ಮೈಸೂರು

ನಾನಿದ್ದ ಪಕ್ಷ ನನಗೆ ನೀಡಬೇಕಾದ ಗೌರವ ನೀಡಲಿಲ್ಲ : ಹೆಚ್‌.ವಿ.ರಾಜೀವ್‌

ಮೈಸೂರು : ಮೂರು ದಶಕಗಳಿಂದ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ನನಗೆ ಸಿಗಬೇಕಾದ ಮಾನ್ಯತೆ ಗೌರವ ನಾನಿದ್ದ ಪಕ್ಷದಿಂದ ಸಿಗಲಿಲ್ಲ ಎಂದು ಹೆಚ್‌.ವಿ.ರಾಜೀವ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ಸುಮಾರು ಮೂರು ದಶಕಗಳಿಂದ ಸಮಾಜದಲ್ಲಿ ನಿರಂತರವಾಗಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಬಂದ ನನಗೆ ನೀಡಬೇಕಾದ ಗೌರವ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪರಿಸರ, ಸ್ವಚ್ಛ ಭಾರತ, ಸಾಮಾಜಿಕ ಕ್ಷೇತ್ರದ ಕೆಲಸ, ಶಿಕ್ಷಣ ಕ್ಷೇತ್ರ, ಧಾರ್ಮಿಕ ಕ್ಷೇತ್ರ ಹಾಗೂ ರಾಜಕೀಯ ಸಂಘಟನೆಯ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದೇನೆ.

ಆದರೆ, ಇಷ್ಟೆಲ್ಲಾ ಕೆಲಸ ಮಾಡಿದರೂ ನಾನಿದ್ದ ಪಕ್ಷ ನನಗೆ ನೀಡಬೇಕಾದ ಗೌರವ ನೀಡಲಿಲ್ಲ ಎಂಬ ನೋವು ನನಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನುಡಿದಂತೆ ನಡೆವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ : ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಸಮಾಧನ, ನೆಮ್ಮದಿಯಿಂದ ಬದುಕುವ ಯೋಜನೆ ನೀಡುವುದು ಸರ್ಕಾರದ ಕೆಲಸ. ತವರು ಜಿಲ್ಲೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನೆಲ್ಲ ಘೋಷಣೆ ಮಾಡಿದ್ದರೋ ಅದನ್ನೆಲ್ಲಾ ಮಾಡಿದ್ದಾರೆ ಎಂದು ಹೆಚ್‌.ವಿ.ರಾಜೀವ್‌ ತಿಳಿಸಿದರು.

ನುಡಿದಂತೆ ನಡೆವ, ಹೇಳಿದಂತೆ ನಡೆವ ಏಕಮೇವ ಮುಖ್ಯಮಂತ್ರಿ ಎಂದರೆ ಅದುಉ ಸಿದ್ದರಾಮಯ್ಯ ಅವರಲ್ಲಿ ನೀಡಲು ಸಾಧ್ಯವಾಯಿತು ಎಂದರು.

ಕಾಂಗ್ರೆಸ್‌ ಸೇರಲು ಪಂಚ ಗ್ಯಾರೆಂಟಿ ಕಾರಣ: ಕಟ್ಟಕಡೆಯ ಬಡವ ತನ್ನ ಮನೆಯಲ್ಲಿ ನೆಮ್ಮದಿಯಿಂದ ಊಟ ಮಾಡಿ, ಆತಂಕ ಇಲ್ಲದ ಬದುಕಾಗಬೇಕು ಎಂಬ ಚಿಂತನೆ ಮತ್ತು ಯೋಜನೆ ಬಗ್ಗೆ ಹೇಳಿದ್ದಾಗ ಎಲ್ಲರೂ ಟೀಕೆ ಮಾಡಿದ್ದರು.

ಆದರೆ ಸಿದ್ದರಾಮಯ್ಯ ಅವರು ಅದನ್ನೇಲ್ಲಾ ಬದಿಗಿಟ್ಟು ಎಲ್ಲಾ ಐದು ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ರೀತಿ ನನ್ನ ಹೃದಯಕ್ಕೆ ಮುಟ್ಟಿ, ಬಡವರ ಧ್ವನಿಯಗಿರುವಂತ ಪಕ್ಷ ಹಾಗೂ ಸರ್ಕಾರದಲ್ಲಿ ನನ್ನ ಸೇವೆ ಮಾಡಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್‌ ಸೇರಿದ್ದೇನೆ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

2 hours ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

2 hours ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

2 hours ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

3 hours ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

3 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

3 hours ago