಮಿಸಿದರು.

ವಿಶ್ವವನ್ನು ಉಳಿಸುವ ಹಾಲು
ಅಮೃತ ರೂಪದಲ್ಲಿ ಹಾಲಿನ ಸೇವನೆ ಮಾಡುತ್ತಿದ್ದೇವೆ. ಜೀವಂತವಾಗಿ ಇರಬೇಕಾದರೂ ಶುದ್ಧಗಾಳಿ, ನೀರು ಮೊದಲಾದವರು ಸಿಗಬೇಕಾದರೆ ನಾವೆಲ್ಲರೂ ಹಾಲು ಕುಡಿಯಬೇಲಕಿದೆ. ಶ್ರೀ ಕೃಷ್ಣನ ಕಾಲದಿಂದಲೂ ಹಾಲಿನ ಬಳಕೆ ನಮ್ಮ ಜೀವನದೊಟ್ಟಿಗೆ ಬಂದೆ. ಸಕ್ಕರೆ ಪಿಷ್ಟ, ಸಾಸರ ಜನಕ ಸೇರಿ ಅನೇಕ‌‌ ಅಂಶಗಳನ್ನು ಹಾಲಿನಲ್ಲಿ ನೋಡಬಹುದಾಗಿದೆ. ಆರು ತಿಂಗಳವರೆಗೂ ಯಾವ ಮಗು ತಾಯಿಯ ಹಾಲು ಕುಡಿಯುತ್ತದೆಯೋ ಡಯಾಬಿಟಿಸ್, ಡ್ರೈಪೋಟೆಷನ್ ಬರುವುದಿಲ್ಲ. ವಿಶ್ವವನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ‌ ಮಾಡುತ್ತಿರುವುದರಲ್ಲಿ ಹಾಲು ದಿನಾಚರಣೆಯೂ ಒಂದಾಗಿದೆ. ಅಪೌಷ್ಠಿಕತೆ ಹೋಗಲಾಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ನಂದಿನಿಯ ಬಳಕೆಯನ್ನು ಹೆಚ್ಚೆಚ್ಚು ಮಾಡಿ. *-ಗೋಪಾಲಗೌಡ, ಮಕ್ಕಳ ತಜ್ಞ.*

ನಿತ್ಯವೂ ಹಾಲನ್ನು ಕುಡಿಯುವ ನಾವು ಇಷ್ಟೆಲ್ಲಾ ಬೆಳವಣಿಗೆ ಹೊಂದಿದ್ದೇವೆ. ಹಾಲಿಗೂ ಒಂದು ದಿನ ಮೀಸಲಿಟ್ಟು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹೆಚ್ಚೆಚ್ಚು ನಂದಿನ ಉತ್ಪನ್ನಗಳನ್ನು ಬಳಸುವ ಮೂಲಕ ರೈತರಿಗೆ ನೆರವಾಗೋಣ. *-ದಿವಾನ್ಸ್‌, ವಿದ್ಯಾರ್ಥಿ.*

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

16 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

32 mins ago

ಶಿವಾಜಿ ಗಣೇಶನ್‌ ವಾರದ ಅಂಕಣ: ಹೆಸರಿನಲ್ಲೇನಿದೆ; ಆಡಳಿತದಲ್ಲಿ ಬದಲಾಗಬೇಕು

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್‌ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಕಾಲದಲ್ಲಿ ಹೆಸರಿಸಲಾಗಿದ್ದ ಸರ್ಕಾರಿ ಕಾರ್ಯಾಲಯಗಳು ಮತ್ತು ರಸ್ತೆಗಳ ಹೆಸರುಗಳನ್ನು ಕೇಂದ್ರದಲ್ಲಿ…

1 hour ago

ಇದ್ದೆರಡು ಇಂಡಿಗೋ ರದ್ದು

ಕೆ.ಬಿ.ರಮೇಶನಾಯಕ ಮೈಸೂರು: ದೇಶದಲ್ಲಿ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ವಿಮಾನಗಳ ಸೇವೆ ವ್ಯತ್ಯಯಗೊಂಡಿದ್ದು, ಮೈಸೂರು ವಿಮಾನ ನಿಲ್ದಾಣದಿಂದ ಹೊರ ರಾಜ್ಯಗಳಿಗೆ…

2 hours ago

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

4 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

4 hours ago