ಮೈಸೂರು

ಹಿಂದೂ ಮಹಿಳೆ ಶವ ಸಂಸ್ಕಾರಕ್ಕೆ ಸಹಾಯ ಮಾಡಿದ ಮುಸ್ಲಿಂ ಸಮುದಾಯ

ಮೈಸೂರು,: ದೇಶದಲ್ಲಿ ಇದೀಗ ಬೇಕಿರುವುದು ಐಕ್ಯತೆ ಹಾಗೂ ನಾವೆಲ್ಲ ಒಂದು ಎಂಬ ಭಾವನೆ. ಇದಕ್ಕೆ ಪೂರಕವಾದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಹಿಂದು-ಮುಸ್ಲಿಮರ ನಡುವೆ ಸೌರ್ಹಾದತೆ ಮೂಡುವಂತೆ ಮಾಡಿದೆ.

 
ಮೈಸೂರಿನ ಪುಲಿಕೇಶಿ ರಸ್ತೆಯ ಸುನ್ನಿ ಚೌಕದಲ್ಲಿ ಶಿವಮ್ಮ( ಕುಳ್ಳಿ) ಎಂಬ ಮಹಿಳೆ ತಡರಾತ್ರಿ ನಿಧನರಾಗಿದ್ದರು. ಇವರ ಅಂತ್ಯಸಂಸ್ಕಾರಕ್ಕೆ ಯಾರೊಬ್ಬರು ಕೂಡ ಮುಂದೆ ಬರಲಿಲ್ಲ. ಶಿವಮ್ಮರ ಬಂಧು ಬಾಂಧವರು ದೂರ ಉಳಿದರು. ಕೊನೆಗೆ ಶಿವಮ್ಮಳ ಅಂತಿಮ ಸಂಸ್ಕಾರಕ್ಕೆ ಮುಸ್ಲಿಂ ಬಾಂಧವರು ಹೆಗಲು ಕೊಟ್ಟು ನಾವೆಲ್ಲ ಒಂದೇ ಎಂಬ ಸಂದೇಶ ಸಾರಿದ್ದಾರೆ.

 

ಯಾವಾಗ ಶಿವಮ್ಮ ಅಂತ್ಯಸಂಸ್ಕಾರಕ್ಕೆ ಯಾರು ಬರಲಿಲ್ಲವೋ ಆಗ ಬಡಾವಣೆಯ ಮುಸ್ಲಿಂ ಬಾಂಧವರು ಮಾತುಕತೆ ನಡೆಸಿದರು. ಹಿಂದು ಸಂಪ್ರದಾಯದಂತೆ ಯಾವ ರೀತಿ ಪೂಜೆ-ಪುನಸ್ಕಾರ ಮಾಡಬೇಕು ಎಂಬುದನ್ನು ಚರ್ಚೆ ಮಾಡಿ ಇತರರಿಂದ ಕೇಳಿ ತಿಳಿದುಕೊಂಡರು. ಅಂತಿಮವಾಗಿ ಹಿಂದೂ ಮಹಿಳೆ ಅಂತ್ಯ ಸಂಸ್ಕಾರವನ್ನು ಸ್ಥಳೀಯರು ಹಿಂದೂ ಸಂಪ್ರದಾಯದಂತೆ ನೆರವೇರಿಸಿ, ಮಾನವೀಯತೆ ಮೆರೆದಿದ್ದಾರೆ.

ಜೋಡಿ ತೆಂಗಿನಮರದ ಸ್ಮಶಾನದಲ್ಲಿ ಹಿಂದೂ ಸಂಪ್ರದಾಯದಂತೆ ಮಾಜಿ ನಗರ ಪಾಲಿಕೆ ಸದಸ್ಯ ಸೋಹೆಲ್ ಬೇಗ್ ನೇತೃತ್ವದಲ್ಲಿ ಶವ ಸಂಸ್ಕಾರ ನಡೆಸಲಾಯಿತು. ಅಲ್ಲದೆ, ಕುಟುಂಬಕ್ಕೆ ಸಾಂತ್ವನ ಹೇಳಿರುವುದು ನಿಜಕ್ಕೂ ಶ್ಲಾಘನೀಯವಾಗಿತ್ತು. ಈ ಬಗ್ಗೆ ಮಾತನಾಡಿದ ಸೋಹೆಲ್ ಬೇಗ್, ನಿನ್ನೆ ರಾತ್ರಿಯಿಂದ ನಾವೇ ಮುಂದೆ ನಿಂತು ಶವಸಂಸ್ಕಾರ ಮಾಡಿದೆವು. ರಾಜ್ಯದ ಜನತೆಯಲ್ಲಿ ನಾನು ಮನವಿ ಮಾಡುವುದೆಂದರೆ ನಾವೆಲ್ಲರೂ ಒಂದೇ. ಹಿಂದು-ಮುಸ್ಲಿಂ ಎಂಬ ಬೇಧಭಾವ ಇರಬಾರದು. ಟಿಪ್ಪು ಜಯಂತಿ ದಿನ ನಾವು ಅನ್ನಸಂತರ್ಪಣೆ ಮಾಡಿದ್ದೆ. ಆ ವೇಳೆ ಎಲ್ಲಾ ಅಡುಗೆ ಕೆಲಸವನ್ನು ಅವರೇ ಮುಂದೆ ನಿಂತು ಮಾಡಿದ್ದರು ಎಂದು ಸ್ಮರಿಸಿಕೊಂಡರು.

 

andolana

Recent Posts

ಕುರ್ಚಿಗಾಗಿ ಜಾತಿ ಎಳೆದು ತಂದಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್‌

ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…

1 hour ago

ಹನೂರು| ಫೆ.25ರಂದು ವಾಂಗಾಳಿ ಅಮ್ಮನವರ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…

1 hour ago

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮತ್ತೆ ಆಸ್ಪತ್ರೆಗೆ ದಾಖಲು

ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್‌ ಪಕ್ಷದ ಮುಖ್ಯಸ್ಥ ಶರದ್‌ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶರದ್‌ ಪವಾರ್‌…

2 hours ago

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಶೀಘ್ರದಲ್ಲಿಯೇ ಬ್ಯಾನ್‌ ಆಗಲಿದೆ ಮೊಬೈಲ್?:‌ ಸಿಎಂ ಸಿದ್ದರಾಮಯ್ಯ ಸುಳಿವು

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಫೋನ್‌ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಚಿಂತನೆ ನಡೆಸಿದೆ.…

3 hours ago

ಎಐ ಇಂಪ್ಯಾಕ್ಟ್‌ ಶೃಂಗಸಭೆ ಒಂದು ಮಹತ್ವದ ತಿರುವು: 131ನೇ ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಸಂತಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…

3 hours ago

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

3 hours ago