ಮೈಸೂರು: ಮುಡಾದ ಪ್ರಕರಣ ಸಿಎಂ ಸಿದ್ದರಾಮಯ್ಯ ವಿರುದ್ಧ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಮಧ್ಯೆಯೇ ಶಾಸಕ ಜಿ.ಟಿ.ದೇವೇಗೌಡರ ಸಂಬಂಧಿ ಮಹೇಂದ್ರ ಮುಡಾದಿಂದ 19 ನಿವೇಶನಗಳನ್ನು ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರಿದ್ದಾರೆ.
ನಗರದಲ್ಲಿ ಇಂದು (ನ.16) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಜಿ.ಟಿ.ದೇವೇಗೌಡ ಅವರ ಸಹೋದರಿಯ ಮಗ ಮಹೇಂದ್ರ ಮುಡಾದಿಂದ 19 ನಿವೇಶನಗಳನ್ನು ಪಡೆದಿದ್ದಾರೆ. ಜಿಟಿ ದೇವೇಗೌಡರೇ ಈ ನಿವೇಶನಗಳನ್ನ ಅಕ್ರಮವಾಗಿ ನಿವೇಶನ ಕೊಡಿಸಿದ್ದಾರೆ. ಈ ನಿವೇಶನಗಳನ್ನು ಮುಡಾ ಯಾವಾಗ ವಶಪಡಿಸಿಕೊಂಡಿದೆ ಎಂಬ ಬಗ್ಗೆ ಮಾಹಿತಿ ನಿಖರವಾಗಿಲ್ಲ. ಈ ಭೂಮಿಯ ಮಾಲೀಕ ಮಹೇಂದ್ರ ಅಲ್ಲ ಎಂದು ಹೇಳಿದರು.
ಮಹೇಂದ್ರ ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ಅಕ್ರಮವಾಗಿ ಈ ಭೂಮಿಯನ್ನು ಪರಿಹಾರದ ಮೂಲಕ ಪಡೆದಿದ್ದಾರೆ. ನಿಜವಾಗಿಯೂ ಹೇಳಬೇಕೆಂದರೆ ಆ ವ್ಯಕ್ತಿಗೆ ದೇವನೂರು ಬಡಾವಣೆ ಸ್ಥಳದಲ್ಲಿ ಭೂಮಿಯೇ ಇಲ್ಲ. ಹೀಗಿರುವಾಗ ವಿಜಯನಗರದ 3ನೇ ಹಂತದ ಬಡಾವಣೆಯಲ್ಲಿ 19 ನಿವೇಶನಗಳನ್ನು ಹಂಚಿಕೆ ಮಾಡಿರುವುದಕ್ಕೆ ಮಾನದಂಡಗಳೇನು ಎಂದು ಪ್ರಶ್ನಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…