ಮೈಸೂರು: ಮುಡಾದ ಪ್ರಕರಣ ಸಿಎಂ ಸಿದ್ದರಾಮಯ್ಯ ವಿರುದ್ಧ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಮಧ್ಯೆಯೇ ಶಾಸಕ ಜಿ.ಟಿ.ದೇವೇಗೌಡರ ಸಂಬಂಧಿ ಮಹೇಂದ್ರ ಮುಡಾದಿಂದ 19 ನಿವೇಶನಗಳನ್ನು ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರಿದ್ದಾರೆ.
ನಗರದಲ್ಲಿ ಇಂದು (ನ.16) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಜಿ.ಟಿ.ದೇವೇಗೌಡ ಅವರ ಸಹೋದರಿಯ ಮಗ ಮಹೇಂದ್ರ ಮುಡಾದಿಂದ 19 ನಿವೇಶನಗಳನ್ನು ಪಡೆದಿದ್ದಾರೆ. ಜಿಟಿ ದೇವೇಗೌಡರೇ ಈ ನಿವೇಶನಗಳನ್ನ ಅಕ್ರಮವಾಗಿ ನಿವೇಶನ ಕೊಡಿಸಿದ್ದಾರೆ. ಈ ನಿವೇಶನಗಳನ್ನು ಮುಡಾ ಯಾವಾಗ ವಶಪಡಿಸಿಕೊಂಡಿದೆ ಎಂಬ ಬಗ್ಗೆ ಮಾಹಿತಿ ನಿಖರವಾಗಿಲ್ಲ. ಈ ಭೂಮಿಯ ಮಾಲೀಕ ಮಹೇಂದ್ರ ಅಲ್ಲ ಎಂದು ಹೇಳಿದರು.
ಮಹೇಂದ್ರ ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ಅಕ್ರಮವಾಗಿ ಈ ಭೂಮಿಯನ್ನು ಪರಿಹಾರದ ಮೂಲಕ ಪಡೆದಿದ್ದಾರೆ. ನಿಜವಾಗಿಯೂ ಹೇಳಬೇಕೆಂದರೆ ಆ ವ್ಯಕ್ತಿಗೆ ದೇವನೂರು ಬಡಾವಣೆ ಸ್ಥಳದಲ್ಲಿ ಭೂಮಿಯೇ ಇಲ್ಲ. ಹೀಗಿರುವಾಗ ವಿಜಯನಗರದ 3ನೇ ಹಂತದ ಬಡಾವಣೆಯಲ್ಲಿ 19 ನಿವೇಶನಗಳನ್ನು ಹಂಚಿಕೆ ಮಾಡಿರುವುದಕ್ಕೆ ಮಾನದಂಡಗಳೇನು ಎಂದು ಪ್ರಶ್ನಿಸಿದ್ದಾರೆ.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…