ಮೈಸೂರು

ಅಂಬಾರಿ ಆನೆ ಮಾದರಿಯಲ್ಲಿ ವಿಶ್ವ ಹಾಲು ದಿನ ಆಚರಿಸಿ ಸಂಭ್ರಮ

ಜಂಬೂ ಸವಾರಿ ನೆನೆಪಿಸಿದ ಹಾಲಿನ ಅಂಬಾರಿ

ಮೈಸೂರು: ಹಾಲಿನ ಉತ್ಪನ್ನಗಳ ಚಿತ್ರವನ್ನು ಹೊತ್ತ ಆನೆಯ ನಡಿಗೆ ಕಂಡು ಒಂದು ಕ್ಷಣ ಜಂಬೂ ಸವಾರಿ ಬಂದೇ ಬಿಟ್ಟಿತೇ ಎಂದು ತಿರುಗಿ ನೋಡುತ್ತಿದ್ದ ಸಾರ್ವಜನಿಕರ ಕೂತೂಹಲದ ಕೇಂದ್ರ ಬಿಂದುವಾಯಿತು.

ಆಲನಹಳ್ಳಿಯ ಮೈಮುಲ್‌ ನಿಂದ ವಿಶ್ವ ಹಾಲು ದಿನದ ಅಂಗವಾಗಿ “ಹೈನೋದ್ಯಮದ ಸಂಭ್ರಮವನ್ನು‌ ಸಂಭ್ರಮಿಸೋಣ” ಎಂಬ ದ್ಯೇಯದೊಂದಿಗೆ ಹಾಲಿನ ಉತ್ಪನ್ನಗಳು ಮತ್ತು ಹಾಲಿನ ಮಹತ್ವ, ಅದರ ಅನೂಕೂಲಗಳ ಬಗ್ಗೆ ಕುರಿತು ಪ್ರಚಾರ ಮಾಡುವ ಮೆರವಣಿಗೆಯಲ್ಲಿ ಹಾಲಿನ ಅಂಬಾರಿ ಆಕರ್ಷಣೆಯಾಗಿತ್ತು. ಹೌದು ಇದೇ ಮೊಟ್ಟ ಮೊದಲ ಬಾರಿಗೆ ತುಮಕೂರು ಜಿಲ್ಲೆಯ ನೊಣವಿನ ಕೆರೆಯ ಕಾಡು ಸಿದ್ದೇಶ್ವರ ಮಠದ ಸಾಕಾನೆಯ ಮೇಲೆ ನಂದಿನಿ ಹಾಲಿನ ಉತ್ಪನ್ನವನ್ನು ಮಾದರಿ ಅಂಬಾರಿ ಮೇಲೆ ಇರಿಸಿ ಆನೆಯೊಂದಿಗೆ ಮೆರವಣಿಗೆ ಮಾಡಲಾಯಿತು.

ಆಲನಹಳ್ಳಿ ಕೇಂದ್ರದಿಂದ ಹೊರಟ ಹಾಲಿನ ಅಂಬಾರಿಗೆ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯವರು ಬಲೂನ್‌ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಬಳಿಕ ಟೆರಿಷಿಯನ್‌ ಕಾಲೇಜು ವೃತ್ತ, ಬನ್ನೂರು ಮುಖ್ಯರಸ್ತೆಯ ನೂತನ ಜಿಲ್ಲಾಧಿಕಾರಿ ಕಚೇರಿ ಮಾರ್ಗವಾಗಿ ನಜರ್‌ಬಾದ್‌ನ ಶಿಕ್ಷಕರ ಭವನದವರೆಗೆ ಮೆರೆವಣಿಗೆ ನಡೆಯಿತು. ಈ ವೇಳೆ ರಸ್ತೆಯ ಅಕ್ಕಪಕ್ಕದಲ್ಲಿ ನಿಂತಿದ್ದ ಜನರೆಲ್ಲರೂ ಆನೆಯನ್ನು ವೀಕ್ಷಿಸಿ ಜಂಬೂ ಸವಾರಿ ನೆನಪಿಸಿಕೊಂಡರಲ್ಲದೆ, ವಿಶ್ವ ಹಾಲಿನ ದಿನದ ಬಗ್ಗೆಯೂ ಅರಿಯುವಂತಾಯಿತು. ಆ ಮೂಲಕ ಮೆರವಣಿಗೆ ಜಂಬೂ ಸವಾರಿ ಮಾದರಿಯಲ್ಲಿ ಎಲ್ಲರೂ ಸಂಭ್ರಮಿಸಿದರು.

ವಿಶ್ವವನ್ನು ಉಳಿಸುವ ಹಾಲು
ಅಮೃತ ರೂಪದಲ್ಲಿ ಹಾಲಿನ ಸೇವನೆ ಮಾಡುತ್ತಿದ್ದೇವೆ. ಜೀವಂತವಾಗಿ ಇರಬೇಕಾದರೂ ಶುದ್ಧಗಾಳಿ, ನೀರು ಮೊದಲಾದವರು ಸಿಗಬೇಕಾದರೆ ನಾವೆಲ್ಲರೂ ಹಾಲು ಕುಡಿಯಬೇಲಕಿದೆ. ಶ್ರೀ ಕೃಷ್ಣನ ಕಾಲದಿಂದಲೂ ಹಾಲಿನ ಬಳಕೆ ನಮ್ಮ ಜೀವನದೊಟ್ಟಿಗೆ ಬಂದೆ. ಸಕ್ಕರೆ ಪಿಷ್ಟ, ಸಾಸರ ಜನಕ ಸೇರಿ ಅನೇಕ‌‌ ಅಂಶಗಳನ್ನು ಹಾಲಿನಲ್ಲಿ ನೋಡಬಹುದಾಗಿದೆ. ಆರು ತಿಂಗಳವರೆಗೂ ಯಾವ ಮಗು ತಾಯಿಯ ಹಾಲು ಕುಡಿಯುತ್ತದೆಯೋ ಡಯಾಬಿಟಿಸ್, ಡ್ರೈಪೋಟೆಷನ್ ಬರುವುದಿಲ್ಲ. ವಿಶ್ವವನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ‌ ಮಾಡುತ್ತಿರುವುದರಲ್ಲಿ ಹಾಲು ದಿನಾಚರಣೆಯೂ ಒಂದಾಗಿದೆ. ಅಪೌಷ್ಠಿಕತೆ ಹೋಗಲಾಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ನಂದಿನಿಯ ಬಳಕೆಯನ್ನು ಹೆಚ್ಚೆಚ್ಚು ಮಾಡಿ. *-ಗೋಪಾಲಗೌಡ, ಮಕ್ಕಳ ತಜ್ಞ.*

ನಿತ್ಯವೂ ಹಾಲನ್ನು ಕುಡಿಯುವ ನಾವು ಇಷ್ಟೆಲ್ಲಾ ಬೆಳವಣಿಗೆ ಹೊಂದಿದ್ದೇವೆ. ಹಾಲಿಗೂ ಒಂದು ದಿನ ಮೀಸಲಿಟ್ಟು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹೆಚ್ಚೆಚ್ಚು ನಂದಿನ ಉತ್ಪನ್ನಗಳನ್ನು ಬಳಸುವ ಮೂಲಕ ರೈತರಿಗೆ ನೆರವಾಗೋಣ. *-ದಿವಾನ್ಸ್‌, ವಿದ್ಯಾರ್ಥಿ.*

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

2 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

3 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

4 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

5 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

5 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

5 hours ago