ಮೈಸೂರು

ರಸ್ತೆಯಲ್ಲಿ ನಿಲ್ಲದ ಪುಂಡರ ಹಾವಳಿ: ಸ್ಟಂಟ್ಸ್‌ ಮಾಡುತ್ತಿದ್ದ ಯುವಕನನ್ನು ಬಂಧಿಸಿದ ಪೊಲೀಸರು

ಮೈಸೂರು: ಮೈಸೂರು-ಹುಣಸೂರು ಮುಖ್ಯ ರಸ್ತೆಯಲ್ಲಿ ಜನರಿಗೆ ಭೀತಿ ಸೃಷ್ಟಿಸುವಂತೆ ಸ್ಕೂಟರ್‌ನಲ್ಲಿ ಅಪಾಯಕಾರಿ ಸ್ಟಂಟ್ಸ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದ ಯುವಕನನ್ನು ಇಲವಾಲ ಪೊಲೀಸ್‌ ಠಾಣೆಯ ಪಿಎಸ್‌ಐ ಬಿ.ಆರ್.ಮಹೇಶ್‌ ಕುಮಾರ್‌ ಅವರು ಬಂಧಿಸಿದ್ದಾರೆ.

ಪೊಲೀಸರು ಬಂಧಿಸಿದ ಯುವಕನನ್ನು ಮೈಸೂರಿನ ಮೇಟಗಳ್ಳಿಯ ಬಡಾವಣೆಯ ಏಕಲವ್ಯ ನಿವಾಸಿ ಪ್ರಜ್ವಲ್‌(22) ಎಂದು ಗುರುತಿಸಲಾಗಿದೆ. ಈತನನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ವಿಚಾರಗಳನ್ನು ಅಪ್ ಲೋಡ್ ಮಾಡುವ ಖಾತೆಗಳ ಮೇಲೆ ನಿಗಾ ಇಡುವ ಜವಾಬ್ದಾರಿ ಹೊತ್ತ ಪೊಲೀಸ್ ಸಿಬ್ಬಂದಿ ಅಭಿಷೇಕ್ ಅವರು, ಪ್ರಜ್ವಲ್‌ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್‌ ಮಾಡಿರುವ ಫೋಟೋಗಳನ್ನು ಪತ್ತೆ ಹಚ್ಚಿದ್ದರು. ಈ ಘಟನೆ ಇಲವಾಲ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಠಾಣೆಯ ಪಿಎಸ್‌ಐ ಅಧಿಕಾರಿಯ ಗಮನಕ್ಕೆ ತಂದಿದ್ದರು.

ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸ್‌ ಅಧಿಕಾರಿಗಳು ಪೊಲೀಸರು, ಹೋಂಡಾ ಡಿಯೋ ವಾಹನ ನೋಂದಣಿ ಸಂಖ್ಯೆ KA-12 S5574 ಅನ್ನು ವಶಕ್ಕೆ ಪಡೆದು, ಮುಖ್ಯ ರಸ್ತೆಯಲ್ಲಿ ವ್ಹೀಲಿಂಗ್‌ ಮಾಡುತ್ತಾ ಅಪಾಯಕಾರಿ ಸ್ಟಂಟ್ಸ್‌ ಮಾಡುತ್ತಿದ್ದ ಪ್ರಜ್ವಲ್‌ನನ್ನು ಬಂಧಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಅಮೆರಿಕ ಎದುರು 10ಷರತ್ತು ಮುಂದಿಟ್ಟಿ ಇರಾನ್ ; ಷರತ್ತು ಒಪ್ಪಿಕೊಳ್ಳುತ್ತಾ ಟ್ರಂಪ್‌ ಆಡಳಿತ?

ಟೆಹ್ರಾನ್‌ : ಅಮೆರಿಕಾ ಮತ್ತು ಇರಾನ್ ನಡುವೆ ಎರಡು ವಾರಗಳ ತಾತ್ಕಾಲಿಕ ಸಮರ ವಿರಾಮಕ್ಕೆ ಒಪ್ಪಂದವಾಗಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್…

1 hour ago

ಓದುಗರ ಪತ್ರ | ಬಸವರಾಜ ಬೊಮ್ಮಾಯಿ ನಿರ್ಧಾರ ಸ್ವಾಗತಾರ್ಹ

ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…

2 hours ago

ಓದುಗರ ಪತ್ರ | ಅಮಾನವೀಯ ಲಿಫ್ಟ್ ಸಂಸ್ಕೃತಿ ಅಂತ್ಯವಾಗಲಿ

ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…

2 hours ago

ಓದುಗರ ಪತ್ರ | ಅಂಚೆ ಕಚೇರಿಗಳು ಜನ ಸ್ನೇಹಿಯಾಗಲಿ

ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…

2 hours ago

ಜಾನಪದ ಸಿರಿ ಅನಾವರಣಗೊಳಿಸಿದ ಗ್ರಾಮೀಣ ಕಲೆಗಳ ಪ್ರದರ್ಶನ

ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…

2 hours ago

ʻಜಗುಲಿಯಿಂದ ಜಗತ್ತಿನೆಡೆಗೆʼ ಕನಸು ಕಂಡ ಬಿ.ರಾಮಕೃಷ್ಣ

ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…

2 hours ago