ಮೈಸೂರು : ಮೂರು ದಶಕಗಳಿಂದ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ನನಗೆ ಸಿಗಬೇಕಾದ ಮಾನ್ಯತೆ ಗೌರವ ನಾನಿದ್ದ ಪಕ್ಷದಿಂದ ಸಿಗಲಿಲ್ಲ ಎಂದು ಹೆಚ್.ವಿ.ರಾಜೀವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ಸುಮಾರು ಮೂರು ದಶಕಗಳಿಂದ ಸಮಾಜದಲ್ಲಿ ನಿರಂತರವಾಗಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಬಂದ ನನಗೆ ನೀಡಬೇಕಾದ ಗೌರವ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪರಿಸರ, ಸ್ವಚ್ಛ ಭಾರತ, ಸಾಮಾಜಿಕ ಕ್ಷೇತ್ರದ ಕೆಲಸ, ಶಿಕ್ಷಣ ಕ್ಷೇತ್ರ, ಧಾರ್ಮಿಕ ಕ್ಷೇತ್ರ ಹಾಗೂ ರಾಜಕೀಯ ಸಂಘಟನೆಯ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದೇನೆ.
ಆದರೆ, ಇಷ್ಟೆಲ್ಲಾ ಕೆಲಸ ಮಾಡಿದರೂ ನಾನಿದ್ದ ಪಕ್ಷ ನನಗೆ ನೀಡಬೇಕಾದ ಗೌರವ ನೀಡಲಿಲ್ಲ ಎಂಬ ನೋವು ನನಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ನುಡಿದಂತೆ ನಡೆವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ : ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಸಮಾಧನ, ನೆಮ್ಮದಿಯಿಂದ ಬದುಕುವ ಯೋಜನೆ ನೀಡುವುದು ಸರ್ಕಾರದ ಕೆಲಸ. ತವರು ಜಿಲ್ಲೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನೆಲ್ಲ ಘೋಷಣೆ ಮಾಡಿದ್ದರೋ ಅದನ್ನೆಲ್ಲಾ ಮಾಡಿದ್ದಾರೆ ಎಂದು ಹೆಚ್.ವಿ.ರಾಜೀವ್ ತಿಳಿಸಿದರು.
ನುಡಿದಂತೆ ನಡೆವ, ಹೇಳಿದಂತೆ ನಡೆವ ಏಕಮೇವ ಮುಖ್ಯಮಂತ್ರಿ ಎಂದರೆ ಅದುಉ ಸಿದ್ದರಾಮಯ್ಯ ಅವರಲ್ಲಿ ನೀಡಲು ಸಾಧ್ಯವಾಯಿತು ಎಂದರು.
ಕಾಂಗ್ರೆಸ್ ಸೇರಲು ಪಂಚ ಗ್ಯಾರೆಂಟಿ ಕಾರಣ: ಕಟ್ಟಕಡೆಯ ಬಡವ ತನ್ನ ಮನೆಯಲ್ಲಿ ನೆಮ್ಮದಿಯಿಂದ ಊಟ ಮಾಡಿ, ಆತಂಕ ಇಲ್ಲದ ಬದುಕಾಗಬೇಕು ಎಂಬ ಚಿಂತನೆ ಮತ್ತು ಯೋಜನೆ ಬಗ್ಗೆ ಹೇಳಿದ್ದಾಗ ಎಲ್ಲರೂ ಟೀಕೆ ಮಾಡಿದ್ದರು.
ಆದರೆ ಸಿದ್ದರಾಮಯ್ಯ ಅವರು ಅದನ್ನೇಲ್ಲಾ ಬದಿಗಿಟ್ಟು ಎಲ್ಲಾ ಐದು ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ರೀತಿ ನನ್ನ ಹೃದಯಕ್ಕೆ ಮುಟ್ಟಿ, ಬಡವರ ಧ್ವನಿಯಗಿರುವಂತ ಪಕ್ಷ ಹಾಗೂ ಸರ್ಕಾರದಲ್ಲಿ ನನ್ನ ಸೇವೆ ಮಾಡಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಸೇರಿದ್ದೇನೆ ಎಂದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…