ಮೈಸೂರು: ಮೈಸೂರು-ಹುಣಸೂರು ಮುಖ್ಯ ರಸ್ತೆಯಲ್ಲಿ ಜನರಿಗೆ ಭೀತಿ ಸೃಷ್ಟಿಸುವಂತೆ ಸ್ಕೂಟರ್ನಲ್ಲಿ ಅಪಾಯಕಾರಿ ಸ್ಟಂಟ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ಯುವಕನನ್ನು ಇಲವಾಲ ಪೊಲೀಸ್ ಠಾಣೆಯ ಪಿಎಸ್ಐ ಬಿ.ಆರ್.ಮಹೇಶ್ ಕುಮಾರ್ ಅವರು ಬಂಧಿಸಿದ್ದಾರೆ.
ಪೊಲೀಸರು ಬಂಧಿಸಿದ ಯುವಕನನ್ನು ಮೈಸೂರಿನ ಮೇಟಗಳ್ಳಿಯ ಬಡಾವಣೆಯ ಏಕಲವ್ಯ ನಿವಾಸಿ ಪ್ರಜ್ವಲ್(22) ಎಂದು ಗುರುತಿಸಲಾಗಿದೆ. ಈತನನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ವಿಚಾರಗಳನ್ನು ಅಪ್ ಲೋಡ್ ಮಾಡುವ ಖಾತೆಗಳ ಮೇಲೆ ನಿಗಾ ಇಡುವ ಜವಾಬ್ದಾರಿ ಹೊತ್ತ ಪೊಲೀಸ್ ಸಿಬ್ಬಂದಿ ಅಭಿಷೇಕ್ ಅವರು, ಪ್ರಜ್ವಲ್ ಇನ್ಸ್ಟಾಗ್ರಾಮ್ನಲ್ಲಿ ಅಪ್ಲೋಡ್ ಮಾಡಿರುವ ಫೋಟೋಗಳನ್ನು ಪತ್ತೆ ಹಚ್ಚಿದ್ದರು. ಈ ಘಟನೆ ಇಲವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದರಿಂದ ಠಾಣೆಯ ಪಿಎಸ್ಐ ಅಧಿಕಾರಿಯ ಗಮನಕ್ಕೆ ತಂದಿದ್ದರು.
ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸ್ ಅಧಿಕಾರಿಗಳು ಪೊಲೀಸರು, ಹೋಂಡಾ ಡಿಯೋ ವಾಹನ ನೋಂದಣಿ ಸಂಖ್ಯೆ KA-12 S5574 ಅನ್ನು ವಶಕ್ಕೆ ಪಡೆದು, ಮುಖ್ಯ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಾ ಅಪಾಯಕಾರಿ ಸ್ಟಂಟ್ಸ್ ಮಾಡುತ್ತಿದ್ದ ಪ್ರಜ್ವಲ್ನನ್ನು ಬಂಧಿಸಿದ್ದಾರೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…