ಮೈಸೂರು: ಮುಡಾದ ಪ್ರಕರಣ ಸಿಎಂ ಸಿದ್ದರಾಮಯ್ಯ ವಿರುದ್ಧ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಮಧ್ಯೆಯೇ ಶಾಸಕ ಜಿ.ಟಿ.ದೇವೇಗೌಡರ ಸಂಬಂಧಿ ಮಹೇಂದ್ರ ಮುಡಾದಿಂದ 19 ನಿವೇಶನಗಳನ್ನು ಪಡೆದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರಿದ್ದಾರೆ.
ನಗರದಲ್ಲಿ ಇಂದು (ನ.16) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಜಿ.ಟಿ.ದೇವೇಗೌಡ ಅವರ ಸಹೋದರಿಯ ಮಗ ಮಹೇಂದ್ರ ಮುಡಾದಿಂದ 19 ನಿವೇಶನಗಳನ್ನು ಪಡೆದಿದ್ದಾರೆ. ಜಿಟಿ ದೇವೇಗೌಡರೇ ಈ ನಿವೇಶನಗಳನ್ನ ಅಕ್ರಮವಾಗಿ ನಿವೇಶನ ಕೊಡಿಸಿದ್ದಾರೆ. ಈ ನಿವೇಶನಗಳನ್ನು ಮುಡಾ ಯಾವಾಗ ವಶಪಡಿಸಿಕೊಂಡಿದೆ ಎಂಬ ಬಗ್ಗೆ ಮಾಹಿತಿ ನಿಖರವಾಗಿಲ್ಲ. ಈ ಭೂಮಿಯ ಮಾಲೀಕ ಮಹೇಂದ್ರ ಅಲ್ಲ ಎಂದು ಹೇಳಿದರು.
ಮಹೇಂದ್ರ ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ಅಕ್ರಮವಾಗಿ ಈ ಭೂಮಿಯನ್ನು ಪರಿಹಾರದ ಮೂಲಕ ಪಡೆದಿದ್ದಾರೆ. ನಿಜವಾಗಿಯೂ ಹೇಳಬೇಕೆಂದರೆ ಆ ವ್ಯಕ್ತಿಗೆ ದೇವನೂರು ಬಡಾವಣೆ ಸ್ಥಳದಲ್ಲಿ ಭೂಮಿಯೇ ಇಲ್ಲ. ಹೀಗಿರುವಾಗ ವಿಜಯನಗರದ 3ನೇ ಹಂತದ ಬಡಾವಣೆಯಲ್ಲಿ 19 ನಿವೇಶನಗಳನ್ನು ಹಂಚಿಕೆ ಮಾಡಿರುವುದಕ್ಕೆ ಮಾನದಂಡಗಳೇನು ಎಂದು ಪ್ರಶ್ನಿಸಿದ್ದಾರೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…