ಮೈಸೂರು

ಅಂಬಾರಿ ಆನೆ ಮಾದರಿಯಲ್ಲಿ ವಿಶ್ವ ಹಾಲು ದಿನ ಆಚರಿಸಿ ಸಂಭ್ರಮ

ಜಂಬೂ ಸವಾರಿ ನೆನೆಪಿಸಿದ ಹಾಲಿನ ಅಂಬಾರಿ

ಮೈಸೂರು: ಹಾಲಿನ ಉತ್ಪನ್ನಗಳ ಚಿತ್ರವನ್ನು ಹೊತ್ತ ಆನೆಯ ನಡಿಗೆ ಕಂಡು ಒಂದು ಕ್ಷಣ ಜಂಬೂ ಸವಾರಿ ಬಂದೇ ಬಿಟ್ಟಿತೇ ಎಂದು ತಿರುಗಿ ನೋಡುತ್ತಿದ್ದ ಸಾರ್ವಜನಿಕರ ಕೂತೂಹಲದ ಕೇಂದ್ರ ಬಿಂದುವಾಯಿತು.

ಆಲನಹಳ್ಳಿಯ ಮೈಮುಲ್‌ ನಿಂದ ವಿಶ್ವ ಹಾಲು ದಿನದ ಅಂಗವಾಗಿ “ಹೈನೋದ್ಯಮದ ಸಂಭ್ರಮವನ್ನು‌ ಸಂಭ್ರಮಿಸೋಣ” ಎಂಬ ದ್ಯೇಯದೊಂದಿಗೆ ಹಾಲಿನ ಉತ್ಪನ್ನಗಳು ಮತ್ತು ಹಾಲಿನ ಮಹತ್ವ, ಅದರ ಅನೂಕೂಲಗಳ ಬಗ್ಗೆ ಕುರಿತು ಪ್ರಚಾರ ಮಾಡುವ ಮೆರವಣಿಗೆಯಲ್ಲಿ ಹಾಲಿನ ಅಂಬಾರಿ ಆಕರ್ಷಣೆಯಾಗಿತ್ತು. ಹೌದು ಇದೇ ಮೊಟ್ಟ ಮೊದಲ ಬಾರಿಗೆ ತುಮಕೂರು ಜಿಲ್ಲೆಯ ನೊಣವಿನ ಕೆರೆಯ ಕಾಡು ಸಿದ್ದೇಶ್ವರ ಮಠದ ಸಾಕಾನೆಯ ಮೇಲೆ ನಂದಿನಿ ಹಾಲಿನ ಉತ್ಪನ್ನವನ್ನು ಮಾದರಿ ಅಂಬಾರಿ ಮೇಲೆ ಇರಿಸಿ ಆನೆಯೊಂದಿಗೆ ಮೆರವಣಿಗೆ ಮಾಡಲಾಯಿತು.

ಆಲನಹಳ್ಳಿ ಕೇಂದ್ರದಿಂದ ಹೊರಟ ಹಾಲಿನ ಅಂಬಾರಿಗೆ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯವರು ಬಲೂನ್‌ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಬಳಿಕ ಟೆರಿಷಿಯನ್‌ ಕಾಲೇಜು ವೃತ್ತ, ಬನ್ನೂರು ಮುಖ್ಯರಸ್ತೆಯ ನೂತನ ಜಿಲ್ಲಾಧಿಕಾರಿ ಕಚೇರಿ ಮಾರ್ಗವಾಗಿ ನಜರ್‌ಬಾದ್‌ನ ಶಿಕ್ಷಕರ ಭವನದವರೆಗೆ ಮೆರೆವಣಿಗೆ ನಡೆಯಿತು. ಈ ವೇಳೆ ರಸ್ತೆಯ ಅಕ್ಕಪಕ್ಕದಲ್ಲಿ ನಿಂತಿದ್ದ ಜನರೆಲ್ಲರೂ ಆನೆಯನ್ನು ವೀಕ್ಷಿಸಿ ಜಂಬೂ ಸವಾರಿ ನೆನಪಿಸಿಕೊಂಡರಲ್ಲದೆ, ವಿಶ್ವ ಹಾಲಿನ ದಿನದ ಬಗ್ಗೆಯೂ ಅರಿಯುವಂತಾಯಿತು. ಆ ಮೂಲಕ ಮೆರವಣಿಗೆ ಜಂಬೂ ಸವಾರಿ ಮಾದರಿಯಲ್ಲಿ ಎಲ್ಲರೂ ಸಂಭ್ರಮಿಸಿದರು.

ವಿಶ್ವವನ್ನು ಉಳಿಸುವ ಹಾಲು
ಅಮೃತ ರೂಪದಲ್ಲಿ ಹಾಲಿನ ಸೇವನೆ ಮಾಡುತ್ತಿದ್ದೇವೆ. ಜೀವಂತವಾಗಿ ಇರಬೇಕಾದರೂ ಶುದ್ಧಗಾಳಿ, ನೀರು ಮೊದಲಾದವರು ಸಿಗಬೇಕಾದರೆ ನಾವೆಲ್ಲರೂ ಹಾಲು ಕುಡಿಯಬೇಲಕಿದೆ. ಶ್ರೀ ಕೃಷ್ಣನ ಕಾಲದಿಂದಲೂ ಹಾಲಿನ ಬಳಕೆ ನಮ್ಮ ಜೀವನದೊಟ್ಟಿಗೆ ಬಂದೆ. ಸಕ್ಕರೆ ಪಿಷ್ಟ, ಸಾಸರ ಜನಕ ಸೇರಿ ಅನೇಕ‌‌ ಅಂಶಗಳನ್ನು ಹಾಲಿನಲ್ಲಿ ನೋಡಬಹುದಾಗಿದೆ. ಆರು ತಿಂಗಳವರೆಗೂ ಯಾವ ಮಗು ತಾಯಿಯ ಹಾಲು ಕುಡಿಯುತ್ತದೆಯೋ ಡಯಾಬಿಟಿಸ್, ಡ್ರೈಪೋಟೆಷನ್ ಬರುವುದಿಲ್ಲ. ವಿಶ್ವವನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ‌ ಮಾಡುತ್ತಿರುವುದರಲ್ಲಿ ಹಾಲು ದಿನಾಚರಣೆಯೂ ಒಂದಾಗಿದೆ. ಅಪೌಷ್ಠಿಕತೆ ಹೋಗಲಾಡಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ನಂದಿನಿಯ ಬಳಕೆಯನ್ನು ಹೆಚ್ಚೆಚ್ಚು ಮಾಡಿ. *-ಗೋಪಾಲಗೌಡ, ಮಕ್ಕಳ ತಜ್ಞ.*

ನಿತ್ಯವೂ ಹಾಲನ್ನು ಕುಡಿಯುವ ನಾವು ಇಷ್ಟೆಲ್ಲಾ ಬೆಳವಣಿಗೆ ಹೊಂದಿದ್ದೇವೆ. ಹಾಲಿಗೂ ಒಂದು ದಿನ ಮೀಸಲಿಟ್ಟು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ಹೆಚ್ಚೆಚ್ಚು ನಂದಿನ ಉತ್ಪನ್ನಗಳನ್ನು ಬಳಸುವ ಮೂಲಕ ರೈತರಿಗೆ ನೆರವಾಗೋಣ. *-ದಿವಾನ್ಸ್‌, ವಿದ್ಯಾರ್ಥಿ.*

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

5 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

6 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

7 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

7 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

8 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

10 hours ago