ಮೈಸೂರು

ಅಂಬಾರಿ ಆನೆ ಮಾದರಿಯಲ್ಲಿ ವಿಶ್ವ ಹಾಲು ದಿನ ಆಚರಿಸಿ ಸಂಭ್ರಮ

ಜಂಬೂ ಸವಾರಿ ನೆನೆಪಿಸಿದ ಹಾಲಿನ ಅಂಬಾರಿ

ಮೈಸೂರು: ಹಾಲಿನ ಉತ್ಪನ್ನಗಳ ಚಿತ್ರವನ್ನು ಹೊತ್ತ ಆನೆಯ ನಡಿಗೆ ಕಂಡು ಒಂದು ಕ್ಷಣ ಜಂಬೂ ಸವಾರಿ ಬಂದೇ ಬಿಟ್ಟಿತೇ ಎಂದು ತಿರುಗಿ ನೋಡುತ್ತಿದ್ದ ಸಾರ್ವಜನಿಕರ ಕೂತೂಹಲದ ಕೇಂದ್ರ ಬಿಂದುವಾಯಿತು.

ಆಲನಹಳ್ಳಿಯ ಮೈಮುಲ್‌ ನಿಂದ ವಿಶ್ವ ಹಾಲು ದಿನದ ಅಂಗವಾಗಿ “ಹೈನೋದ್ಯಮದ ಸಂಭ್ರಮವನ್ನು‌ ಸಂಭ್ರಮಿಸೋಣ” ಎಂಬ ದ್ಯೇಯದೊಂದಿಗೆ ಹಾಲಿನ ಉತ್ಪನ್ನಗಳು ಮತ್ತು ಹಾಲಿನ ಮಹತ್ವ, ಅದರ ಅನೂಕೂಲಗಳ ಬಗ್ಗೆ ಕುರಿತು ಪ್ರಚಾರ ಮಾಡುವ ಮೆರವಣಿಗೆಯಲ್ಲಿ ಹಾಲಿನ ಅಂಬಾರಿ ಆಕರ್ಷಣೆಯಾಗಿತ್ತು. ಹೌದು ಇದೇ ಮೊಟ್ಟ ಮೊದಲ ಬಾರಿಗೆ ತುಮಕೂರು ಜಿಲ್ಲೆಯ ನೊಣವಿನ ಕೆರೆಯ ಕಾಡು ಸಿದ್ದೇಶ್ವರ ಮಠದ ಸಾಕಾನೆಯ ಮೇಲೆ ನಂದಿನಿ ಹಾಲಿನ ಉತ್ಪನ್ನವನ್ನು ಮಾದರಿ ಅಂಬಾರಿ ಮೇಲೆ ಇರಿಸಿ ಆನೆಯೊಂದಿಗೆ ಮೆರವಣಿಗೆ ಮಾಡಲಾಯಿತು.

ಆಲನಹಳ್ಳಿ ಕೇಂದ್ರದಿಂದ ಹೊರಟ ಹಾಲಿನ ಅಂಬಾರಿಗೆ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯವರು ಬಲೂನ್‌ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಬಳಿಕ ಟೆರಿಷಿಯನ್‌ ಕಾಲೇಜು ವೃತ್ತ, ಬನ್ನೂರು ಮುಖ್ಯರಸ್ತೆಯ ನೂತನ ಜಿಲ್ಲಾಧಿಕಾರಿ ಕಚೇರಿ ಮಾರ್ಗವಾಗಿ ನಜರ್‌ಬಾದ್‌ನ ಶಿಕ್ಷಕರ ಭವನದವರೆಗೆ ಮೆರೆವಣಿಗೆ ನಡೆಯಿತು. ಈ ವೇಳೆ ರಸ್ತೆಯ ಅಕ್ಕಪಕ್ಕದಲ್ಲಿ ನಿಂತಿದ್ದ ಜನರೆಲ್ಲರೂ ಆನೆಯನ್ನು ವೀಕ್ಷಿಸಿ ಜಂಬೂ ಸವಾರಿ ನೆನಪಿಸಿಕೊಂಡರಲ್ಲದೆ, ವಿಶ್ವ ಹಾಲಿನ ದಿನದ ಬಗ್ಗೆಯೂ ಅರಿಯುವಂತಾಯಿತು. ಆ ಮೂಲಕ ಮೆರವಣಿಗೆ ಜಂಬೂ ಸವಾರಿ ಮಾದರಿಯಲ್ಲಿ ಎಲ್ಲರೂ ಸಂಭ್ರಮಿಸಿದರು.

ವಿಶ್ವವನ್ನು ಉಳಿಸುವ ಹಾಲು
ಅಮೃತ ರೂಪದಲ್ಲಿ ಹಾಲಿನ ಸೇವನೆ ಮಾಡುತ್ತಿದ್ದೇವೆ. ಜೀವಂತವಾಗಿ ಇರಬೇಕಾದರೂ ಶುದ್ಧಗಾಳಿ, ನೀರು ಮೊದಲಾದವರು ಸಿಗಬೇಕಾದರೆ ನಾವೆಲ್ಲರೂ ಹಾಲು ಕುಡಿಯಬೇಲಕಿದೆ. ಶ್ರೀ ಕೃಷ್ಣನ ಕಾಲದಿಂದಲೂ ಹಾಲಿನ ಬಳಕೆ ನಮ್ಮ ಜೀವನದೊಟ್ಟಿಗೆ ಬಂದೆ. ಸಕ್ಕರೆ ಪಿಷ್ಟ, ಸಾಸರ ಜನಕ ಸೇರಿ ಅನೇಕ‌‌ ಅಂಶಗಳನ್ನು ಹಾಲಿನಲ್ಲಿ ನೋಡಬಹುದಾಗಿದೆ. ಆರು ತಿಂಗಳವರೆಗೂ ಯಾವ ಮಗು ತಾಯಿಯ ಹಾಲು ಕುಡಿಯುತ್ತದೆಯೋ ಡಯಾಬಿಟಿಸ್, ಡ್ರೈಪೋಟೆಷನ್ ಬರುವುದಿಲ್ಲ. ವಿಶ್ವವನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ‌ ಮಾಡುತ್ತಿರುವುದರಲ್ಲಿ ಹಾಲು ದಿನಾಚರಣೆಯೂ ಒಂದಾಗಿದೆ. ಅಪೌಷ್ಠಿಕತೆ ಹೋಗಲಾಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ನಂದಿನಿಯ ಬಳಕೆಯನ್ನು ಹೆಚ್ಚೆಚ್ಚು ಮಾಡಿ. *-ಗೋಪಾಲಗೌಡ, ಮಕ್ಕಳ ತಜ್ಞ.*

ನಿತ್ಯವೂ ಹಾಲನ್ನು ಕುಡಿಯುವ ನಾವು ಇಷ್ಟೆಲ್ಲಾ ಬೆಳವಣಿಗೆ ಹೊಂದಿದ್ದೇವೆ. ಹಾಲಿಗೂ ಒಂದು ದಿನ ಮೀಸಲಿಟ್ಟು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹೆಚ್ಚೆಚ್ಚು ನಂದಿನ ಉತ್ಪನ್ನಗಳನ್ನು ಬಳಸುವ ಮೂಲಕ ರೈತರಿಗೆ ನೆರವಾಗೋಣ. *-ದಿವಾನ್ಸ್‌, ವಿದ್ಯಾರ್ಥಿ.*

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

3 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

5 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

14 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

14 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

14 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

14 hours ago