ಮೈಸೂರು

ರಸ್ತೆಯಲ್ಲಿ ನಿಲ್ಲದ ಪುಂಡರ ಹಾವಳಿ: ಸ್ಟಂಟ್ಸ್‌ ಮಾಡುತ್ತಿದ್ದ ಯುವಕನನ್ನು ಬಂಧಿಸಿದ ಪೊಲೀಸರು

ಮೈಸೂರು: ಮೈಸೂರು-ಹುಣಸೂರು ಮುಖ್ಯ ರಸ್ತೆಯಲ್ಲಿ ಜನರಿಗೆ ಭೀತಿ ಸೃಷ್ಟಿಸುವಂತೆ ಸ್ಕೂಟರ್‌ನಲ್ಲಿ ಅಪಾಯಕಾರಿ ಸ್ಟಂಟ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದ ಯುವಕನನ್ನು ಇಲವಾಲ ಪೊಲೀಸ್‌ ಠಾಣೆಯ ಪಿಎಸ್‌ಐ ಬಿ.ಆರ್.ಮಹೇಶ್‌ ಕುಮಾರ್‌ ಅವರು ಬಂಧಿಸಿದ್ದಾರೆ.

ಪೊಲೀಸರು ಬಂಧಿಸಿದ ಯುವಕನನ್ನು ಮೈಸೂರಿನ ಮೇಟಗಳ್ಳಿಯ ಬಡಾವಣೆಯ ಏಕಲವ್ಯ ನಿವಾಸಿ ಪ್ರಜ್ವಲ್‌(22) ಎಂದು ಗುರುತಿಸಲಾಗಿದೆ. ಈತನನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ವಿಚಾರಗಳನ್ನು ಅಪ್ ಲೋಡ್ ಮಾಡುವ ಖಾತೆಗಳ ಮೇಲೆ ನಿಗಾ ಇಡುವ ಜವಾಬ್ದಾರಿ ಹೊತ್ತ ಪೊಲೀಸ್ ಸಿಬ್ಬಂದಿ ಅಭಿಷೇಕ್ ಅವರು, ಪ್ರಜ್ವಲ್‌ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್‌ ಮಾಡಿರುವ ಫೋಟೋಗಳನ್ನು ಪತ್ತೆ ಹಚ್ಚಿದ್ದರು. ಈ ಘಟನೆ ಇಲವಾಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಠಾಣೆಯ ಪಿಎಸ್‌ಐ ಅಧಿಕಾರಿಯ ಗಮನಕ್ಕೆ ತಂದಿದ್ದರು.

ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸ್‌ ಅಧಿಕಾರಿಗಳು ಪೊಲೀಸರು, ಹೋಂಡಾ ಡಿಯೋ ವಾಹನ ನೋಂದಣಿ ಸಂಖ್ಯೆ KA-12 S5574 ಅನ್ನು ವಶಕ್ಕೆ ಪಡೆದು, ಮುಖ್ಯ ರಸ್ತೆಯಲ್ಲಿ ವ್ಹೀಲಿಂಗ್‌ ಮಾಡುತ್ತಾ ಅಪಾಯಕಾರಿ ಸ್ಟಂಟ್ಸ್‌ ಮಾಡುತ್ತಿದ್ದ ಪ್ರಜ್ವಲ್‌ನನ್ನು ಬಂಧಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನಟ ಪುನೀತ್‌ 50ನೇ ಹುಟ್ಟು ಹಬ್ಬ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

ಬೆಂಗಳೂರು: ಇಂದು ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ಅವರ 50ನೇ ವರ್ಷದ ಜನ್ಮದಿನ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿನ ಅಪ್ಪು ಸಮಾಧಿಗೆ…

15 mins ago

ಮಳೆಯ ನೆನಪು. . . ಮನದ ಕಡಲು

‘ಆಂದೋಲನ’ ಸಂದರ್ಶನದಲ್ಲಿ ಯೋಗರಾಜ್ ಭಟ್ ಮನದ ಮಾತು ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಕನ್ನಡ ಸಿನಿ ಪ್ರೇಕ್ಷಕರನ್ನು ‘ಮುಂಗಾರು ಮಳೆ’ಯಲ್ಲಿ…

60 mins ago

ತಂತ್ರಜ್ಞಾನದ ಬಳಕೆ; ʼಸಕಾಲದಲ್ಲಿʼ ದಾಖಲೆ ಲಭ್ಯ

ಸಾಲಿಗ್ರಾಮ ತಾಲ್ಲೂಕಿನ ಮಿರ್ಲೆ ನಾಡಕಚೇರಿಯ ಕಾರ್ಯವೈಖರಿಗೆ ಮೆಚ್ಚುಗೆ ಕೆ.ಟಿ.ಮೋಹನ್‌ ಕುಮಾರ್‌ ಸಾಲಿಗ್ರಾಮ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿದ್ದರೂ…

1 hour ago

ಲೋಡ್‌ ಶೆಡ್ಡಿಂಗ್‌ ಬರೆಗೆ ಹೈರಾಣಾದ ಜನ..!

ವಿದ್ಯುತ್ ಕಣ್ಣಾಮುಚ್ಚಾಲೆಗೆ ವಿದ್ಯಾರ್ಥಿಗಳು ಕಂಗಾಲು; ಕುಡಿಯುವ ನೀರಿಗೂ ಹಾಹಾಕಾರ ಕೃಷ್ಣ ಸಿದ್ದಾಪುರ ಸಿದ್ದಾಪುರ: ನಿರಂತರ ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದ ಜನತೆ…

2 hours ago

ಶಾಂತಿಯ ತೋಟದಲ್ಲಿ ವಿಷ ಬೀಜ ಬಿತ್ತುವ ಕೆಲಸ: ಬಿವೈವಿ ಆರೋಪ

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್‌ನವರೇ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ…

2 hours ago

ಮಾಹಿತಿ ಇದ್ರೆ ಸರ್ಕಾರಕ್ಕೆ ನೀಡಲಿ: ಯತ್ನಾಳ್‌ಗೆ ಸಚಿವ ರಾಮಲಿಂಗರೆಡ್ಡಿ ಟಾಂಗ್‌

ಬೆಂಗಳೂರು: ನಟಿ ರನ್ಯಾಗೆ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಚಿವರ ಸಹಕಾರವಿದೆ ಎಂಬ ಯತ್ನಾಳ್‌ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ…

2 hours ago