ಮೈಸೂರು

ಹಿಂದೂ ಮಹಿಳೆ ಶವ ಸಂಸ್ಕಾರಕ್ಕೆ ಸಹಾಯ ಮಾಡಿದ ಮುಸ್ಲಿಂ ಸಮುದಾಯ

ಮೈಸೂರು,: ದೇಶದಲ್ಲಿ ಇದೀಗ ಬೇಕಿರುವುದು ಐಕ್ಯತೆ ಹಾಗೂ ನಾವೆಲ್ಲ ಒಂದು ಎಂಬ ಭಾವನೆ. ಇದಕ್ಕೆ ಪೂರಕವಾದ ಘಟನೆ ಮೈಸೂರಿನಲ್ಲಿ ನಡೆದಿದ್ದು, ಹಿಂದು-ಮುಸ್ಲಿಮರ ನಡುವೆ ಸೌರ್ಹಾದತೆ ಮೂಡುವಂತೆ ಮಾಡಿದೆ.

 
ಮೈಸೂರಿನ ಪುಲಿಕೇಶಿ ರಸ್ತೆಯ ಸುನ್ನಿ ಚೌಕದಲ್ಲಿ ಶಿವಮ್ಮ( ಕುಳ್ಳಿ) ಎಂಬ ಮಹಿಳೆ ತಡರಾತ್ರಿ ನಿಧನರಾಗಿದ್ದರು. ಇವರ ಅಂತ್ಯಸಂಸ್ಕಾರಕ್ಕೆ ಯಾರೊಬ್ಬರು ಕೂಡ ಮುಂದೆ ಬರಲಿಲ್ಲ. ಶಿವಮ್ಮರ ಬಂಧು ಬಾಂಧವರು ದೂರ ಉಳಿದರು. ಕೊನೆಗೆ ಶಿವಮ್ಮಳ ಅಂತಿಮ ಸಂಸ್ಕಾರಕ್ಕೆ ಮುಸ್ಲಿಂ ಬಾಂಧವರು ಹೆಗಲು ಕೊಟ್ಟು ನಾವೆಲ್ಲ ಒಂದೇ ಎಂಬ ಸಂದೇಶ ಸಾರಿದ್ದಾರೆ.

 

ಯಾವಾಗ ಶಿವಮ್ಮ ಅಂತ್ಯಸಂಸ್ಕಾರಕ್ಕೆ ಯಾರು ಬರಲಿಲ್ಲವೋ ಆಗ ಬಡಾವಣೆಯ ಮುಸ್ಲಿಂ ಬಾಂಧವರು ಮಾತುಕತೆ ನಡೆಸಿದರು. ಹಿಂದು ಸಂಪ್ರದಾಯದಂತೆ ಯಾವ ರೀತಿ ಪೂಜೆ-ಪುನಸ್ಕಾರ ಮಾಡಬೇಕು ಎಂಬುದನ್ನು ಚರ್ಚೆ ಮಾಡಿ ಇತರರಿಂದ ಕೇಳಿ ತಿಳಿದುಕೊಂಡರು. ಅಂತಿಮವಾಗಿ ಹಿಂದೂ ಮಹಿಳೆ ಅಂತ್ಯ ಸಂಸ್ಕಾರವನ್ನು ಸ್ಥಳೀಯರು ಹಿಂದೂ ಸಂಪ್ರದಾಯದಂತೆ ನೆರವೇರಿಸಿ, ಮಾನವೀಯತೆ ಮೆರೆದಿದ್ದಾರೆ.

ಜೋಡಿ ತೆಂಗಿನಮರದ ಸ್ಮಶಾನದಲ್ಲಿ ಹಿಂದೂ ಸಂಪ್ರದಾಯದಂತೆ ಮಾಜಿ ನಗರ ಪಾಲಿಕೆ ಸದಸ್ಯ ಸೋಹೆಲ್ ಬೇಗ್ ನೇತೃತ್ವದಲ್ಲಿ ಶವ ಸಂಸ್ಕಾರ ನಡೆಸಲಾಯಿತು. ಅಲ್ಲದೆ, ಕುಟುಂಬಕ್ಕೆ ಸಾಂತ್ವನ ಹೇಳಿರುವುದು ನಿಜಕ್ಕೂ ಶ್ಲಾಘನೀಯವಾಗಿತ್ತು. ಈ ಬಗ್ಗೆ ಮಾತನಾಡಿದ ಸೋಹೆಲ್ ಬೇಗ್, ನಿನ್ನೆ ರಾತ್ರಿಯಿಂದ ನಾವೇ ಮುಂದೆ ನಿಂತು ಶವಸಂಸ್ಕಾರ ಮಾಡಿದೆವು. ರಾಜ್ಯದ ಜನತೆಯಲ್ಲಿ ನಾನು ಮನವಿ ಮಾಡುವುದೆಂದರೆ ನಾವೆಲ್ಲರೂ ಒಂದೇ. ಹಿಂದು-ಮುಸ್ಲಿಂ ಎಂಬ ಬೇಧಭಾವ ಇರಬಾರದು. ಟಿಪ್ಪು ಜಯಂತಿ ದಿನ ನಾವು ಅನ್ನಸಂತರ್ಪಣೆ ಮಾಡಿದ್ದೆ. ಆ ವೇಳೆ ಎಲ್ಲಾ ಅಡುಗೆ ಕೆಲಸವನ್ನು ಅವರೇ ಮುಂದೆ ನಿಂತು ಮಾಡಿದ್ದರು ಎಂದು ಸ್ಮರಿಸಿಕೊಂಡರು.

 

andolana

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

2 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

5 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

5 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

5 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

5 hours ago