ಮೈಸೂರು: ಮೈಸೂರು-ಹುಣಸೂರು ಮುಖ್ಯ ರಸ್ತೆಯಲ್ಲಿ ಜನರಿಗೆ ಭೀತಿ ಸೃಷ್ಟಿಸುವಂತೆ ಸ್ಕೂಟರ್ನಲ್ಲಿ ಅಪಾಯಕಾರಿ ಸ್ಟಂಟ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ಯುವಕನನ್ನು ಇಲವಾಲ ಪೊಲೀಸ್ ಠಾಣೆಯ ಪಿಎಸ್ಐ ಬಿ.ಆರ್.ಮಹೇಶ್ ಕುಮಾರ್ ಅವರು ಬಂಧಿಸಿದ್ದಾರೆ.
ಪೊಲೀಸರು ಬಂಧಿಸಿದ ಯುವಕನನ್ನು ಮೈಸೂರಿನ ಮೇಟಗಳ್ಳಿಯ ಬಡಾವಣೆಯ ಏಕಲವ್ಯ ನಿವಾಸಿ ಪ್ರಜ್ವಲ್(22) ಎಂದು ಗುರುತಿಸಲಾಗಿದೆ. ಈತನನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ವಿಚಾರಗಳನ್ನು ಅಪ್ ಲೋಡ್ ಮಾಡುವ ಖಾತೆಗಳ ಮೇಲೆ ನಿಗಾ ಇಡುವ ಜವಾಬ್ದಾರಿ ಹೊತ್ತ ಪೊಲೀಸ್ ಸಿಬ್ಬಂದಿ ಅಭಿಷೇಕ್ ಅವರು, ಪ್ರಜ್ವಲ್ ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿರುವ ಫೋಟೋಗಳನ್ನು ಪತ್ತೆ ಹಚ್ಚಿದ್ದರು. ಈ ಘಟನೆ ಇಲವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಠಾಣೆಯ ಪಿಎಸ್ಐ ಅಧಿಕಾರಿಯ ಗಮನಕ್ಕೆ ತಂದಿದ್ದರು.
ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸ್ ಅಧಿಕಾರಿಗಳು ಪೊಲೀಸರು, ಹೋಂಡಾ ಡಿಯೋ ವಾಹನ ನೋಂದಣಿ ಸಂಖ್ಯೆ KA-12 S5574 ಅನ್ನು ವಶಕ್ಕೆ ಪಡೆದು, ಮುಖ್ಯ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಾ ಅಪಾಯಕಾರಿ ಸ್ಟಂಟ್ಸ್ ಮಾಡುತ್ತಿದ್ದ ಪ್ರಜ್ವಲ್ನನ್ನು ಬಂಧಿಸಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…