ನಂಜನಗೂಡು : ಕಾಡಿನಿಂದ ತಪ್ಪಿಸಿಕೊಂಡು ಬಂದು, ನಾಲೆಗೆ ಬಿದ್ದು ಮೇಲಕ್ಕೆ ಬರಲಾಗದೆ ಪರದಾಡುತ್ತಿದ್ದ ಜಿಂಕೆಯನ್ನು ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ನಂಜನಗೂಡು ತಾಲೂಕಿನ ಕಿರುಗುಂದ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಲೆಯಲ್ಲಿ ನೀರು ಕುಡಿಯುತ್ತಿದ್ದ ವೇಳೆ ನಾಯಿಗಳು ಅಟ್ಟಾಡಿಸಿಕೊಂಡು ಬಂದಿವೆ. ಈ ಸಮಯದಲ್ಲಿ ನಾಯಿಗಳಿಂದ ಜಿಂಕೆ ತಪ್ಪಿಸಿಕೊಳ್ಳಲು ನಾಲೆಗೆ ಬಿದ್ದಿದೆ. ಸುಮಾರು ಎಂಟು ವರ್ಷದ ಗಂಡು ಜಿಂಕೆಯಾಗಿದ್ದು, ನಾಲೆಯಲ್ಲಿ ತೇಲಿಕೊಂಡು ಬರುತ್ತಿರುವುದನ್ನು ಕಂಡ ಬಿಳಿಗೆರೆ ಪೊಲೀಸ್ ಠಾಣೆಯ ಪಿಎಸ್ಐ ಕರಿಬಸಪ್ಪ. ಜಿಂಕೆಯನ್ನು ಸುರಕ್ಷಿತವಾಗಿ ಗ್ರಾಮದ ಯುವಕರ ಸಹಾಯದೊಂದಿಗೆ ರಕ್ಷಣೆ ಮಾಡಿದ್ದಾರೆ.
ಜಿಂಕೆಯ ಹಿಂಬದಿಯ ಕಾಲುಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಗುರುತು ಕಂಡು ಬಂದಿದೆ ನಂಜನಗೂಡಿನ ಪಶು ಇಲಾಖೆಯಲ್ಲಿ ಚಿಕಿತ್ಸೆ ನೀಡಿ ಮತ್ತೆ ಕಾಡಿಗೆ ಬಿಡಲಾಗುವುದು ಎಂದು ನಂಜನಗೂಡಿನ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…