ಮೈಸೂರು

ನಾನಿದ್ದ ಪಕ್ಷ ನನಗೆ ನೀಡಬೇಕಾದ ಗೌರವ ನೀಡಲಿಲ್ಲ : ಹೆಚ್‌.ವಿ.ರಾಜೀವ್‌

ಮೈಸೂರು : ಮೂರು ದಶಕಗಳಿಂದ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ನನಗೆ ಸಿಗಬೇಕಾದ ಮಾನ್ಯತೆ ಗೌರವ ನಾನಿದ್ದ ಪಕ್ಷದಿಂದ ಸಿಗಲಿಲ್ಲ ಎಂದು ಹೆಚ್‌.ವಿ.ರಾಜೀವ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಅವರು, ಸುಮಾರು ಮೂರು ದಶಕಗಳಿಂದ ಸಮಾಜದಲ್ಲಿ ನಿರಂತರವಾಗಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಬಂದ ನನಗೆ ನೀಡಬೇಕಾದ ಗೌರವ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಪರಿಸರ, ಸ್ವಚ್ಛ ಭಾರತ, ಸಾಮಾಜಿಕ ಕ್ಷೇತ್ರದ ಕೆಲಸ, ಶಿಕ್ಷಣ ಕ್ಷೇತ್ರ, ಧಾರ್ಮಿಕ ಕ್ಷೇತ್ರ ಹಾಗೂ ರಾಜಕೀಯ ಸಂಘಟನೆಯ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದೇನೆ.

ಆದರೆ, ಇಷ್ಟೆಲ್ಲಾ ಕೆಲಸ ಮಾಡಿದರೂ ನಾನಿದ್ದ ಪಕ್ಷ ನನಗೆ ನೀಡಬೇಕಾದ ಗೌರವ ನೀಡಲಿಲ್ಲ ಎಂಬ ನೋವು ನನಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ನುಡಿದಂತೆ ನಡೆವ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ : ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಸಮಾಧನ, ನೆಮ್ಮದಿಯಿಂದ ಬದುಕುವ ಯೋಜನೆ ನೀಡುವುದು ಸರ್ಕಾರದ ಕೆಲಸ. ತವರು ಜಿಲ್ಲೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನೆಲ್ಲ ಘೋಷಣೆ ಮಾಡಿದ್ದರೋ ಅದನ್ನೆಲ್ಲಾ ಮಾಡಿದ್ದಾರೆ ಎಂದು ಹೆಚ್‌.ವಿ.ರಾಜೀವ್‌ ತಿಳಿಸಿದರು.

ನುಡಿದಂತೆ ನಡೆವ, ಹೇಳಿದಂತೆ ನಡೆವ ಏಕಮೇವ ಮುಖ್ಯಮಂತ್ರಿ ಎಂದರೆ ಅದುಉ ಸಿದ್ದರಾಮಯ್ಯ ಅವರಲ್ಲಿ ನೀಡಲು ಸಾಧ್ಯವಾಯಿತು ಎಂದರು.

ಕಾಂಗ್ರೆಸ್‌ ಸೇರಲು ಪಂಚ ಗ್ಯಾರೆಂಟಿ ಕಾರಣ: ಕಟ್ಟಕಡೆಯ ಬಡವ ತನ್ನ ಮನೆಯಲ್ಲಿ ನೆಮ್ಮದಿಯಿಂದ ಊಟ ಮಾಡಿ, ಆತಂಕ ಇಲ್ಲದ ಬದುಕಾಗಬೇಕು ಎಂಬ ಚಿಂತನೆ ಮತ್ತು ಯೋಜನೆ ಬಗ್ಗೆ ಹೇಳಿದ್ದಾಗ ಎಲ್ಲರೂ ಟೀಕೆ ಮಾಡಿದ್ದರು.

ಆದರೆ ಸಿದ್ದರಾಮಯ್ಯ ಅವರು ಅದನ್ನೇಲ್ಲಾ ಬದಿಗಿಟ್ಟು ಎಲ್ಲಾ ಐದು ಯೋಜನೆಗಳನ್ನು ಅನುಷ್ಠಾನಕ್ಕೆ ತಂದ ರೀತಿ ನನ್ನ ಹೃದಯಕ್ಕೆ ಮುಟ್ಟಿ, ಬಡವರ ಧ್ವನಿಯಗಿರುವಂತ ಪಕ್ಷ ಹಾಗೂ ಸರ್ಕಾರದಲ್ಲಿ ನನ್ನ ಸೇವೆ ಮಾಡಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್‌ ಸೇರಿದ್ದೇನೆ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago